ಬ್ರೇಕಿಂಗ್ ನ್ಯೂಸ್
30-10-20 09:54 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 30 : ತುಳು ಚಿತ್ರನಟ, ರೌಡಿ ಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ವೆಂಕಪ್ಪ ಯಾನೆ ವೆಂಕಟೇಶ್, ಪಬ್ಬು ಯಾನೆ ಪ್ರದೀಪ್ ಹಾಗೂ ಬಂಡಾಡಿ ಶರೀಫ್ ಬಂಧಿತ ಆರೋಪಿಗಳು. ಪ್ರಕರಣದ ಪ್ರಮುಖ ಆರೋಪಿಗಳಾದ ಸತೀಶ್ ಕುಲಾಲ್ ಮತ್ತು ಗಿರೀಶ್ ಎಂಬವರನ್ನು ಅಕ್ಟೋಬರ್ 25ರಂದು ಬಂಧಿಸಲಾಗಿತ್ತು. ಇವರನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದು ಕೊಲೆ ಕೃತ್ಯದ ಕಾರಣ ಮತ್ತು ಬೆಂಬಲ ನೀಡಿದವರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅವರು ನೀಡಿದ ಮಾಹಿತಿ ಆಧರಿಸಿ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಕೂಡ ಕೋರ್ಟಿಗೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಕೊಲೆಯಾದ ದಿನ ಸುರೇಂದ್ರ ಬಂಟ್ವಾಳ್ ಮನೆಯಲ್ಲಿ ಒಂದು ಕೋಟಿ ರೂಪಾಯಿ ನಗದು ಇತ್ತು. ಮೈಯಲ್ಲಿ ಒಂದು ಕೆಜಿಯಷ್ಟು ಬಂಗಾರ ಇತ್ತು. ಹಣಕ್ಕಾಗಿಯೇ ಈ ಕೊಲೆ ನಡೆದಿದೆ ಎಂದು ಆತನ ತಾಯಿ ಮತ್ತು ತಮ್ಮ ಎಸ್ಪಿಗೆ ಲಿಖಿತ ದೂರು ನೀಡಿದ್ದಾರೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧಿಕಾರಿ ಡಾ. ಲಕ್ಷ್ಮೀ ಪ್ರಸಾದ್, ತನಿಖೆ ತೀವ್ರಗೊಳಿಸಲು ಬಂಟ್ವಾಳ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಸುರೇಂದ್ರ ಬಂಟ್ವಾಳ್ ಬಳಿಯಿಂದ ಫೈನಾನ್ಸ್ ವ್ಯವಹಾರದಲ್ಲಿ ಕೋಟಿಗಟ್ಟಲೆ ಹಣ ಪಡೆದವರು ಇದ್ದಾರೆ. ಹೀಗೆ ಹಣ ಪಡೆದು ಮರಳಿಸದವರು ಕೂಡ ಈ ಕೊಲೆಯಲ್ಲಿ ಪಾತ್ರ ವಹಿಸಿರಬಹುದು ಎನ್ನುವ ಶಂಕೆಯಿದೆ. ಹೀಗಾಗಿ ಪೊಲೀಸರು ಸೂಕ್ತವಾಗಿ ವಿಚಾರಣೆ ನಡೆಸಿದರೆ ಬಹಳಷ್ಟು ಮಾಹಿತಿಗಳು ಹೊರಬೀಳಲಿದೆ. ಆರೋಪಿ ಸತೀಶ್ ಕುಲಾಲ್ ಪೊಲೀಸರ ವಿಚಾರಣೆಯಲ್ಲಿ ಬಹಳಷ್ಟು ಮಾಹಿತಿಗಳನ್ನು ಹೇಳಿದ್ದಾನೆ. ಹೀಗಾಗಿ ಇನ್ನೂ ಹಲವರು ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
The police arrested three persons in connection with the murder of rowdysheeter and Tulu film actor Surendra Bantwal. Totally 5 persons have been arrested so far.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am