ಬ್ರೇಕಿಂಗ್ ನ್ಯೂಸ್
04-06-23 07:21 pm Mangalore Correspondent ಕರಾವಳಿ
ಉಳ್ಳಾಲ, ಜೂ.4: ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ(55) ಅವರಿಂದು ಹೃದಯಾಘಾತದಿಂದ ಸಾವನ್ನಪ್ಪಿದ್ದು ಅವರ ಶವಯಾತ್ರೆಯಲ್ಲಿ ಭಾಗವಹಿಸಿದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಆಪ್ತನ ಶವದ ಚಟ್ಟಕ್ಕೆ ಹೆಗಲು ಕೊಟ್ಟು ಸರಳತೆ ಮೆರೆದಿದ್ದಾರೆ.
ಮುಡಿಪು ಮಿತ್ತಕೋಡಿ ನಿವಾಸಿ ಶರತ್ ಕಾಜವ ಇಂದು ನಸುಕಿನ ಜಾವ ಹೃದಯಾಘಾತಕ್ಕೊಳಗಾಗಿ ಅಕಾಲಿಕವಾಗಿ ಸಾವನ್ನಪ್ಪಿದ್ದರು. ವಿಷಯ ತಿಳಿದು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಿ ತಕ್ಷಣವೇ ಮಿತ್ತಕೋಡಿಯ ಶರತ್ ಕಾಜವ ಅವರ ನಿವಾಸಕ್ಕೆ ದೌಡಾಯಿಸಿದ್ದಾರೆ. ಕುಟುಂಬ, ಸಂಬಂಧಿಕರಿಗೆ ಧೈರ್ಯ ತುಂಬಿದ ಅವರು ಅಂತಿಮ ವಿಧಿ ವಿದಾನದಲ್ಲಿ ಪಾಲ್ಗೊಂಡದ್ದಲ್ಲದೆ ಶವದ ಚಟ್ಟಕ್ಕೂ ಹೆಗಲು ಕೊಟ್ಟು ಅಂತಿಮ ಯಾತ್ರೆಯಲ್ಲಿ ಸಾಗಿದ್ದಾರೆ.









ಈ ಮೂಲಕ ಕಾಂಗ್ರೆಸ್ ಹಿರಿಯ ಮುತ್ಸದ್ಧಿ ಜನಾರ್ದನ ಪೂಜಾರಿಯವರು ಹಾಕಿಕೊಟ್ಟ ಸಂಪ್ರದಾಯವನ್ನು ಮುಂದುವರಿಸಿದ ಶಾಸಕರು ಎಂಬ ಕೀರ್ತಿಗೆ ಯು.ಟಿ ಖಾದರ್ ಭಾಜನರಾಗಿದ್ದಾರೆ. ನರಿಂಗಾನ ಕಂಬಳ ಉತ್ಸವ ಸಮಿತಿಯ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವರ ಸಹೋದರ ಮೃತ ಶರತ್ ಕಾಜವ ಅವರು ಪ್ರಗತಿಪರ ಕೃಷಿಕ ವೆಂಕಪ್ಪ ಕಾಜವರ ಪುತ್ರ. ಕಂಬಳ ಸಮಿತಿಯ ಸದಸ್ಯರೂ ಆಗಿದ್ದ ಶರತ್ ಕಾಜವ ಅವರು ನರಿಂಗಾನ ಕಂಬಳದ ಯಶಸ್ಸಿಗಾಗಿ ವಾರಗಳ ಕಾಲ ದುಡಿದಿದ್ದರು. ತಾಯಿಯ ಅನಾರೋಗ್ಯ ಇದ್ದಾಗಲೂ ಕಂಬಳದ ಕರೆಯಲ್ಲಿ ಆಗಬೇಕಾದ ವ್ಯವಸ್ಥೆ ಬಗ್ಗೆ ತುಂಬ ಕಾಳಜಿ ವಹಿಸಿದ್ದರು. ಪ್ರಗತಿಪರ ಕೃಷಿಕರಾಗಿದ್ದ ಅವರು ಪತ್ನಿ, ಪುತ್ರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Mudipu block congress president brother Sharath dies of heart attack, Speaker Khader helps to carry body for last rites in Mangalore.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm