ಬ್ರೇಕಿಂಗ್ ನ್ಯೂಸ್
07-06-23 02:04 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ವಾಮಂಜೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿದ್ದ ಹುಲಿಯೊಂದು ದಿಢೀರ್ ಸಾವನ್ನಪ್ಪಿದ ಘಟನೆ ನಡೆದಿದೆ. ನೇತ್ರಾವತಿ ಹೆಸರಿನ 15 ವರ್ಷ ಪ್ರಾಯದ ಹೆಣ್ಣು ಹುಲಿ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾಗಿ ಪಿಲಿಕುಳ ಉದ್ಯಾನವನದ ನಿರ್ದೇಶಕ ಜಯಕರ ಭಂಡಾರಿ ತಿಳಿಸಿದ್ದಾರೆ.
ಪಿಲಿಕುಳದ ಅಧಿಕಾರಿಗಳ ಮಾಹಿತಿ ಪ್ರಕಾರ, ಜೂನ್ 4ರಂದು ರೇವಾ ಹೆಸರಿನ ಆರು ವರ್ಷ ಪ್ರಾಯದ ಗಂಡು ಹುಲಿ ಬೆದೆಗೆ ಬಂದು ಹೆಣ್ಣು ಹುಲಿಯೊಂದಿಗೆ ಮಿಲನಕ್ಕೆ ಮುಂದಾಗಿತ್ತು. ಇದನ್ನು ವಿರೋಧಿಸಿ ಹೆಣ್ಣು ಹುಲಿ, ಗಂಡು ಹುಲಿಯ ಮೇಲೆ ದಾಳಿ ನಡೆಸಿತ್ತು. ಈ ವೇಳೆ, ಎರಡು ಹುಲಿಗಳ ನಡುವೆ ಕಚ್ಚಾಟ ನಡೆದು ಹೆಣ್ಣು ಹುಲಿ ಗಾಯಗೊಂಡಿತ್ತು. ಆನಂತರ, ಹುಲಿಗೆ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ 9.30ರ ಸುಮಾರಿಗೆ ಸಾವು ಕಂಡಿದೆ ಎಂದು ಭಂಡಾರಿ ತಿಳಿಸಿದ್ದಾರೆ.

ನೇತ್ರಾವತಿ ಮತ್ತು ರೇವಾ ಹುಲಿಗಳು ಪಿಲಿಕುಳ ಉದ್ಯಾನವನದಲ್ಲಿಯೇ ಜನಿಸಿದ ಹುಲಿಗಳಾಗಿದ್ದು ಸದ್ಯಕ್ಕೆ ಪಿಲಿಕುಳದಲ್ಲಿ ಎಂಟು ಹುಲಿಗಳಿವೆ. ಕಚ್ಚಾಟದಿಂದ ಎರಡೂ ಹುಲಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಹೃದಯಾಘಾತದಿಂದ ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಅಲ್ಲಿನ ಸಿಬಂದಿ ತಿಳಿಸಿದ್ದಾರೆ. ಆಂತರಿಕ ಗಾಯ ಮತ್ತು ಕಾರಣಗಳನ್ನು ಮರಣೋತ್ತರ ಪರೀಕ್ಷೆಯಿಂದ ತಿಳಿಯಲಾಗುವುದು ಎಂದು ಜಯಕರ ಭಂಡಾರಿ ತಿಳಿಸಿದ್ದಾರೆ. ಗಂಡು ಹುಲಿ ರೇವಾನಿಗೂ ಗಾಯಗಳಾಗಿದ್ದು, ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಹುಲಿಗಳ ಕಚ್ಚಾಟದಿಂದಲೇ ಸಾವು ಆಗಿದೆಯೇ, ಬಿಸಿಲಿನ ಹೆಚ್ಚಳ ಅಥವಾ ಆಹಾರದ ಕೊರತೆಯಿಂದ ಸಾವು ಸಂಭವಿಸಿದೆಯೇ ಎನ್ನುವ ಕುರಿತಾಗಿಯೂ ಶಂಕೆಗಳಿವೆ.
Tiger killed in tiger battle at Pilikula in Mangalore.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm