ಬ್ರೇಕಿಂಗ್ ನ್ಯೂಸ್
07-06-23 09:13 pm Mangalore Correspondent ಕರಾವಳಿ
ಮಂಗಳೂರು, ಜೂ.7: ಹೃದಯ ಸಂಬಂಧಿತ ಕಾಯಿಲೆಗಳ ತಪಾಸಣೆ ನಡೆಸುವುದಕ್ಕಾಗಿ ಹೃದಯ ತಜ್ಞರೇ ಹಳ್ಳಿ ಹಳ್ಳಿಗೆ ತೆರಳಿ, ಜನರನ್ನು ಉಚಿತವಾಗಿ ಪರೀಕ್ಷೆ ನಡೆಸುವ ಹೃದಯ ವೈಶಾಲ್ಯ ಯೋಜನೆಯನ್ನು ಇಡೀ ದೇಶದಲ್ಲಿ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿಗೆ ತರಲಾಗಿದೆ.
ಬುಧವಾರ ಮೂಡುಬಿದಿರೆ ಆರೋಗ್ಯ ಕೇಂದ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕಾರ್ಡಿಯಾಲಜಿ ಡೋರ್ ಸ್ಟೆಪ್ ಫೌಂಡೇಶನ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಹಾಗೂ ತಂಡದವರಿಂದ "ಹೃದಯ ತಜ್ಞ ಮನೆ ಬಾಗಿಲಿಗೆ" ಯೋಜನೆಗೆ ಚಾಲನೆ ನೀಡಲಾಯಿತು.



ಈ ವೇಳೆ ಮಾತನಾಡಿದ ಜಿಪಂ ಸಿಇಓ ಡಾ.ಕುಮಾರ್, ಯೋಜನೆಯನ್ನು ಜಿಲ್ಲೆಯಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿರುವ ಬಗ್ಗೆ ರಾಜ್ಯದ ಪ್ರಧಾನ ಕಾರ್ಯದರ್ಶಿ ಅವರ ಗಮನಕ್ಕೆ ತರಲಾಗಿದೆ, ಯೋಜನೆಯ ಸೂತ್ರಧಾರಿ ಹೃದಯ ತಜ್ಞ ಡಾ| ಪದ್ಮನಾಭ ಕಾಮತ್ ಅವರ ಚಿಂತನೆಯಲ್ಲಿ ಯೋಜನೆ ಮೂಡಿಬಂದಿದ್ದು ಗ್ರಾಮೀಣ ಜನರ ಆರೋಗ್ಯದ ದೃಷ್ಠಿಯಿಂದ ವೈದ್ಯಕೀಯ ಸೌಲಭ್ಯಗಳು ಗ್ರಾಮೀಣ ಪ್ರದೇಶದಲ್ಲಿ, ಅವರ ಮನೆ ಬಾಗಿಲಲ್ಲೇ ಸಿಗಬೇಕೆನ್ನುವ ನಿಟ್ಟಿನಲ್ಲಿ ಹೃದಯ ವೈಶಾಲ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಪ್ರತೀ ಬುಧವಾರ ತಜ್ಞ ವೈದ್ಯರು ಸಂಬಂಧಪಟ್ಟ ಪ್ರಾಥಮಿಕ ಆರೋಗ್ಯಕೇಂದ್ರ ಅಥವಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದು ಸಾರ್ವಜನಿಕರನ್ನು ಉಚಿತವಾಗಿ ತಪಾಸಣೆ ಮಾಡಲಿದ್ದಾರೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.



ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಮಾತನಾಡಿ, ಹೃದಯ ವೈಶಾಲ್ಯ ಯೋಜನೆ ಜಿಲ್ಲೆಗೆ ಮಾತ್ರ ಸೀಮಿತವಾಗದೇ, ರಾಜ್ಯ ಮಟ್ಟದಲ್ಲಿ ಬೆಳೆಯಲಿ ಎನ್ನುವ ಆಶಯವಿದೆ. ಯೋಜನೆಯನ್ನು ಯಶಸ್ವಿಗೊಳಿಸುವ ಜಾವಬ್ದಾರಿ ಊರಿನ ಜನರು ಹಾಗೂ ಆರೋಗ್ಯಾಧಿಕಾರಿಗಳ ಮೇಲಿದೆ. ಈ ಯೋಜನೆಯನ್ನು ಮುಂದೆಯೂ ಎಲ್ಲಾ ಕಡೆಗಳಲ್ಲಿ ಅನುಷ್ಠಾನ ತರಲಾಗುವುದು ಎಂದರು.
ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪುರಸಭಾ ಸದಸ್ಯೆ ಶ್ವೇತಾ ಪ್ರವೀಣ್ ಜೈನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ನೋಡಲ್ ಅಧಿಕಾರಿ ಡಾ| ಜಗದೀಶ್, ಪುರಸಭಾ ಮುಖ್ಯಾಧಿಕಾರಿ ಶಿವ ನಾಯ್ಕ್ ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಸುಜಯ್, ವಕೀಲ ಬಾಹುಬಲಿ ಪ್ರಸಾದ್, ಮತ್ತಿತರ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗ, ಫಲಾನುಭವಿಗಳು ಈ ಸಂದರ್ಭದಲ್ಲಿದ್ದರು.
Mangalore Free Heart Check at door service in Dakshina Kannada under Cardiologist Dr Padmanabha Kamath.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm