ಬ್ರೇಕಿಂಗ್ ನ್ಯೂಸ್
07-06-23 02:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ವಾಮಂಜೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿದ್ದ ಹುಲಿಯೊಂದು ದಿಢೀರ್ ಸಾವನ್ನಪ್ಪಿದ ಘಟನೆ ನಡೆದಿದೆ. ನೇತ್ರಾವತಿ ಹೆಸರಿನ 15 ವರ್ಷ ಪ್ರಾಯದ ಹೆಣ್ಣು ಹುಲಿ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾಗಿ ಪಿಲಿಕುಳ ಉದ್ಯಾನವನದ ನಿರ್ದೇಶಕ ಜಯಕರ ಭಂಡಾರಿ ತಿಳಿಸಿದ್ದಾರೆ.
ಪಿಲಿಕುಳದ ಅಧಿಕಾರಿಗಳ ಮಾಹಿತಿ ಪ್ರಕಾರ, ಜೂನ್ 4ರಂದು ರೇವಾ ಹೆಸರಿನ ಆರು ವರ್ಷ ಪ್ರಾಯದ ಗಂಡು ಹುಲಿ ಬೆದೆಗೆ ಬಂದು ಹೆಣ್ಣು ಹುಲಿಯೊಂದಿಗೆ ಮಿಲನಕ್ಕೆ ಮುಂದಾಗಿತ್ತು. ಇದನ್ನು ವಿರೋಧಿಸಿ ಹೆಣ್ಣು ಹುಲಿ, ಗಂಡು ಹುಲಿಯ ಮೇಲೆ ದಾಳಿ ನಡೆಸಿತ್ತು. ಈ ವೇಳೆ, ಎರಡು ಹುಲಿಗಳ ನಡುವೆ ಕಚ್ಚಾಟ ನಡೆದು ಹೆಣ್ಣು ಹುಲಿ ಗಾಯಗೊಂಡಿತ್ತು. ಆನಂತರ, ಹುಲಿಗೆ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ 9.30ರ ಸುಮಾರಿಗೆ ಸಾವು ಕಂಡಿದೆ ಎಂದು ಭಂಡಾರಿ ತಿಳಿಸಿದ್ದಾರೆ.

ನೇತ್ರಾವತಿ ಮತ್ತು ರೇವಾ ಹುಲಿಗಳು ಪಿಲಿಕುಳ ಉದ್ಯಾನವನದಲ್ಲಿಯೇ ಜನಿಸಿದ ಹುಲಿಗಳಾಗಿದ್ದು ಸದ್ಯಕ್ಕೆ ಪಿಲಿಕುಳದಲ್ಲಿ ಎಂಟು ಹುಲಿಗಳಿವೆ. ಕಚ್ಚಾಟದಿಂದ ಎರಡೂ ಹುಲಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಹೃದಯಾಘಾತದಿಂದ ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಅಲ್ಲಿನ ಸಿಬಂದಿ ತಿಳಿಸಿದ್ದಾರೆ. ಆಂತರಿಕ ಗಾಯ ಮತ್ತು ಕಾರಣಗಳನ್ನು ಮರಣೋತ್ತರ ಪರೀಕ್ಷೆಯಿಂದ ತಿಳಿಯಲಾಗುವುದು ಎಂದು ಜಯಕರ ಭಂಡಾರಿ ತಿಳಿಸಿದ್ದಾರೆ. ಗಂಡು ಹುಲಿ ರೇವಾನಿಗೂ ಗಾಯಗಳಾಗಿದ್ದು, ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಹುಲಿಗಳ ಕಚ್ಚಾಟದಿಂದಲೇ ಸಾವು ಆಗಿದೆಯೇ, ಬಿಸಿಲಿನ ಹೆಚ್ಚಳ ಅಥವಾ ಆಹಾರದ ಕೊರತೆಯಿಂದ ಸಾವು ಸಂಭವಿಸಿದೆಯೇ ಎನ್ನುವ ಕುರಿತಾಗಿಯೂ ಶಂಕೆಗಳಿವೆ.
Tiger killed in tiger battle at Pilikula in Mangalore.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm