ಬ್ರೇಕಿಂಗ್ ನ್ಯೂಸ್
07-06-23 11:09 pm Mangalore Correspondent ಕರಾವಳಿ
ಮಂಗಳೂರು, ಜೂ, 07: ಭಾರತೀಯ ರೈಲ್ವೆಯು ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಹೆಚ್ಚುವರಿ ರೈಲುಗಳನ್ನು ಬಿಡುತ್ತಲೇ ಇದೆ. ಹಾಗೆಯೆ ಮತ್ತೊಂದೆ ಹಬ್ಬ, ಹರಿದಿನಗಳ ಸಂದರ್ಭದಲ್ಲೂ ಸಹ ವಿಶೇಷ ರೈಲುಗಳ ವ್ಯವಸ್ಥೆಯನ್ನು ಸಹ ಕಲ್ಪಿಸುತ್ತಲೇ ಬಂದಿದೆ.
ಹಾಗೆಯೆ ಇದೀಗ ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ಬಿಡಲು ನಿರ್ಧರಿಸಿದೆ. ಹಾಗಾದರೆ ಈ ರೈಲು ಪ್ರಾರಂಭ ಆಗುವ ದಿನಾಂಕಗಳು ಮತ್ತು ಮಾರ್ಗಗಳ ವಿವರವನ್ನು ಇಲ್ಲಿ ತಿಳಿಯಿರಿ.
ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಸುವ ಸಲುವಾಗಿ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಜೂನ್ 9ರಿಂದ ಅಹಮದಾಬಾದ್ ಮತ್ತು ಮಂಗಳೂರು ನಡುವೆ ವಿಶೇಷ ಸಾಪ್ತಾಹಿಕ ರೈಲು ಬಿಡಲು ಭಾರತೀಯ ರೈಲ್ವೆ ನಿರ್ಧಾರ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 09424 ಮತ್ತು 09423 ಸಂಖ್ಯೆಯ ರೈಲು ಅಹಮದಾಬಾದ್ ಮತ್ತು ಮಂಗಳೂರು ನಡುವೆ ಸಂಚಾರ ಆಂರಂಭಿಸಲಿದೆ. ಅಲ್ಲದೆ ವಿಶೇಷ ರೈಲು ದರ ಪಾವತಿಸಿ ಈ ರೈಲಿನಲ್ಲಿ ಸಂಚಾರ ಮಾಡಬಹುದಾಗಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ಕೆಲವು ದಿನಗಳ ಹಿಂದೆಯಷ್ಟೇ ಒಡಿಶಾದ ಬಾಲಸೋರ್ನಲ್ಲಿ ನಡೆದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಈ ಹಿನ್ನೆ ರೈಲುಗಳಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳು ದೃಷ್ಟಿಯಿಂದ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ವಿಶೇಷ ರೈಲು ಸಂಚಾರ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು 09424 ಸಂಖ್ಯೆಯ ರೈಲು ಶುಕ್ರವಾರ ಸಂಜೆ 4 ಗಂಟೆಗೆ ಅಂದರೆ ಜೂನ್ 9ರಿಂದ ಆರಂಭವಾಗಲಿದೆ. ಅಹಮದಾಬಾದ್ನಿಂದ ಆರಂಭವಾಗುವ ಈ ರೈಲು ಜೂನ್ 9, 16 ಮತ್ತು 23 ಮೂರು ದಿನಗಳ ಕಾಲ ಸಂಚಾರ ಮಾಡಲಿದೆ. ನಂತರ ಶನಿವಾರ ಸಂಜೆ 7:40ಕ್ಕೆ ಮಂಗಳೂರು ತಲುಪಲಿದೆ.
ಹಾಗೆಯೆ 09423 ಸಂಖ್ಯೆಯ ರೈಲು ಜೂನ್ 10, 17 ಮತ್ತು 24 ರಂದು ಶನಿವಾರ ರಾತ್ರಿ 9:10ಕ್ಕೆ ಮಂಗಳೂರಿನ ಜಂಕ್ಷನ್ನಿಂದ ಹೊರಟು, ಸೋಮವಾರದಂದು (ಜೂನ್ 25) ಮುಂಜಾನೆ 1:15ಕ್ಕೆ ಅಹಮದಾಬಾದ್ ಜಂಕ್ಷನ್ಗೆ ತಲುಪುತ್ತದೆ ಎಂದು ತಿಳಿಸಿದೆ.
Mangalore Ahmedabad train to start from June 9th.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm