ಬ್ರೇಕಿಂಗ್ ನ್ಯೂಸ್
07-06-23 12:23 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ಕರಾವಳಿಯಲ್ಲಿ ಇನ್ನೂ ಮಳೆ ಶುರುವಾಗದ ಕಾರಣ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತೀವ್ರ ಜಲಕ್ಷಾಮದಿಂದಾಗಿ ಭಕ್ತರಿಗೆ ಬಿಸಿ ತಟ್ಟಿದೆ. ಕಟೀಲು ದೇಗುಲದಲ್ಲಿ ದಿನವೂ 15ರಿಂದ 20 ಸಾವಿರ ಭಕ್ತರು ಭೇಟಿ ನೀಡುತ್ತಿದ್ದು, ಎಲ್ಲರಿಗೂ ಊಟದ ವ್ಯವಸ್ಥೆ ಇದೆ. ಆದರೆ ಈಗ ನೀರಿನ ಕೊರತೆಯಿಂದಾಗಿ ಸಮಸ್ಯೆ ಎದುರಾಗಿದೆ.
ಊಟಕ್ಕೆ ಪ್ಲೇಟ್ ಬದಲು ಬಳಸಿ ಎಸೆಯುವ ಹಾಳೆ ತಟ್ಟೆ, ಬಾಳೆ ಎಲೆಯನ್ನು ಬಳಸಲಾಗುತ್ತಿದೆ. ದೇಗುಲ ಪ್ರವೇಶ ದ್ವಾರದಲ್ಲಿ ಭಕ್ತರು ಕೈಕಾಲು ತೊಳೆಯುವ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ದೇಗುಲದ ಸಮಗ್ರ ವ್ಯವಸ್ಥೆಗೆ ದಿನಂಪ್ರತಿ 7 ಲಕ್ಷ ಲೀಟರ್ ನೀರಿನ ಅಗತ್ಯವಿದ್ದು ನೀರು ಸರಬರಾಜು ಮಾಡುತ್ತಿದ್ದ ಬೋರ್ ವೆಲ್ಗಳೂ ಬತ್ತಲಾರಂಭಿಸಿವೆ. ಬೋರ್ ವೆಲ್ನಲ್ಲಿ ಪ್ರತಿ ದಿನ 10ರಿಂದ 15 ನಿಮಿಷ ಮಾತ್ರ ನೀರು ಬರುತ್ತಿದ್ದು, ಖಾಸಗಿ ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೂ ಶೌಚಾಲಯ, ಅತಿಥಿ ಗೃಹಗಳಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗಿದೆ.
ಕಟೀಲು ದೇವಸ್ಥಾನಕ್ಕೆ ಸಂಬಂಧಪಟ್ಟ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸಿಬಂದಿ ಸೇರಿ ಸುಮಾರು 3 ಸಾವಿರ ಮಂದಿಯಿದ್ದು ನೀರಿನ ಸಮಸ್ಯೆಯಿಂದಾಗಿ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಅರ್ಧ ದಿನಕ್ಕೆ ತರಗತಿಗಳನ್ನು ನಡೆಸಲಾಗುತ್ತಿದೆ. ಶಾಲೆಯಲ್ಲಿ ಮಧ್ಯಾಹ್ನದ ಊಟ ತಯಾರಿಸಲು ನೀರಿನ ಕೊರತೆ ಎದುರಾಗಿದ್ದರಿಂದ ಅರ್ಧ ದಿನಕ್ಕೆ ಶಾಲೆ ಬಿಡಲಾಗುತ್ತಿದೆ. ಕಟೀಲು ದೇವಸ್ಥಾನದ ಗೋಶಾಲೆಗಳಿಗೂ ನೀರಿನ ಸಮಸ್ಯೆ ಎದುರಾಗಿದ್ದು, ಟ್ಯಾಂಕರ್ ನಲ್ಲಿ ನೀರು ತರಿಸಲಾಗುತ್ತಿದೆ. ದೇವಸ್ಥಾನವನ್ನು ಸುತ್ತುವರಿದು ಹರಿಯುವ ನಂದಿನಿ ನದಿ ಪೂರ್ತಿಯಾಗಿ ಬತ್ತಿ ಹೋಗಿದ್ದು, ನೀರಿನ ಸಂಪನ್ಮೂಲ ಕಂಡುಕೊಳ್ಳಲು ಮತ್ತೆ ಬಾವಿ ಕೊರೆಯಲು ದೇವಸ್ಥಾನದ ಆಡಳಿತ ಮಂಡಳಿ ಚಿಂತನೆ ನಡೆಸಿದೆ. ಮಳೆ ಬಂದು ನೀರು ತುಂಬಿಕೊಳ್ಳುವ ವರೆಗೂ ಕಟೀಲು ದೇಗುಲದಲ್ಲಿ ನೀರಿಗೆ ಸಮಸ್ಯೆ ಎದುರಾಗಲಿದೆ.
Scorching Summer, no water even to wash hands and legs at Kateel Temple in Mangalore
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm