ಬ್ರೇಕಿಂಗ್ ನ್ಯೂಸ್
05-06-23 10:13 pm Mangalore Correspondent ಕರಾವಳಿ
ಮಂಗಳೂರು, ಜೂನ್ 5: ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಹಲ್ಲೆಗೀಡಾದ ಯುವಕರ ಪೈಕಿ ಒಬ್ಬನ ಸೋದರ ಪೊಲೀಸ್ ಕಮಿಷನರ್ ಗೆ ದೂರು ಕೊಟ್ಟು ಹೇಳಿಕೆ ಪಡೆಯುವ ಸಂದರ್ಭದಲ್ಲಿ ಉಳ್ಳಾಲ ಎಸ್ಐ ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾನೆ.
ಹಲ್ಲೆಗೀಡಾದ ಯುವಕರನ್ನು ಹೇಳಿಕೆ ಪಡೆಯುವುದಕ್ಕಾಗಿ ಘಟನೆ ನಡೆದ ಮಾರನೇ ದಿನ ಠಾಣೆಗೆ ಕರೆಸಲಾಗಿತ್ತು. ಈ ವೇಳೆ, ಆಶಿಕ್ ಎನ್ನುವಾತನ ಸೋದರ ಮಹಮ್ಮದ್ ಎಂಬಾತ ಜೊತೆಗೆ ಬಂದಿದ್ದು, ಇದೇ ರೀತಿ ಹೇಳಿಕೆ ನೀಡುವಂತೆ ಸೂಚಿಸುತ್ತಿದ್ದ ಎನ್ನಲಾಗಿದೆ. ಈ ವಿಚಾರದಲ್ಲಿ ಆಕ್ಷೇಪಿಸಿದ ಎಸ್ಐ ಸಂತೋಷ್, ನೀನು ಆ ಜಾಗದಲ್ಲಿ ಇರಲಿಲ್ಲ ಅಲ್ವಾ.. ನೀನು ಹೇಳಿದ ಹಾಗೆ ಬರೆಯಬೇಕು ಎಂದು ಹೇಳಿದರೆ ಹೇಗೆ.. ನೀನು ಹೊರಗೆ ಹೋಗು. ಅಲ್ಲಿದ್ದ ಯುವಕರು ಹೇಳಿದ ರೀತಿಯಲ್ಲಿ ಬರೆದುಕೊಳ್ತೇವೆ ಎಂದಿದ್ದಾರೆ.
ಇದನ್ನು ವಿರೋಧಿಸಿದ್ದ ಆ ವ್ಯಕ್ತಿ, ಪೊಲೀಸರಿಗೆ ನೋಡಿಕೊಳ್ತೇನೆ ಎಂದು ಹೇಳಿ ಹೊರಬಂದಿದ್ದನಂತೆ. ಇದೇ ವಿಚಾರದಲ್ಲಿ ಪೊಲೀಸ್ ಕಮಿಷನರ್ ಗೆ ದೂರು ಕೊಟ್ಟಿದ್ದು, ಹೇಳಿಕೆ ಪಡೆಯುವ ಸಂದರ್ಭದಲ್ಲಿ ಖಾಲಿ ಕಾಗದಕ್ಕೆ ಸಹಿ ಮಾಡಿಸಿದ್ದಾರೆ, ನಾವು ಹೇಳಿದ ರೀತಿಯಲ್ಲಿ ಹೇಳಿಕೆ ದಾಖಲು ಮಾಡಿಲ್ಲ. ವಿದ್ಯಾರ್ಥಿನಿಯರನ್ನು ಠಾಣೆಯಲ್ಲಿ ಕುಳ್ಳಿರಿಸಿ ಕಾಯುವಂತೆ ಮಾಡಿದ್ದಾರೆಂದು ಆರೋಪಿಸಿದ್ದಾನೆ. ದೂರಿನ ಬಗ್ಗೆ ತನಿಖೆ ನಡೆಸಲು ಪೊಲೀಸ್ ಕಮಿಷನರ್ ಕುಲದೀಪ್ ಜೈನ್, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್ ಅವರಿಗೆ ವಹಿಸಿದ್ದಾರೆ.
ಉಳ್ಳಾಲ ಪೊಲೀಸರಲ್ಲಿ ಈ ಬಗ್ಗೆ ಮಾಹಿತಿ ಕೇಳಿದಾಗ, ಯಾವುದೇ ಖಾಲಿ ಕಾಗದಕ್ಕೆ ಸಹಿ ಪಡೆದಿಲ್ಲ. ಹೇಳಿಕೆ ಪಡೆಯುವ ಸಂದರ್ಭದಲ್ಲಿ ಸೋದರ ಬಂದು ಆಕ್ಷೇಪಿಸಿದ್ದಕ್ಕೆ ಜೋರು ಮಾಡಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ. ಪ್ರಕರಣದಲ್ಲಿ ಕಾಸರಗೋಡು ಮೂಲದ ಮೂವರು ಯುವಕರಿಗೆ ಹಿಂದು ಸಂಘಟನೆಯ ಯುವಕರು ಹಲ್ಲೆ ನಡೆಸಿದ್ದರು. ಹಿಂದು ಯುವತಿಯರ ಜೊತೆಗೆ ಬೀಚ್ ನಲ್ಲಿ ಅಸಭ್ಯವಾಗಿ ವರ್ತಿಸಿದ್ದಕ್ಕೆ ಹಲ್ಲೆ ನಡೆಸಿದ್ದಾಗಿ ಯುವಕರ ಕಡೆಯವರು ಸ್ಪಷ್ಟನೆ ನೀಡುತ್ತಿದ್ದಾರೆ. ಪ್ರಕರಣ ಸಂಬಂಧಿಸಿ ಎಂಟು ಮಂದಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
Mangalore Moral Policing, victims allege of beaten up by Ullal Police Inspector, Kuldeep Jain orders for enquiry on this matter. The victim also has alleged that the Inapector has taken his signature on blank paper. Commissioner Kuldeep has ordered a probe through DCP.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm