ಬ್ರೇಕಿಂಗ್ ನ್ಯೂಸ್
29-05-23 08:18 pm Mangalore Correspondent ಕರಾವಳಿ
ಮಂಗಳೂರು, ಮೇ 29: ತುಳು ಭಾಷೆಯನ್ನು ದ್ವಿತೀಯ ರಾಜ್ಯ ಭಾಷೆಯಾಗಿ ಮಾನ್ಯತೆ ನೀಡುವ ಸಲುವಾಗಿ ಡಾ.ಮೋಹನ ಆಳ್ವಾ ನೇತೃತ್ವದ ಸಮಿತಿಯ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಲಾಗಿದೆ. ಭಾಷೆಗೆ ಮಾನ್ಯತೆ ನೀಡುವ ವಿಚಾರದಲ್ಲಿ ಬಿಜೆಪಿ ಸರಕಾರ 95 ಶೇಕಡಾ ಕೆಲಸ ಮಾಡಿ ಮುಗಿಸಿದೆ. ಇನ್ನೈದು ಪರ್ಸೆಂಟ್ ಅಷ್ಟೇ ಬಾಕಿಯುಳಿದಿದ್ದು ಅದನ್ನು ಕಾಂಗ್ರೆಸ್ ಸರಕಾರ ಆದಷ್ಟು ಬೇಗ ಮಾಡಲಿ ಎಂದು ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಪ್ರಮಾಣ ವಚನ ಸಂದರ್ಭದಲ್ಲಿ ತುಳುನಾಡನ್ನು ಪ್ರತಿನಿಧಿಸುವ ಶಾಲು ಹಾಕ್ಕೊಂಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತುಳು ಭಾಷೆಗೆ ಮಾನ್ಯತೆ ನೀಡಬೇಕೆಂದು ನಮಗೂ ಮಹದಾಸೆ ಇದೆ. ಆ ನಿಟ್ಟಿನಲ್ಲಿ ನಾವು ತಜ್ಞರ ಸಮಿತಿ ಮಾಡಿ ವರದಿ ಪಡೆದಿದ್ದೇವೆ. ಚುನಾವಣೆಗೂ ಮುನ್ನ ವರದಿಯನ್ನು ಪಡೆಯಲಾಗಿತ್ತು. ಆ ವರದಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿದೆ. ಭಾಷೆಗೆ ಮಾನ್ಯತೆ ನೀಡುವ ವಿಚಾರದಲ್ಲಿ ನಾವು 95 ಶೇಕಡಾ ಕೆಲಸ ಮುಗಿಸಿದ್ದೇವೆ. ಚುನಾವಣೆ ಘೋಷಣೆ ಆಗಿದ್ದರಿಂದ ಕೊನೆಕ್ಷಣದಲ್ಲಿ ಮಾನ್ಯತೆ ನೀಡಲು ಸಾಧ್ಯವಾಗಿರಲಿಲ್ಲ ಎಂದು ಹೇಳಿದರು.
ಬಿಜೆಪಿ ಹೀನಾಯ ಸೋಲಿನ ಬಳಿಕ ವಿಪಕ್ಷ ನಾಯಕನನ್ನು ನೇಮಿಸುವುದಕ್ಕೂ ಆಗಿಲ್ಲವೇ ಎಂಬ ಪ್ರಶ್ನೆಗೆ, ವಿಪಕ್ಷ ನಾಯಕನ ಅಗತ್ಯ ಇರುವುದು ಮುಂದಿನ ಅಧಿವೇಶನಕ್ಕೆ. ಅಲ್ಲಿ ವರೆಗೆ ವಿಪಕ್ಷ ನಾಯಕ ಎಂಬುದು ಬೇಕಿಲ್ಲ. ನಾವೆಲ್ಲ ಬಿಜೆಪಿ ಶಾಸಕರು ವಿಪಕ್ಷದವರೇ. ಜುಲೈ ವೇಳೆಗೆ ಅಧಿವೇಶನ ಆಗೋದಕ್ಕೂ ಮುನ್ನ ವಿಪಕ್ಷ ನಾಯಕರ ನೇಮಕ ಆಗುತ್ತದೆ ಎಂದರು. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಕೂಗು ಕೇಳಿಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ, ಅದೆಲ್ಲ ನಮಗೆ ಗೊತ್ತಿಲ್ಲ. ಮೇಲಿನವರು ತೀರ್ಮಾನಿಸುವ ವಿಚಾರ ಎಂದು ಹೇಳಿದರು.
Tulu as 2nd official language, report filed by Mohan Alva, let Congress make the final decision says Mla Vedavyas Kamath in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm