ಬ್ರೇಕಿಂಗ್ ನ್ಯೂಸ್
01-06-23 08:17 pm Mangalore Correspondent ಕರಾವಳಿ
ಮಂಗಳೂರು, ಜೂನ್ 1: ವಿಧಾನಸಭೆ ಚುನಾವಣೆ ವೇಳೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ಅವರನ್ನು ಅಮಾನತು ಮಾಡಲಾಗಿದೆ.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಟಿಡಿ ಜಯಣ್ಣ ಕರ್ತವ್ಯ ಲೋಪ ಎಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅಮಾನತು ಆದೇಶ ಮಾಡಿದ್ದಾರೆ. ಆದರೆ, ತನ್ನ ಮೇಲೆ ಮಾಡಿರುವ ಆರೋಪಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಯು) ಜಯಣ್ಣ ನಿರಾಕರಿಸಿದ್ದಾರೆ.
ಜಯಣ್ಣ ಅವರು ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಹೊರಡಿಸಿದ ನೋಟಿಸ್ ಗೆ ಮೇ 22 ರಂದು ಲಿಖಿತ ಉತ್ತರ ನೀಡಿದ್ದರು. ಆದರೆ, ಉತ್ತರ ಸಮಾಧಾನ ತರಲಿಲ್ಲ ಎಂಬ ನೆಲೆಯಲ್ಲಿ ಡಿಡಿಪಿಯು ಅವರನ್ನು ಅಮಾನತು ಮಾಡಲಾಗಿದೆ. ಇದೀಗ ಕೊಕ್ಕಡ ಪಿಯು ಕಾಲೇಜು ಪ್ರಾಂಶುಪಾಲ ವೆಂಕಟೇಶಮೂರ್ತಿ ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಹುದ್ದೆಗೆ ಪ್ರಭಾರವಾಗಿ ನೇಮಕ ಮಾಡಲಾಗಿದೆ.
ಜಿಲ್ಲಾಧಿಕಾರಿಗಳು ಮೇ 9 ರಂದು ಚುನಾವಣೆಯ ಪೂರ್ವ ಸಿದ್ಧತೆ ಕುರಿತಂತೆ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ಹಾಜರಿರುವಂತೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಜಯಣ್ಣ ಅವರಿಗೆ ಫೋನ್ ಮೂಲಕ ಮಾಹಿತಿ ನೀಡಲಾಗಿತ್ತು. ಆಗ ಪೋನ್ ಸ್ವೀಕರಿಸಿದ ಜಯಣ್ಣ ಅವರು ತಾವು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ದಾಖಲೆಗಳನ್ನು ಸಲ್ಲಿಸಲು ಬೆಂಗಳೂರಿಗೆ ತೆರಳುತ್ತಿದ್ದೇನೆ, ಆದಕಾರಣ ಪತ್ರಿಕಾಗೋಷ್ಠಿಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು.
ಚುನಾವಣಾ ಪ್ರಕ್ರಿಯೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಯ ಅನುಮತಿಯನ್ನು ಪಡೆಯದೆ ಜಿಲ್ಲಾ ಕೇಂದ್ರವನ್ನು ತೊರೆಯುವ ಮೂಲಕ ಜಯಣ್ಣ ಅವರು ಚುನಾವಣಾ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಜಿಲ್ಲಾಧಿಕಾರಿ ನೋಟೀಸ್ ನೀಡಿದ್ದರು.
The district election officer, deputy commissioner (DC) Ravikumar M R has suspended Dakshina Kannada Pre-University Education department deputy director Jayanna C D over dereliction of duty during elections.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm