ಬ್ರೇಕಿಂಗ್ ನ್ಯೂಸ್
06-06-23 11:00 pm Mangalore Correspondent ಕರಾವಳಿ
ಮಂಗಳೂರು, ಜೂನ್ 6: ರಾಜ್ಯದ ಜನ ಬಿಜೆಪಿ ಮೇಲಿನ ಆಕ್ರೋಶದಿಂದ ನಮಗೆ ಮತ ಹಾಕಿದ್ದಾರೆ. ಕಾಂಗ್ರೆಸ್ ಮತ್ತು ಅದರ ನಾಯಕತ್ವ ನಂಬಿ ನಮಗೆ 135 ಸೀಟ್ ಕೊಟ್ಟಿದ್ದಾರೆ. ನಾವು ಐದು ಗ್ಯಾರಂಟಿ ತಯಾರು ಮಾಡಿ ಕೊಟ್ಟಿದ್ದೆವು. ನಾವೇನು ಗ್ಯಾರಂಟಿ ಘೋಷಣೆಯನ್ನು ಬೇಕಾಬಿಟ್ಟಿ ತೀರ್ಮಾನಿಸಿರಲಿಲ್ಲ. ಹಣಕಾಸು ಖರ್ಚಿನ ಲೆಕ್ಕಾಚಾರ ಮಾಡಿ ಸಾದ್ಯತೆ ಬಳಿಕ ಪ್ರಕಟ ಮಾಡಿದ್ದೆವು ಎಂದು ಪ್ರಣಾಳಿಕೆ ಸಮಿತಿ ಅಧ್ಯಕ್ಷರೂ ಆಗಿದ್ದ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದನೆ ಸ್ವೀಕರಿಸಿ, ಕಾರ್ಯಕರ್ತರನ್ನುದ್ದೇಶಿ ಪರಮೇಶ್ವರ್ ಭಾಷಣ ಮಾಡಿದರು. ನಾವು ಯಾವುದೇ ಬೇಜವಾಬ್ದಾರಿಯಿಂದ ಗ್ಯಾರಂಟಿ ಘೋಷಣೆ ಮಾಡಿಲ್ಲ. ಕಾಂಗ್ರೆಸ್ ಗ್ಯಾರಂಟಿ ಕೊಟ್ಟು ದಿವಾಳಿ ಮಾಡುತ್ತೆ ಅಂತ ಬಿಜೆಪಿ ಮತ್ತು ಮೋದಿ ಹೇಳ್ತಾ ಇದಾರೆ. ಆದರೆ ನಾವು ಗ್ಯಾರಂಟಿ ಘೋಷಣೆಯನ್ನು ಯಾವುದೇ ಬೇಜವಾಬ್ದಾರಿಯಿಂದ ಮಾಡಿರಲಿಲ್ಲ ಎಂದರು.

ಗೃಹ ಇಲಾಖೆ ನನಗೆ ಈ ಬಾರಿ ಹ್ಯಾಟ್ರಿಕ್ ಸಿಕ್ಕಿದೆ, ಈ ಖಾತೆ ಕೊಟ್ಟಾಗ ನಾನು ಸಿದ್ದರಾಮಯ್ಯರಿಗೆ ಹೇಳಿದೆ. ನಿಮಗೆ ಯಾಕೆ ಇಷ್ಟು ಪ್ರೀತಿ? ಜನರಿಗೆ ಸೇವೆ ಮಾಡಲು ಬೇರೆ ಖಾತೆ ಕೊಡಿ ಅಂದೆ. ಸೆಲ್ಯೂಟ್ , ಸೆಲ್ಯೂಟ್ ಒಂದೇ ಆಯ್ತು ನನಗೆ ಅಂದಿದ್ದೆ. ಆದರೆ ಅವರು ದ.ಕ ಜಿಲ್ಲೆಯರಿಗೆ ನೀವೇ ಹೋಂ ಮಿನಿಸ್ಟರ್ ಆಗಬೇಕು ಅಂದ್ರು.
ಸದ್ಯ ಪೊಲೀಸರ ಸಭೆ ನಡೆಸಿ ಕಠಿಣ ಕ್ರಮಗಳ ಬಗ್ಗೆ ಸೂಚಿಸಿದ್ದೇನೆ. ಯಾವುದೇ ಕಾರಣಕ್ಕೂ ನೈತಿಕ ಪೊಲೀಸ್ ಗಿರಿ ಸಹಿಸಲ್ಲ ಅಂದಿದ್ದೇನೆ. ಪ್ರಣಾಳಿಕೆ ರಚನೆ ವೇಳೆ ಚೇಂಬರ್ ಆಫ್ ಕಾಮರ್ಸ್ ನವರು ಹೇಳಿದ್ದರು. ಕೋಮು ವಿಚಾರದ ಕಾರಣಕ್ಕೆ ಇಲ್ಲಿ ಇನ್ವೆಸ್ಟ್ ಮೆಂಟ್ ಬರಲ್ಲ ಅಂದ್ರು. ಅದಕ್ಕಾಗಿ ಇಲ್ಲಿನ ವಾತಾವರಣ ಬದಲಾಗಬೇಕು. ಪೊಲೀಸ್ ಅಧಿಕಾರಿಗಳಿಗೆ ಈ ಬಗ್ಗೆ ಖಡಕ್ ಸೂಚನೆ ಕೊಟ್ಟಿದ್ದೇನೆ.
ಮೊದಲು ಹೇಗೆ ಇದ್ರೋ ಗೊತ್ತಿಲ್ಲ, ಏನೇನ್ ಆಟ ಆಡಿದ್ರೋ ಗೊತ್ತಿಲ್ಲ. ಕೇಸರಿಕರಣ ಮಾಡಿದ್ರೋ ಮತ್ತೊಂದು ಈಗ ನನಗೆ ಅಗತ್ಯ ಇಲ್ಲ. ಆದರೆ ಇನ್ನು ಮುಂದೆ ಪೊಲೀಸರು ಸರಿಯಾಗಿ ಕೆಲಸ ಮಾಡಬೇಕು. ಮಾಡದೇ ಇದ್ರೆ ನಮ್ಮ ಔಷಧಾಲಯದಲ್ಲಿ ಬೇರೆ ಔಷಧಿ ಇದೆ ಎಂದು ಖಡಕ್ಕಾಗಿ ಹೇಳಿದರು. ಮತ್ತೆ ಗೃಹ ಸಚಿವ ಸ್ಥಾನದ ಪೋಸ್ಟ್ ನನಗೇ ಸಿಕ್ಕಿದೆ, ನಾನು ಈ ಜಿಲ್ಲೆಯನ್ನ ಸರಿ ಮಾಡ್ತೇನೆ. ಇಲ್ಲಿ ಕಾಂಗ್ರೆಸ್ ಸೋತಿದೆ ಅನ್ನೋ ಭಾವನೆ ಬೇಡ. ಇವತ್ತು ಅಧಿಕಾರ ಸಿಕ್ಕಿದೆ, ಸರ್ಕಾರ ನಿಮ್ಮ ಸರ್ಕಾರ, ನಿಮ್ಮ ಜೊತೇಲಿ ಇರಲಿದೆ ಎಂದರು.
If Police Department doesn't work duly we have a medicine for them says Home Minister G. Parameshwara in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm