ಬ್ರೇಕಿಂಗ್ ನ್ಯೂಸ್
29-05-23 10:13 pm Mangalore Correspondent ಕರಾವಳಿ
ಮಂಗಳೂರು, ಮೇ 29: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಪರಿಹಾರ ನೀಡಿದ ರೀತಿಯಲ್ಲೇ ಅದೇ ಸಂದರ್ಭದಲ್ಲಿ ಕೋಮು ವೈಷಮ್ಯಕ್ಕೆ ಬಲಿಯಾಗಿದ್ದ ಕಾಟಿಪಳ್ಳದ ಫಾಜಿಲ್ ಕುಟುಂಬಕ್ಕೂ ರಾಜ್ಯ ಸರಕಾರ ಪರಿಹಾರ ನೀಡಬೇಕು ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುಟುಂಬಸ್ಥರು ಮತ್ತು ಮುಸ್ಲಿಂ ನಾಯಕರು ಮನವಿ ಮಾಡಿದ್ದಾರೆ.
ಕಳೆದ ವರ್ಷ ಜುಲೈ 26ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ನಡೆದಿತ್ತು. ಅದಕ್ಕೆ ಪ್ರತೀಕಾರ ಎನ್ನುವಂತೆ, ಅದಾಗಿ ಎರಡೇ ದಿನದಲ್ಲಿ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಫಾಜಿಲ್ ಎಂಬ ಯುವಕನ ಹತ್ಯೆ ನಡೆದಿತ್ತು. ಪ್ರವೀಣ್ ಹತ್ಯೆಯಿಂದ ತೀವ್ರ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು, ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಾರನ್ನು ಅಲುಗಾಡಿಸಿ ಘೆರಾವ್ ಹಾಕಿದ್ದರು. ಘಟನೆ ಬಳಿಕ ಪ್ರವೀಣ್ ಕುಟುಂಬಕ್ಕೆ 25 ಲಕ್ಷ ಪರಿಹಾರ, ಬಿಜೆಪಿ ವತಿಯಿಂದ ಮನೆ ಕಟ್ಟಿಸಿಕೊಡಲಾಗಿತ್ತು. ಅಲ್ಲದೆ, ಪ್ರವೀಣ್ ಪತ್ನಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾತ್ಕಾಲಿಕ ಉದ್ಯೋಗ ಕೊಡಲಾಗಿತ್ತು.
ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದಿದ್ದು, ಪ್ರವೀಣ್ ಹತ್ಯೆ ಸಂದರ್ಭದಲ್ಲಿ ಸಾವನ್ನಪ್ಪಿದ್ದ ಫಾಜಿಲ್ ಕುಟುಂಬಕ್ಕೂ ಪರಿಹಾರ ನೀಡಬೇಕು ಎಂದು ಕುಟುಂಬಸ್ಥರು ಆಗ್ರಹ ಮಾಡಿದ್ದಾರೆ. ಜೊತೆಗೆ, ಸುಳ್ಯದಲ್ಲಿ ಪ್ರವೀಣ್ ಹತ್ಯೆಗೂ ಎರಡು ದಿನಗಳ ಹಿಂದೆ ಸಾವನ್ನಪ್ಪಿದ್ದ ಮಸೂದ್ ಕುಟುಂಬಕ್ಕೂ ಪರಿಹಾರ ನೀಡಬೇಕು ಎಂದು ಆಗ್ರಹ ಮಾಡಿದ್ದಾರೆ. ಇದಲ್ಲದೆ, ಸುರತ್ಕಲ್ ಕಾಟಿಪಳ್ಳದಲ್ಲಿ ಯುವತಿಯ ವಿಚಾರದಲ್ಲಿ ವೈಯಕ್ತಿಕ ದ್ವೇಷದಿಂದ ಕೊಲೆಯಾಗಿದ್ದ ಜಲೀಲ್ ಕುಟುಂಬಕ್ಕೂ ಪರಿಹಾರ ನೀಡಲು ಒತ್ತಾಯ ಮಾಡಿದ್ದಾರೆ. ಧರ್ಮಸ್ಥಳದಲ್ಲಿ ವೈಯಕ್ತಿಕ ದ್ವೇಷದಲ್ಲಿ ಹತ್ಯೆಯಾಗಿದ್ದ ದಿನೇಶ್ ಕನ್ಯಾಡಿ ಕುಟುಂಬಕ್ಕೂ ಪರಿಹಾರ ನೀಡಬೇಕೆಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.
ಕೋಮು ದ್ವೇಷದಲ್ಲಿ ಹತ್ಯೆಗೀಡಾಗಿದ್ದ ಫಾಜಿಲ್ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಹಿಂದಿನ ಬಿಜೆಪಿ ಸರಕಾರದ ಮುಂದೆಯೂ ಬೇಡಿಕೆ ಇರಿಸಲಾಗಿತ್ತು. ಜಿಲ್ಲಾಡಳಿತದ ಮೂಲಕ ಮನವಿ ನೀಡಿದ್ದರೂ, ಬಿಜೆಪಿ ಸರಕಾರ ಪರಿಹಾರ ನೀಡಿರಲಿಲ್ಲ. ಇದೀಗ ಕಾಂಗ್ರೆಸ್ ಸರಕಾರಕ್ಕೆ ವಿಧಾನಸಭೆ ಸ್ಪೀಕರ್ ಮೂಲಕ ಮನವಿ ನೀಡಲಾಗಿದ್ದು ನೇರವಾಗಿ ಸಿದ್ದರಾಮಯ್ಯ ಅವರಿಗೆ ಮುಟ್ಟಿಸುವ ಪ್ರಯತ್ನ ನಡೆದಿದೆ.
Mangalore Fazil murder case, family demands compensation as like praveen nettaru family, letter to CM by Speaker UT Khader.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm