ಬ್ರೇಕಿಂಗ್ ನ್ಯೂಸ್
29-05-23 08:18 pm Mangalore Correspondent ಕರಾವಳಿ
ಮಂಗಳೂರು, ಮೇ 29: ತುಳು ಭಾಷೆಯನ್ನು ದ್ವಿತೀಯ ರಾಜ್ಯ ಭಾಷೆಯಾಗಿ ಮಾನ್ಯತೆ ನೀಡುವ ಸಲುವಾಗಿ ಡಾ.ಮೋಹನ ಆಳ್ವಾ ನೇತೃತ್ವದ ಸಮಿತಿಯ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಲಾಗಿದೆ. ಭಾಷೆಗೆ ಮಾನ್ಯತೆ ನೀಡುವ ವಿಚಾರದಲ್ಲಿ ಬಿಜೆಪಿ ಸರಕಾರ 95 ಶೇಕಡಾ ಕೆಲಸ ಮಾಡಿ ಮುಗಿಸಿದೆ. ಇನ್ನೈದು ಪರ್ಸೆಂಟ್ ಅಷ್ಟೇ ಬಾಕಿಯುಳಿದಿದ್ದು ಅದನ್ನು ಕಾಂಗ್ರೆಸ್ ಸರಕಾರ ಆದಷ್ಟು ಬೇಗ ಮಾಡಲಿ ಎಂದು ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಪ್ರಮಾಣ ವಚನ ಸಂದರ್ಭದಲ್ಲಿ ತುಳುನಾಡನ್ನು ಪ್ರತಿನಿಧಿಸುವ ಶಾಲು ಹಾಕ್ಕೊಂಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತುಳು ಭಾಷೆಗೆ ಮಾನ್ಯತೆ ನೀಡಬೇಕೆಂದು ನಮಗೂ ಮಹದಾಸೆ ಇದೆ. ಆ ನಿಟ್ಟಿನಲ್ಲಿ ನಾವು ತಜ್ಞರ ಸಮಿತಿ ಮಾಡಿ ವರದಿ ಪಡೆದಿದ್ದೇವೆ. ಚುನಾವಣೆಗೂ ಮುನ್ನ ವರದಿಯನ್ನು ಪಡೆಯಲಾಗಿತ್ತು. ಆ ವರದಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿದೆ. ಭಾಷೆಗೆ ಮಾನ್ಯತೆ ನೀಡುವ ವಿಚಾರದಲ್ಲಿ ನಾವು 95 ಶೇಕಡಾ ಕೆಲಸ ಮುಗಿಸಿದ್ದೇವೆ. ಚುನಾವಣೆ ಘೋಷಣೆ ಆಗಿದ್ದರಿಂದ ಕೊನೆಕ್ಷಣದಲ್ಲಿ ಮಾನ್ಯತೆ ನೀಡಲು ಸಾಧ್ಯವಾಗಿರಲಿಲ್ಲ ಎಂದು ಹೇಳಿದರು.
ಬಿಜೆಪಿ ಹೀನಾಯ ಸೋಲಿನ ಬಳಿಕ ವಿಪಕ್ಷ ನಾಯಕನನ್ನು ನೇಮಿಸುವುದಕ್ಕೂ ಆಗಿಲ್ಲವೇ ಎಂಬ ಪ್ರಶ್ನೆಗೆ, ವಿಪಕ್ಷ ನಾಯಕನ ಅಗತ್ಯ ಇರುವುದು ಮುಂದಿನ ಅಧಿವೇಶನಕ್ಕೆ. ಅಲ್ಲಿ ವರೆಗೆ ವಿಪಕ್ಷ ನಾಯಕ ಎಂಬುದು ಬೇಕಿಲ್ಲ. ನಾವೆಲ್ಲ ಬಿಜೆಪಿ ಶಾಸಕರು ವಿಪಕ್ಷದವರೇ. ಜುಲೈ ವೇಳೆಗೆ ಅಧಿವೇಶನ ಆಗೋದಕ್ಕೂ ಮುನ್ನ ವಿಪಕ್ಷ ನಾಯಕರ ನೇಮಕ ಆಗುತ್ತದೆ ಎಂದರು. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಕೂಗು ಕೇಳಿಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ, ಅದೆಲ್ಲ ನಮಗೆ ಗೊತ್ತಿಲ್ಲ. ಮೇಲಿನವರು ತೀರ್ಮಾನಿಸುವ ವಿಚಾರ ಎಂದು ಹೇಳಿದರು.
Tulu as 2nd official language, report filed by Mohan Alva, let Congress make the final decision says Mla Vedavyas Kamath in Mangalore.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm