ಬ್ರೇಕಿಂಗ್ ನ್ಯೂಸ್
02-06-23 08:37 am Mangaluru Correspondent ಕರಾವಳಿ
ಪುತ್ತೂರು, ಜೂನ್ 2: ಪುತ್ತೂರಿನಿಂದ ಬೆಂಗಳೂರು ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ಕುಕ್ಕೆ ಸುಬ್ರಹ್ಮಣ್ಯ ಬಳಿ ತಡರಾತ್ರಿ ಕಾಡಾನೆ ದಾಳಿ ನಡೆಸಿದ್ದು ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಪುತ್ತೂರಿನಿಂದ ಕಾಣಿಯೂರು- ಸುಬ್ರಹ್ಮಣ್ಯ - ಗುಂಡ್ಯ ಮೂಲಕ ಬೆಂಗಳೂರು ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ಸಿಗೆ ಕಾಡಾನೆ ಅಡ್ಡ ಸಿಕ್ಕಿದೆ. ಸುಬ್ರಹ್ಮಣ್ಯ ಬಳಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ರಸ್ತೆ ಮಧ್ಯೆ ನಿಂತಿದ್ದ ಆನೆಯನ್ನು ನೋಡಿ ಬಸ್ಸಿನ ಚಾಲಕ ತಪ್ಪಿಸಲು ಯತ್ನ ಮಾಡಿದ್ದಾರೆ. ಈ ವೇಳೆ, ಕಾಡಾನೆ ಬಸ್ಸಿನ ಎಡಬದಿಗೆ ದಂತ ಮತ್ತು ಸೊಂಡಿಲಿನಿಂದ ತಿವಿದು ಹಾನಿಗೊಳಿಸಿದೆ, ಕೂಡಲೇ ಬಸ್ ಮುಂದಕ್ಕೆ ಚಲಿಸಿದ್ದು ಅಪಾಯದಿಂದ ಪಾರಾಗಿದೆ. ಆತಂಕಗೊಂಡಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದ ಬಗ್ಗೆ ನಿಟ್ಟುಸಿರು ಬಿಟ್ಟಿದ್ದಾರೆ.
ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದು, ದುರಂತ ತಪ್ಪಿದೆ ಎನ್ನುವ ಮಾತು ಕೇಳಿಬಂದಿದೆ. ಕೂಡಲೇ ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬಸ್ಸಿಗೆ ದೊಡ್ಡ ಮಟ್ಟದ ಹಾನಿಯಾಗಿಲ್ಲವೆಂದು ಕಂಡುಬಂದಿದ್ದರಿಂದ ನಸುಕಿನ ವೇಳೆಗೆ ಬಸ್ ಬೆಂಗಳೂರಿನತ್ತ ತೆರಳಿದೆ
Wild elephant attacks KSRTC bus at Subramanya Highway in Mangalore. The bus was going to Bangalore from Puttur, no casulaties have been reported. Due to the timely presence of the driver, a major incident has been averted.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm