ಬ್ರೇಕಿಂಗ್ ನ್ಯೂಸ್
31-05-23 04:26 pm Mangalore Correspondent ಕರಾವಳಿ
ಮಂಗಳೂರು, ಮೇ 31: ನಿಷೇಧಿತ ಸಂಘಟನೆ ಪಿಎಫ್ಐ ಮತ್ತು ದೇಶದ್ರೋಹಿ ಕೃತ್ಯಕ್ಕಾಗಿ ಹವಾಲಾ ಹಣದ ನೆಟ್ವರ್ಕ್ ನಡೆಸುತ್ತಿದ್ದ ಮಾಹಿತಿ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್ಐಎ ಅಧಿಕಾರಿಗಳು ಮತ್ತೊಮ್ಮೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಒಂದೇ ಜಿಲ್ಲೆಯಲ್ಲಿ 16ಕ್ಕೂ ಹೆಚ್ಚು ಕಡೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ನಸುಕಿನಲ್ಲಿ ಬಾಗಿಲು ತಟ್ಟಿದ ಪೊಲೀಸರನ್ನು ಕಂಡು ಸ್ಥಳೀಯ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ.
ಬುಧವಾರ ನಸುಕಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ 16ಕ್ಕೂ ಹೆಚ್ಚು ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ಅಧಿಕಾರಿಗಳು ದಾಳಿ ನಡೆಸಿದ್ದರು. ಬಂಟ್ವಾಳ ತಾಲೂಕಿನಲ್ಲಿ ಗೋಳ್ತಮಜಲು ಗ್ರಾಮದಲ್ಲಿ ಎರಡು ಕಡೆ, ಮಾಣಿಯಲ್ಲಿ ಎರಡು ಕಡೆ, ನರಿಕೊಂಬು ಗ್ರಾಮದಲ್ಲಿ ಎರಡು ಕಡೆ, ಬೊಳ್ಳಾಯಿ, ಸಜಿಪನಡು, ಕೊಳ್ನಾಡುವಿನಲ್ಲಿ ಶಂಕಿತರ ಮನೆಗಳಿಗೆ ಹೊಕ್ಕ ಅಧಿಕಾರಿಗಳು, ಹಲವರನ್ನು ವಿಚಾರಣೆ ನಡೆಸಿದ್ದಾರೆ. ಶಂಕಿತರ ಮೊಬೈಲ್, ಲ್ಯಾಪ್ಟಾಪ್, ಬ್ಯಾಂಕ್ ವಹಿವಾಟಿನ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಬದ್ರುದ್ದೀನ್ ಎಂಬವರ ಖಾತೆಗಳಿಗೆ ಬೇನಾಮಿ ಖಾತೆಯಿಂದ ಫಂಡಿಂಗ್ ಆಗಿರುವ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಯಾಕಾಗಿ ಹಣ ರವಾನೆಯಾಗಿದೆ, ಯಾರು ಹಣ ಹಾಕಿದವರು ಎನ್ನುವ ಬಗ್ಗೆ ಆತನನ್ನು ಪ್ರಶ್ನೆ ಮಾಡಿದ್ದಾರೆ. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೂ ತನಿಖೆ ನಡೆದಿದ್ದು, ಶಂಕಿತ ವ್ಯಕ್ತಿಯ ಮೊಬೈಲ್, ಬ್ಯಾಂಕ್ ವಹಿವಾಟಿನ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಬಿಹಾರದ ಪಾಟ್ನಾದಲ್ಲಿ ಎರಡು ವರ್ಷಗಳ ಹಿಂದೆ ಮೋದಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಸಂಚು ನಡೆಸಿದ್ದ ಪ್ರಕರಣದ ಬೆನ್ನುಹತ್ತಿದ ಅಧಿಕಾರಿಗಳಿಗೆ ಭಯೋತ್ಪಾದಕ ಕೃತ್ಯಕ್ಕಾಗಿ ಬೇನಾಮಿ ಖಾತೆಗಳಿಂದ ಫಂಡಿಂಗ್ ಆಗುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿತ್ತು. ತನಿಖೆಯಲ್ಲಿ ಕರಾವಳಿಯ ಮಂಗಳೂರಿನ ನಂಟು ಸಿಕ್ಕಿದ್ದರಿಂದ ಅಧಿಕಾರಿಗಳು ಕಾರ್ಯಾಚರಣೆಯನ್ನು ಇತ್ತ ವಿಸ್ತರಣೆ ಮಾಡಿದ್ದರು. ಎರಡು ತಿಂಗಳ ಹಿಂದೆ ಬಂಟ್ವಾಳ, ಪುತ್ತೂರು ಮತ್ತು ಕೇರಳದ ಗಡಿಭಾಗ ಮಂಜೇಶ್ವರದಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿ, ಬೇನಾಮಿ ಖಾತೆಗಳಿಗೆ ಹಣ ರವಾನಿಸುತ್ತಿದ್ದ ನಾಲ್ವರನ್ನು ಬಂಧಿಸಿದ್ದರು. ವಿದೇಶದಲ್ಲಿ ಉದ್ಯೋಗದಲ್ಲಿರುವ ವ್ಯಕ್ತಿಗಳು ಹಣ ಸಂಗ್ರಹಿಸಿ, ಹವಾಲ ರೂಪದಲ್ಲಿ ಕರಾವಳಿಯ ಯುವಕರ ಮೂಲಕ ಕಳಿಸಿಕೊಡುತ್ತಿದ್ದುದು ತನಿಖೆಯಲ್ಲಿ ಪತ್ತೆಯಾಗಿತ್ತು. ಇದೇ ಪ್ರಕರಣದ ಮುಂದುವರಿದ ಭಾಗವಾಗಿ ಇದೀಗ ಕಾರ್ಯಾಚರಣೆ ನಡೆದಿದೆ ಎನ್ನಲಾಗುತ್ತಿದ್ದು, ಪುತ್ತೂರು, ಬೆಳ್ತಂಗಡಿಯಲ್ಲಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.
PFI Hawala Network, NIA raid in Mangalore, officers search for Bank transactions, raid in 16 locations of Dakshina Kannada. Sleuths of NIA raided 16 places in Dakshina Kannada (DK) district early in the morning on Wednesday May 31. Home, offices and hospitals were raided simultaneously in the city as well as Puttur, Beltangady, Uppinangady, Venur and Bantwal.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm