ಬ್ರೇಕಿಂಗ್ ನ್ಯೂಸ್
05-06-23 10:13 pm Mangalore Correspondent ಕರಾವಳಿ
ಮಂಗಳೂರು, ಜೂನ್ 5: ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಹಲ್ಲೆಗೀಡಾದ ಯುವಕರ ಪೈಕಿ ಒಬ್ಬನ ಸೋದರ ಪೊಲೀಸ್ ಕಮಿಷನರ್ ಗೆ ದೂರು ಕೊಟ್ಟು ಹೇಳಿಕೆ ಪಡೆಯುವ ಸಂದರ್ಭದಲ್ಲಿ ಉಳ್ಳಾಲ ಎಸ್ಐ ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾನೆ.
ಹಲ್ಲೆಗೀಡಾದ ಯುವಕರನ್ನು ಹೇಳಿಕೆ ಪಡೆಯುವುದಕ್ಕಾಗಿ ಘಟನೆ ನಡೆದ ಮಾರನೇ ದಿನ ಠಾಣೆಗೆ ಕರೆಸಲಾಗಿತ್ತು. ಈ ವೇಳೆ, ಆಶಿಕ್ ಎನ್ನುವಾತನ ಸೋದರ ಮಹಮ್ಮದ್ ಎಂಬಾತ ಜೊತೆಗೆ ಬಂದಿದ್ದು, ಇದೇ ರೀತಿ ಹೇಳಿಕೆ ನೀಡುವಂತೆ ಸೂಚಿಸುತ್ತಿದ್ದ ಎನ್ನಲಾಗಿದೆ. ಈ ವಿಚಾರದಲ್ಲಿ ಆಕ್ಷೇಪಿಸಿದ ಎಸ್ಐ ಸಂತೋಷ್, ನೀನು ಆ ಜಾಗದಲ್ಲಿ ಇರಲಿಲ್ಲ ಅಲ್ವಾ.. ನೀನು ಹೇಳಿದ ಹಾಗೆ ಬರೆಯಬೇಕು ಎಂದು ಹೇಳಿದರೆ ಹೇಗೆ.. ನೀನು ಹೊರಗೆ ಹೋಗು. ಅಲ್ಲಿದ್ದ ಯುವಕರು ಹೇಳಿದ ರೀತಿಯಲ್ಲಿ ಬರೆದುಕೊಳ್ತೇವೆ ಎಂದಿದ್ದಾರೆ.
ಇದನ್ನು ವಿರೋಧಿಸಿದ್ದ ಆ ವ್ಯಕ್ತಿ, ಪೊಲೀಸರಿಗೆ ನೋಡಿಕೊಳ್ತೇನೆ ಎಂದು ಹೇಳಿ ಹೊರಬಂದಿದ್ದನಂತೆ. ಇದೇ ವಿಚಾರದಲ್ಲಿ ಪೊಲೀಸ್ ಕಮಿಷನರ್ ಗೆ ದೂರು ಕೊಟ್ಟಿದ್ದು, ಹೇಳಿಕೆ ಪಡೆಯುವ ಸಂದರ್ಭದಲ್ಲಿ ಖಾಲಿ ಕಾಗದಕ್ಕೆ ಸಹಿ ಮಾಡಿಸಿದ್ದಾರೆ, ನಾವು ಹೇಳಿದ ರೀತಿಯಲ್ಲಿ ಹೇಳಿಕೆ ದಾಖಲು ಮಾಡಿಲ್ಲ. ವಿದ್ಯಾರ್ಥಿನಿಯರನ್ನು ಠಾಣೆಯಲ್ಲಿ ಕುಳ್ಳಿರಿಸಿ ಕಾಯುವಂತೆ ಮಾಡಿದ್ದಾರೆಂದು ಆರೋಪಿಸಿದ್ದಾನೆ. ದೂರಿನ ಬಗ್ಗೆ ತನಿಖೆ ನಡೆಸಲು ಪೊಲೀಸ್ ಕಮಿಷನರ್ ಕುಲದೀಪ್ ಜೈನ್, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್ ಅವರಿಗೆ ವಹಿಸಿದ್ದಾರೆ.
ಉಳ್ಳಾಲ ಪೊಲೀಸರಲ್ಲಿ ಈ ಬಗ್ಗೆ ಮಾಹಿತಿ ಕೇಳಿದಾಗ, ಯಾವುದೇ ಖಾಲಿ ಕಾಗದಕ್ಕೆ ಸಹಿ ಪಡೆದಿಲ್ಲ. ಹೇಳಿಕೆ ಪಡೆಯುವ ಸಂದರ್ಭದಲ್ಲಿ ಸೋದರ ಬಂದು ಆಕ್ಷೇಪಿಸಿದ್ದಕ್ಕೆ ಜೋರು ಮಾಡಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ. ಪ್ರಕರಣದಲ್ಲಿ ಕಾಸರಗೋಡು ಮೂಲದ ಮೂವರು ಯುವಕರಿಗೆ ಹಿಂದು ಸಂಘಟನೆಯ ಯುವಕರು ಹಲ್ಲೆ ನಡೆಸಿದ್ದರು. ಹಿಂದು ಯುವತಿಯರ ಜೊತೆಗೆ ಬೀಚ್ ನಲ್ಲಿ ಅಸಭ್ಯವಾಗಿ ವರ್ತಿಸಿದ್ದಕ್ಕೆ ಹಲ್ಲೆ ನಡೆಸಿದ್ದಾಗಿ ಯುವಕರ ಕಡೆಯವರು ಸ್ಪಷ್ಟನೆ ನೀಡುತ್ತಿದ್ದಾರೆ. ಪ್ರಕರಣ ಸಂಬಂಧಿಸಿ ಎಂಟು ಮಂದಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
Mangalore Moral Policing, victims allege of beaten up by Ullal Police Inspector, Kuldeep Jain orders for enquiry on this matter. The victim also has alleged that the Inapector has taken his signature on blank paper. Commissioner Kuldeep has ordered a probe through DCP.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm