ಬ್ರೇಕಿಂಗ್ ನ್ಯೂಸ್
05-08-20 01:44 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 5: ಮಂಗಳೂರಿನಲ್ಲಿ ಕೊರೊನಾ ಸೋಂಕು ಒಂದೆಡೆ ಎರ್ರಾಬಿರ್ರಿ ಎನ್ನುವಂತೆ ಹರಡುತ್ತಿದ್ದರೆ, ಮತ್ತೊಂದೆಡೆ ಜ್ವರ ಬಾಧೆ ಗ್ರಾಮ ಗ್ರಾಮಕ್ಕೂ ದಾಳಿ ಇಟ್ಟಿದೆ. ಮಂಗಳೂರು ತಾಲೂಕಿನಲ್ಲಿಯೇ ದಿನವೂ 150ರಷ್ಟು ಮಂದಿಗೆ ಸೋಂಕು ತಗಲುತ್ತಿದೆ. ಇದೇ ವೇಳೆ, ಕೆಲವು ಗ್ರಾಮಗಳಲ್ಲಿ ಜ್ವರ ಬಾಧೆ ತೀವ್ರಗೊಂಡಿದ್ದು ಗ್ರಾಮಾಂತರ ಪ್ರದೇಶಗಳಲ್ಲಿ ಇಡೀ ಗ್ರಾಮಕ್ಕೆ ಗ್ರಾಮವೇ ಜ್ವರದಿಂದ ಮಲಗುವಂತಾಗಿದೆ.

ಮಂಗಳೂರು ತಾಲೂಕಿನ ಕುಪ್ಪೆಪದವು ಬಳಿಯ ಆಚಾರಿ ಜೋರ ಎಂಬ 5 ಸೆನ್ಸ್ ಕಾಲನಿಯಲ್ಲಿ ಜ್ವರ ವ್ಯಾಪಕವಾಗಿ ಹಬ್ಬಿದ್ದು 25 ಕ್ಕೂ ಹೆಚ್ಚು ಮನೆಗಳ ನಿವಾಸಿಗಳು ಜ್ವರದಿಂದ ಬಳಲುತ್ತಿದ್ದಾರೆ. ಜನರ ಸ್ಥಿತಿ ಹೀಗಿದ್ದರೂ ಈ ಭಾಗದಲ್ಲಿ ಯಾರು ಕೂಡ ಆಶಾ ಕಾರ್ಯಕರ್ತರು ಬರುತ್ತಿಲ್ಲ. ಕುಪ್ಪೆಪದವಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಇದ್ದರೂ ಅಲ್ಲಿನ ಸಿಬಂದಿ ತಮಗೇ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಅಲ್ಲಿನ ಜನ ನೋವು ವ್ಯಕ್ತಪಡಿಸಿದ್ದಾರೆ.

ಒಂದೆಡೆ ಕೊರೊನಾ, ಮತ್ತೊಂದೆಡೆ ಡೆಂಗ್ಯು, ಮಲೇರಿಯಾ ಹಾವಳಿ. ಇನ್ನೊಂದೆಡೆ ಒಂದೇ ಸಮನೆ ಹೊಡೆಯುತ್ತಿರುವ ಮಳೆ ಕರಾವಳಿಯಲ್ಲಿ ಹಳ್ಳಿ ಕಡೆಯ ಜನರನ್ನು ಹೈರಾಣು ಮಾಡಿದೆ. ಎಲ್ಲೆಡೆ ಮಲೇರಿಯಾ, ಡೆಂಗ್ಯು ಭೀತಿ ಎದುರಾಗಿದ್ದರೂ, ಜಿಲ್ಲಾಡಳಿತ ಈ ಬಗ್ಗೆ ಇನ್ನೂ ಎಚ್ಚತ್ತುಕೊಂಡಿಲ್ಲ. ಆಚಾರಿ ಜೋರ ಕಾಲನಿಯಲ್ಲಿ ಒಂದು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಮುಂಬೈನಿಂದ ಬಂದಿದ್ದ ಯುವಕ ಮೃತಪಟ್ಟಿದ್ದ. ಆನಂತರ ಕುಪ್ಪೆಪದವಿನಲ್ಲಿಯೂ ಕೊರೊನಾ ಸೋಂಕಿಗೆ ಮತ್ತೊಬ್ಬ ವೃದ್ಧ ಬಲಿಯಾಗಿದ್ದರು. ಹೀಗಾಗಿ ಈ ಭಾಗದ ಜನರಲ್ಲಿ ಕೊರೊನಾ ಭೀತಿಯೂ ಮಡುಗಟ್ಟಿದೆ. ಕೂಡಲೇ ಈ ಪ್ರದೇಶಕ್ಕೆ ಮಂಗಳೂರು ತಹಸೀಲ್ದಾರ್ ಭೇಟಿಯಾಗಿ ತುರ್ತು ಆರೋಗ್ಯ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am