ಬ್ರೇಕಿಂಗ್ ನ್ಯೂಸ್
29-05-23 05:53 pm Mangaluru Correspondent ಕರಾವಳಿ
ಮಂಗಳೂರು, ಮೇ 29: ಮುಂಬೈ ಕನ್ನಡಿಗ ಲೇಖಕಿ ಅಶ್ವಿತಾ ಶೆಟ್ಟಿಯವರ ಚೊಚ್ಚಲ ಕಥಾ ಸಂಕಲನ ‘’ಮರ್ಸಿಡಿಸ್ ಬೆಂಝ್ ನ ಹಿಂದೆ ’’ ಎನ್ನುವ ಪುಸ್ತಕವನ್ನು ಹೈಕೋರ್ಟ್ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಹರೇಕಳ ಪಾವೂರಿನ ಇನೋಳಿ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.
ಎಂಆರ್ ಪಿಎಲ್ ಸಂಸ್ಥೆಯ ನಿವೃತ್ತ ವ್ಯವಸ್ಥಾಪಕ ನಿರ್ದೇಶಕಿ ವೀಣಾ ಟಿ. ಶೆಟ್ಟಿ, ಇನ್ನೋಳಿ ಸೋಮನಾಥೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಾಲ ಶೆಟ್ಟಿ ಬಾರ್ಲ, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಐಲೇಸಾ ದಿವಾಯ್ಸ್ ಆಫ್ ಓಶಿಯನ್ ಸ್ಥಾಪಕ, ಲೇಖಕ ಶಾಂತರಾಮ ಶೆಟ್ಟಿ, ಬೆಂಗಳೂರಿನ ಟೋಟಲ್ ಕನ್ನಡ ಪ್ರಕಾಶಕ ಲಕ್ಷ್ಮೀಕಾಂತ್, ನಿವೃತ್ತ ಶಿಕ್ಷಕ ಗಂಗಾಧರ ಪೂಜಾರಿ, ಮಾಜಿ ಶಾಸಕ ಲಾಲಾಜಿ ಮೆಂಡನ್, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ, ಉದಯ ಕುಮಾರ್ ಶೆಟ್ಟಿ ಮುನಿಯಾಲು, ಸಿವಿಲ್ ನ್ಯಾಯಾಧೀಶ ಪ್ರಸಾದ್ ಕೆವಿ, ಉದ್ಯಮಿ ಕರ್ನಿರೆ ವಿಶ್ವನಾಥ ಶೆಟ್ಟಿ, ಸಾಹಿತಿ ಶಶಿರಾಜ್ ಕಾವೂರು ಮತ್ತಿತರರು ಉಪಸ್ಥಿತರಿದ್ದರು.




ಅಶ್ವಿತಾ ಶೆಟ್ಟಿ ಮೂಲತಃ ಇನ್ನೋಳಿಯವರಾಗಿದ್ದು, ಮದುವೆಯಾದ ಬಳಿಕ ಮುಂಬೈನಲ್ಲಿ ನೆಲೆಸಿದ್ದಾರೆ. ಅಲ್ಲಿದ್ದುಕೊಂಡೇ ಕನ್ನಡದಲ್ಲಿ ಬರವಣಿಗೆ ಮುಂದುವರಿಸಿದ್ದಾರೆ. ಯುಗಪುರುಷ ಮಾಸ ಪತ್ರಿಕೆಯಲ್ಲಿ 15ಕ್ಕೂ ಹೆಚ್ಚು ಕಥೆಗಳನ್ನು ಬರೆದಿದ್ದಾರೆ. ಇದೀಗ ಮೊದಲ ಬಾರಿಗೆ 22 ಕಥೆಗಳನ್ನು ಒಳಗೊಂಡ ಮರ್ಸಿಸಿಡ್ ಬೆಂಝ್ ಹಿಂದೆ ಎನ್ನುವ ಕಥಾ ಸಂಕಲನವನ್ನು ಹೊರತಂದಿದ್ದಾರೆ. ಆಧುನಿಕತೆಯ ಬೆನ್ನುಹತ್ತಿದ ಯುವ ಜನಾಂಗ, ಎದುರಿಸುತ್ತಿರುವ ತವಕ, ತಲ್ಲಣಗಳನ್ನು ತೆರೆದಿಟ್ಟಿದ್ದಾರೆ.
ಯುವಕನೊಬ್ಬ ಉದ್ಯೋಗ ಅರಸಿ ಜರ್ಮನಿಗೆ ಹೊರಟು ಅಲ್ಲಿ ಮರ್ಸಿಡಿಸ್ ಬೆಂಝ್ ಕಂಪನಿಯಲ್ಲಿ ದುಡಿದು ಕಂಪನಿಯ ಯಶಸ್ಸಿಗೆ ಕಾರಣವಾಗುತ್ತಾನೆ. ದೊಡ್ಡ ಕಂಪನಿ, ಟಾರ್ಗೆಟ್ ಎನ್ನುತ್ತಾ 24 ಗಂಟೆ ದುಡಿತದ ಕಾರಣ ಇತ್ತ ಆತನ ಸ್ವಂತ ಜೀವನ ನರಕಕ್ಕೆ ಹೋಗುತ್ತದೆ. ಕಂಪನಿಯಿಂದ ಹೊರಬಂದು ನೋಡಿದಾಗ, ತನ್ನದೆಲ್ಲವೂ ನಶ್ವರವಾಗಿರುತ್ತೆ ಎನ್ನುವ ಚಿತ್ರಣವನ್ನು ಕಟ್ಟಿಕೊಡುವ ಕಥೆಗಳು ಆಧುನಿಕ ವಾಸ್ತವಗಳನ್ನು ತೆರೆದಿಡುತ್ತವೆ. ಕಾರ್ಯಕ್ರಮದಲ್ಲಿ ಪ್ರೊ.ಸಾಯಿಗೀತಾ ಹೆಗ್ಡೆ ಕೃತಿ ಪರಿಚಯಿಸಿದರು. ಹರಿಶ್ಚಂದ್ರ ಶೆಟ್ಟಿ ಕರ್ನಿರೆ ಸ್ವಾಗತಿಸಿದರು.
High court judge Justice Vishwajith Shetty launches book of Kannada Author Ashwitha Shetty called "Mercedes Benz Na Hindey" in Mangalore at Sri Somanatheshwara Temple. Ashwitha Shetty hails from Inoli, Mangalore and is now based in Mumabi. Mercedes Benz Na Hindey book contains 22 stories.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm