ಬ್ರೇಕಿಂಗ್ ನ್ಯೂಸ್
05-08-20 01:44 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 5: ಮಂಗಳೂರಿನಲ್ಲಿ ಕೊರೊನಾ ಸೋಂಕು ಒಂದೆಡೆ ಎರ್ರಾಬಿರ್ರಿ ಎನ್ನುವಂತೆ ಹರಡುತ್ತಿದ್ದರೆ, ಮತ್ತೊಂದೆಡೆ ಜ್ವರ ಬಾಧೆ ಗ್ರಾಮ ಗ್ರಾಮಕ್ಕೂ ದಾಳಿ ಇಟ್ಟಿದೆ. ಮಂಗಳೂರು ತಾಲೂಕಿನಲ್ಲಿಯೇ ದಿನವೂ 150ರಷ್ಟು ಮಂದಿಗೆ ಸೋಂಕು ತಗಲುತ್ತಿದೆ. ಇದೇ ವೇಳೆ, ಕೆಲವು ಗ್ರಾಮಗಳಲ್ಲಿ ಜ್ವರ ಬಾಧೆ ತೀವ್ರಗೊಂಡಿದ್ದು ಗ್ರಾಮಾಂತರ ಪ್ರದೇಶಗಳಲ್ಲಿ ಇಡೀ ಗ್ರಾಮಕ್ಕೆ ಗ್ರಾಮವೇ ಜ್ವರದಿಂದ ಮಲಗುವಂತಾಗಿದೆ.

ಮಂಗಳೂರು ತಾಲೂಕಿನ ಕುಪ್ಪೆಪದವು ಬಳಿಯ ಆಚಾರಿ ಜೋರ ಎಂಬ 5 ಸೆನ್ಸ್ ಕಾಲನಿಯಲ್ಲಿ ಜ್ವರ ವ್ಯಾಪಕವಾಗಿ ಹಬ್ಬಿದ್ದು 25 ಕ್ಕೂ ಹೆಚ್ಚು ಮನೆಗಳ ನಿವಾಸಿಗಳು ಜ್ವರದಿಂದ ಬಳಲುತ್ತಿದ್ದಾರೆ. ಜನರ ಸ್ಥಿತಿ ಹೀಗಿದ್ದರೂ ಈ ಭಾಗದಲ್ಲಿ ಯಾರು ಕೂಡ ಆಶಾ ಕಾರ್ಯಕರ್ತರು ಬರುತ್ತಿಲ್ಲ. ಕುಪ್ಪೆಪದವಿನಲ್ಲಿ ಸಮುದಾಯ ಆರೋಗ್ಯ ಕೇಂದ್ರ ಇದ್ದರೂ ಅಲ್ಲಿನ ಸಿಬಂದಿ ತಮಗೇ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಅಲ್ಲಿನ ಜನ ನೋವು ವ್ಯಕ್ತಪಡಿಸಿದ್ದಾರೆ.

ಒಂದೆಡೆ ಕೊರೊನಾ, ಮತ್ತೊಂದೆಡೆ ಡೆಂಗ್ಯು, ಮಲೇರಿಯಾ ಹಾವಳಿ. ಇನ್ನೊಂದೆಡೆ ಒಂದೇ ಸಮನೆ ಹೊಡೆಯುತ್ತಿರುವ ಮಳೆ ಕರಾವಳಿಯಲ್ಲಿ ಹಳ್ಳಿ ಕಡೆಯ ಜನರನ್ನು ಹೈರಾಣು ಮಾಡಿದೆ. ಎಲ್ಲೆಡೆ ಮಲೇರಿಯಾ, ಡೆಂಗ್ಯು ಭೀತಿ ಎದುರಾಗಿದ್ದರೂ, ಜಿಲ್ಲಾಡಳಿತ ಈ ಬಗ್ಗೆ ಇನ್ನೂ ಎಚ್ಚತ್ತುಕೊಂಡಿಲ್ಲ. ಆಚಾರಿ ಜೋರ ಕಾಲನಿಯಲ್ಲಿ ಒಂದು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿ ಮುಂಬೈನಿಂದ ಬಂದಿದ್ದ ಯುವಕ ಮೃತಪಟ್ಟಿದ್ದ. ಆನಂತರ ಕುಪ್ಪೆಪದವಿನಲ್ಲಿಯೂ ಕೊರೊನಾ ಸೋಂಕಿಗೆ ಮತ್ತೊಬ್ಬ ವೃದ್ಧ ಬಲಿಯಾಗಿದ್ದರು. ಹೀಗಾಗಿ ಈ ಭಾಗದ ಜನರಲ್ಲಿ ಕೊರೊನಾ ಭೀತಿಯೂ ಮಡುಗಟ್ಟಿದೆ. ಕೂಡಲೇ ಈ ಪ್ರದೇಶಕ್ಕೆ ಮಂಗಳೂರು ತಹಸೀಲ್ದಾರ್ ಭೇಟಿಯಾಗಿ ತುರ್ತು ಆರೋಗ್ಯ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm