ಬ್ರೇಕಿಂಗ್ ನ್ಯೂಸ್
01-06-23 07:33 pm Mangalore Correspondent ಕರಾವಳಿ
ಉಳ್ಳಾಲ, ಜೂ.1: ಎರಡು ದಿನಗಳ ಹಿಂದೆ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆಂದು ತಿಳಿದುಬಂದಿದ್ದು, ಸಂಬಂಧಿಕರು ಬಳ್ಳಾರಿಗೆ ತೆರಳಿದ್ದಾರೆ.
ಮೇ 30 ರಂದು ಗರ್ಭಿಣಿ ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು ಬಲ್ಮಠದಲ್ಲಿನ ಸ್ಕ್ಯಾನಿಂಗ್ ಸೆಂಟರ್ ಕೆಲಸಕ್ಕೆ ತೆರಳಿದ್ದ ಜಯರಾಜ್, ಅಲ್ಲಿ ಹಾಜರು ದಾಖಲುಪಡಿಸಿದ್ದರು. ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ನಿಗೂಢವಾಗಿ ಕಣ್ಮರೆಯಾಗಿದ್ದರು. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನೆ ಮಂದಿ ನಾಪತ್ತೆ ದೂರು ದಾಖಲಿಸಿದ್ದರು.
ಮಾಧ್ಯಮಗಳಲ್ಲಿ ಸುದ್ಧಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸ್ ಇಲಾಖೆ ರಾಜ್ಯದಾದ್ಯಂತ ಪೊಲೀಸ್ ಇಲಾಖೆಗಳಿಗೆ ಮಾಹಿತಿ ರವಾನಿಸಿದ್ದು, ಮಂಗಳೂರು ವ್ಯಾಪ್ತಿಯಲ್ಲಿ ಹುಡುಕಾಟ ಆರಂಭಿಸಿದ್ದರು. ಸ್ನೇಹಿತರನ್ನು ವಿಚಾರಣೆಗೆ ಕರೆಸಲಾಗಿತ್ತು. ಈ ಮಧ್ಯೆ ಮೇ 31 ರಂದು ಪಡೀಲ್- ನಂತೂರು ರಸ್ತೆ ಬಳಿ ಜಯರಾಜ್ ಉಪಯೋಗಿಸುವ ಸ್ಕೂಟರ್ ಪತ್ತೆಯಾಗಿತ್ತು. ಅದರಲ್ಲಿ ಮೊಬೈಲ್, ಪಸ್೯, ದಾಖಲೆಗಳೆಲ್ಲ ಸಿಕ್ಕಿದ್ದವು. ಇದರಿಂದ ಮನೆಮಂದಿ ಇನ್ನಷ್ಟು ಚಿಂತೆಗೀಡಾಗಿದ್ದರು. ಇದೀಗ ಬಳ್ಳಾರಿ ಪೊಲೀಸರು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಜಯರಾಜ್ ಬಳ್ಳಾರಿಯಲ್ಲಿದ್ದು ಅಲ್ಲಿಗೆ ಬಂದು ಕರೆದೊಯ್ಯಲು ತಿಳಿಸಿದ್ದಾರೆ. ಸಂಬಂಧಿಕರು ಹಾಗೂ ಪೊಲೀಸರು ಬಳ್ಳಾರಿಗೆ ಹೊರಟಿದ್ದಾರೆ.
35-year-old lab technician Jayaraj who went missing from Harekala in Mangalore found in Ballari. Jayaraj (35), a resident of Harekala Panjilaguli, who went missing under mysterious circumstances has been found in Ballari. His family members have gone to Ballari.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm