ಬ್ರೇಕಿಂಗ್ ನ್ಯೂಸ್
30-10-20 09:54 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 30 : ತುಳು ಚಿತ್ರನಟ, ರೌಡಿ ಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ವೆಂಕಪ್ಪ ಯಾನೆ ವೆಂಕಟೇಶ್, ಪಬ್ಬು ಯಾನೆ ಪ್ರದೀಪ್ ಹಾಗೂ ಬಂಡಾಡಿ ಶರೀಫ್ ಬಂಧಿತ ಆರೋಪಿಗಳು. ಪ್ರಕರಣದ ಪ್ರಮುಖ ಆರೋಪಿಗಳಾದ ಸತೀಶ್ ಕುಲಾಲ್ ಮತ್ತು ಗಿರೀಶ್ ಎಂಬವರನ್ನು ಅಕ್ಟೋಬರ್ 25ರಂದು ಬಂಧಿಸಲಾಗಿತ್ತು. ಇವರನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದು ಕೊಲೆ ಕೃತ್ಯದ ಕಾರಣ ಮತ್ತು ಬೆಂಬಲ ನೀಡಿದವರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅವರು ನೀಡಿದ ಮಾಹಿತಿ ಆಧರಿಸಿ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಕೂಡ ಕೋರ್ಟಿಗೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಕೊಲೆಯಾದ ದಿನ ಸುರೇಂದ್ರ ಬಂಟ್ವಾಳ್ ಮನೆಯಲ್ಲಿ ಒಂದು ಕೋಟಿ ರೂಪಾಯಿ ನಗದು ಇತ್ತು. ಮೈಯಲ್ಲಿ ಒಂದು ಕೆಜಿಯಷ್ಟು ಬಂಗಾರ ಇತ್ತು. ಹಣಕ್ಕಾಗಿಯೇ ಈ ಕೊಲೆ ನಡೆದಿದೆ ಎಂದು ಆತನ ತಾಯಿ ಮತ್ತು ತಮ್ಮ ಎಸ್ಪಿಗೆ ಲಿಖಿತ ದೂರು ನೀಡಿದ್ದಾರೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧಿಕಾರಿ ಡಾ. ಲಕ್ಷ್ಮೀ ಪ್ರಸಾದ್, ತನಿಖೆ ತೀವ್ರಗೊಳಿಸಲು ಬಂಟ್ವಾಳ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಸುರೇಂದ್ರ ಬಂಟ್ವಾಳ್ ಬಳಿಯಿಂದ ಫೈನಾನ್ಸ್ ವ್ಯವಹಾರದಲ್ಲಿ ಕೋಟಿಗಟ್ಟಲೆ ಹಣ ಪಡೆದವರು ಇದ್ದಾರೆ. ಹೀಗೆ ಹಣ ಪಡೆದು ಮರಳಿಸದವರು ಕೂಡ ಈ ಕೊಲೆಯಲ್ಲಿ ಪಾತ್ರ ವಹಿಸಿರಬಹುದು ಎನ್ನುವ ಶಂಕೆಯಿದೆ. ಹೀಗಾಗಿ ಪೊಲೀಸರು ಸೂಕ್ತವಾಗಿ ವಿಚಾರಣೆ ನಡೆಸಿದರೆ ಬಹಳಷ್ಟು ಮಾಹಿತಿಗಳು ಹೊರಬೀಳಲಿದೆ. ಆರೋಪಿ ಸತೀಶ್ ಕುಲಾಲ್ ಪೊಲೀಸರ ವಿಚಾರಣೆಯಲ್ಲಿ ಬಹಳಷ್ಟು ಮಾಹಿತಿಗಳನ್ನು ಹೇಳಿದ್ದಾನೆ. ಹೀಗಾಗಿ ಇನ್ನೂ ಹಲವರು ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
The police arrested three persons in connection with the murder of rowdysheeter and Tulu film actor Surendra Bantwal. Totally 5 persons have been arrested so far.
06-05-25 08:18 pm
Bangalore Correspondent
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm