ಬ್ರೇಕಿಂಗ್ ನ್ಯೂಸ್
31-05-23 06:49 pm Mangalore Correspondent ಕರಾವಳಿ
ಉಳ್ಳಾಲ, ಮೇ 31: ಮನೆಯಲ್ಲಿ ಸಂಜೆ ನಡೆಯಬೇಕಾಗಿದ್ದ ಮೆಹಂದಿ ಶಾಸ್ತ್ರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಪೋಷಕರು, ಕುಟುಂಬಸ್ಥರು ಸಂಭ್ರಮದಲ್ಲಿ ತೊಡಗಿದ್ದರೆ ಇತ್ತ ಹಣ್ಣು ಖರೀದಿಗೆಂದು ತೆರಳಿದ್ದ ವರನೇ ನಾಪತ್ತೆಯಾಗಿದ್ದು ವಧೂ ವರರ ಕುಟುಂಬವನ್ನು ಆತಂಕಕ್ಕೀಡು ಮಾಡಿದೆ.
ಕೇರಳ ಗಡಿಭಾಗದ ತೌಡುಗೋಳಿ- ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಸುಪುತ್ರ ಕಿಶನ್ ಶೆಟ್ಟಿ ನಾಪತ್ತೆಯಾದ ವರ. ಜೂ.1ರ, ಗುರುವಾರದಂದು ಕಿಶನ್ ಶೆಟ್ಟಿಗೆ ಉಪ್ಪಳ ಮೂಲದ ಪ್ರಸ್ತುತ ಜಪ್ಪಿನಮೊಗರಿನಲ್ಲಿರುವ ಕುಟುಂಬವೊಂದರ ಉಪನ್ಯಾಸಕಿಯೊಂದಿಗೆ ವಿವಾಹ ನಿಗದಿಯಾಗಿತ್ತು. ವಧುವಿನ ಮನೆಯಲ್ಲಿ ಅದಾಗಲೇ ಅದ್ಧೂರಿ ಮೆಹಂದಿ ಶಾಸ್ತ್ರ ಮುಗಿದಿದ್ದು ವರನ ಮನೆಯಲ್ಲಿ ನಿನ್ನೆ (ಮಂಗಳವಾರ) ನಡೆಯಬೇಕಿದ್ದ ಮೆಹಂದಿ ಶಾಸ್ತ್ರಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗಿತ್ತು.
ನಿನ್ನೆ ಮಧ್ಯಾಹ್ನ ಹಣ್ಣು ತರಲೆಂದು ವರ ಸ್ಕೂಟರ್ ಏರಿ ಮನೆಯಿಂದ ಹೊರಟಿದ್ದ. ಆ ಬಳಿಕ ದೇರಳಕಟ್ಟೆ ತಲುಪುತ್ತಿದ್ದಂತೆಯೇ ಪೊಲೀಸ್ ಮೂಲಗಳ ಪ್ರಕಾರ ಸುಮಾರು ಅರ್ಧ ತಾಸು ಯಾರಲ್ಲಿಯೋ ಫೋನಲ್ಲಿ ಮಾತನಾಡಿದ್ದನಂತೆ. ಆ ಬಳಿಕ ನಾಪತ್ತೆಯಾದ ವರ ಇನ್ನೂ ಮನೆಗೆ ಬಂದಿಲ್ಲ. ಎರಡೂ ಕುಟುಂಬ ಆರ್ಥಿಕವಾಗಿ ಸ್ಥಿತಿವಂತರಾಗಿದ್ದು ವಧೂ ವರರ ಮನೆಯಲ್ಲಿ ಸಂಭ್ರಮ ತುಂಬಿ ತುಳುಕಬೇಕಾಗಿತ್ತಾದರೂ ವರನ ನಾಪತ್ತೆ ಪ್ರಕರಣ ದಿಗ್ಭ್ರಮೆ ಮೂಡಿಸಿದೆ.
ಹಳೆಯ ಪ್ರೇಮ್ ಕಹಾನಿ ಅಡ್ಡಗಾಲಾಯಿತೇ?
ಪದವೀಧರನಾಗಿದ್ದ ಕಿಶನ್ ಶೆಟ್ಟಿಯ ತಂದೆ ಐತಪ್ಪ ಶೆಟ್ಟಿ ಅವರು ವಿವಾಹ ನಿಶ್ಚಿತಾರ್ಥಕ್ಕೂ ಮುನ್ನ ಪುತ್ರನ ಹತ್ತಿರ ನಿನಗೆ ಲವ್ ಏನಾದರೂ ಇದ್ರೆ ಹೇಳು, ಆಕೆಯ ಜತೆಗೆ ಮದುವೆ ಮಾಡಿಸುತ್ತೇನೆಂದು ಭರವಸೆ ನೀಡಿದ್ದರಂತೆ. ಮಗ ಇಲ್ಲ ಎಂದ ಕಾರಣ ಎಲ್ಲ ಕಡೆಗೂ ಅಪ್ಪನೇ ಒಂಟಿಯಾಗಿ ತೆರಳಿ ಪುತ್ರನ ಮದುವೆ ಆಮಂತ್ರಣ ಪತ್ರಿಕೆ ಹಂಚಿದ್ದರಂತೆ. ವಧುವಿನ ಮನೆ ಮಂದಿಯೂ ವರನ ಕುರಿತು ಸಾಕಷ್ಟು ವಿಚಾರಿಸಿಯೇ ಮದುವೆಗೆ ಸಮ್ಮತಿಸಿದ್ದರು. ಪೊಲೀಸರು ಕಿಶನ್ ಶೆಟ್ಟಿ ಪತ್ತೆಕಾರ್ಯದಲ್ಲಿ ತೊಡಗಿದ್ದು ಕಿಶನ್ ಶೆಟ್ಟಿ ನಾಪತ್ತೆ ಪ್ರಕರಣ ಆತ್ಮಹತ್ಯೆಯೋ, ಅಪಹರಣವೋ ಎಂದು ತಲೆ ಕೆರೆದುಕೊಂಡಿದ್ದಾರೆ.
ಕಿಶನ್ ಗೆ ಕೆಲವು ವರ್ಷಗಳಿಂದ ಗಡಿಭಾಗದ ಅಂತರ್ಜಾತಿಯ ಯುವತಿಯೊಂದಿಗೆ ಪ್ರೇಮಾಂಕುರವಾಗಿತ್ತು ಎಂದು ಕೆಲವು ಮೂಲಗಳಿಂದ ತಿಳಿದು ಬಂದಿದ್ದು ನಾಪತ್ತೆ ಬಳಿಕ ಆಕೆಯ ಬಳಿ ವಿಚಾರಿಸಿದಾಗ ತನಗೂ ಹಲವು ದಿನಗಳಿಂದ ಆತ ಕರೆ ಮಾಡಿಲ್ಲ ಎಂದು ತಿಳಿಸಿದ್ದಾಳಂತೆ. ತನ್ನ ಹೊರತು ಬೇರೆ ಯಾರನ್ನು ಮದುವೆಯಾದರೂ ಸಾಯುವುದಾಗಿ ಆಕೆ ಹೇಳಿದ್ದಳೆಂದು ಹೇಳಲಾಗುತ್ತಿದೆ. ಕೊಣಾಜೆ ಠಾಣೆಯಲ್ಲಿ ಕಿಶನ್ ತಂದೆ ಐತಪ್ಪ ಶೆಟ್ಟಿ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಕಿಶನ್ ನ ಹಳೆಯ ಪ್ರೇಯಸಿಯನ್ನ ಕೊಣಾಜೆ ಠಾಣಾ ಪೊಲೀಸರು ಕರೆಸಿ ವಿಚಾರಣೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.
Mangalore Bride groom goes missing on the day of his Mehendi, love affair suspected. The missing person is identified as Kishan Shetty. His marriage was fixed with teacher from Jeppinamogaru. Konaje police have called the X Lover of Kishan and are investigating the case.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm