ಬ್ರೇಕಿಂಗ್ ನ್ಯೂಸ್
07-06-23 11:09 pm Mangalore Correspondent ಕರಾವಳಿ
ಮಂಗಳೂರು, ಜೂ, 07: ಭಾರತೀಯ ರೈಲ್ವೆಯು ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಹೆಚ್ಚುವರಿ ರೈಲುಗಳನ್ನು ಬಿಡುತ್ತಲೇ ಇದೆ. ಹಾಗೆಯೆ ಮತ್ತೊಂದೆ ಹಬ್ಬ, ಹರಿದಿನಗಳ ಸಂದರ್ಭದಲ್ಲೂ ಸಹ ವಿಶೇಷ ರೈಲುಗಳ ವ್ಯವಸ್ಥೆಯನ್ನು ಸಹ ಕಲ್ಪಿಸುತ್ತಲೇ ಬಂದಿದೆ.
ಹಾಗೆಯೆ ಇದೀಗ ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ಬಿಡಲು ನಿರ್ಧರಿಸಿದೆ. ಹಾಗಾದರೆ ಈ ರೈಲು ಪ್ರಾರಂಭ ಆಗುವ ದಿನಾಂಕಗಳು ಮತ್ತು ಮಾರ್ಗಗಳ ವಿವರವನ್ನು ಇಲ್ಲಿ ತಿಳಿಯಿರಿ.
ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಸುವ ಸಲುವಾಗಿ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಜೂನ್ 9ರಿಂದ ಅಹಮದಾಬಾದ್ ಮತ್ತು ಮಂಗಳೂರು ನಡುವೆ ವಿಶೇಷ ಸಾಪ್ತಾಹಿಕ ರೈಲು ಬಿಡಲು ಭಾರತೀಯ ರೈಲ್ವೆ ನಿರ್ಧಾರ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 09424 ಮತ್ತು 09423 ಸಂಖ್ಯೆಯ ರೈಲು ಅಹಮದಾಬಾದ್ ಮತ್ತು ಮಂಗಳೂರು ನಡುವೆ ಸಂಚಾರ ಆಂರಂಭಿಸಲಿದೆ. ಅಲ್ಲದೆ ವಿಶೇಷ ರೈಲು ದರ ಪಾವತಿಸಿ ಈ ರೈಲಿನಲ್ಲಿ ಸಂಚಾರ ಮಾಡಬಹುದಾಗಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ಕೆಲವು ದಿನಗಳ ಹಿಂದೆಯಷ್ಟೇ ಒಡಿಶಾದ ಬಾಲಸೋರ್ನಲ್ಲಿ ನಡೆದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಈ ಹಿನ್ನೆ ರೈಲುಗಳಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳು ದೃಷ್ಟಿಯಿಂದ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ವಿಶೇಷ ರೈಲು ಸಂಚಾರ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು 09424 ಸಂಖ್ಯೆಯ ರೈಲು ಶುಕ್ರವಾರ ಸಂಜೆ 4 ಗಂಟೆಗೆ ಅಂದರೆ ಜೂನ್ 9ರಿಂದ ಆರಂಭವಾಗಲಿದೆ. ಅಹಮದಾಬಾದ್ನಿಂದ ಆರಂಭವಾಗುವ ಈ ರೈಲು ಜೂನ್ 9, 16 ಮತ್ತು 23 ಮೂರು ದಿನಗಳ ಕಾಲ ಸಂಚಾರ ಮಾಡಲಿದೆ. ನಂತರ ಶನಿವಾರ ಸಂಜೆ 7:40ಕ್ಕೆ ಮಂಗಳೂರು ತಲುಪಲಿದೆ.
ಹಾಗೆಯೆ 09423 ಸಂಖ್ಯೆಯ ರೈಲು ಜೂನ್ 10, 17 ಮತ್ತು 24 ರಂದು ಶನಿವಾರ ರಾತ್ರಿ 9:10ಕ್ಕೆ ಮಂಗಳೂರಿನ ಜಂಕ್ಷನ್ನಿಂದ ಹೊರಟು, ಸೋಮವಾರದಂದು (ಜೂನ್ 25) ಮುಂಜಾನೆ 1:15ಕ್ಕೆ ಅಹಮದಾಬಾದ್ ಜಂಕ್ಷನ್ಗೆ ತಲುಪುತ್ತದೆ ಎಂದು ತಿಳಿಸಿದೆ.
Mangalore Ahmedabad train to start from June 9th.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm