ಬ್ರೇಕಿಂಗ್ ನ್ಯೂಸ್
01-06-23 07:33 pm Mangalore Correspondent ಕರಾವಳಿ
ಉಳ್ಳಾಲ, ಜೂ.1: ಎರಡು ದಿನಗಳ ಹಿಂದೆ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆಂದು ತಿಳಿದುಬಂದಿದ್ದು, ಸಂಬಂಧಿಕರು ಬಳ್ಳಾರಿಗೆ ತೆರಳಿದ್ದಾರೆ.
ಮೇ 30 ರಂದು ಗರ್ಭಿಣಿ ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು ಬಲ್ಮಠದಲ್ಲಿನ ಸ್ಕ್ಯಾನಿಂಗ್ ಸೆಂಟರ್ ಕೆಲಸಕ್ಕೆ ತೆರಳಿದ್ದ ಜಯರಾಜ್, ಅಲ್ಲಿ ಹಾಜರು ದಾಖಲುಪಡಿಸಿದ್ದರು. ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ನಿಗೂಢವಾಗಿ ಕಣ್ಮರೆಯಾಗಿದ್ದರು. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನೆ ಮಂದಿ ನಾಪತ್ತೆ ದೂರು ದಾಖಲಿಸಿದ್ದರು.
ಮಾಧ್ಯಮಗಳಲ್ಲಿ ಸುದ್ಧಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸ್ ಇಲಾಖೆ ರಾಜ್ಯದಾದ್ಯಂತ ಪೊಲೀಸ್ ಇಲಾಖೆಗಳಿಗೆ ಮಾಹಿತಿ ರವಾನಿಸಿದ್ದು, ಮಂಗಳೂರು ವ್ಯಾಪ್ತಿಯಲ್ಲಿ ಹುಡುಕಾಟ ಆರಂಭಿಸಿದ್ದರು. ಸ್ನೇಹಿತರನ್ನು ವಿಚಾರಣೆಗೆ ಕರೆಸಲಾಗಿತ್ತು. ಈ ಮಧ್ಯೆ ಮೇ 31 ರಂದು ಪಡೀಲ್- ನಂತೂರು ರಸ್ತೆ ಬಳಿ ಜಯರಾಜ್ ಉಪಯೋಗಿಸುವ ಸ್ಕೂಟರ್ ಪತ್ತೆಯಾಗಿತ್ತು. ಅದರಲ್ಲಿ ಮೊಬೈಲ್, ಪಸ್೯, ದಾಖಲೆಗಳೆಲ್ಲ ಸಿಕ್ಕಿದ್ದವು. ಇದರಿಂದ ಮನೆಮಂದಿ ಇನ್ನಷ್ಟು ಚಿಂತೆಗೀಡಾಗಿದ್ದರು. ಇದೀಗ ಬಳ್ಳಾರಿ ಪೊಲೀಸರು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಜಯರಾಜ್ ಬಳ್ಳಾರಿಯಲ್ಲಿದ್ದು ಅಲ್ಲಿಗೆ ಬಂದು ಕರೆದೊಯ್ಯಲು ತಿಳಿಸಿದ್ದಾರೆ. ಸಂಬಂಧಿಕರು ಹಾಗೂ ಪೊಲೀಸರು ಬಳ್ಳಾರಿಗೆ ಹೊರಟಿದ್ದಾರೆ.
35-year-old lab technician Jayaraj who went missing from Harekala in Mangalore found in Ballari. Jayaraj (35), a resident of Harekala Panjilaguli, who went missing under mysterious circumstances has been found in Ballari. His family members have gone to Ballari.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm