ಬ್ರೇಕಿಂಗ್ ನ್ಯೂಸ್
07-06-23 11:09 pm Mangalore Correspondent ಕರಾವಳಿ
ಮಂಗಳೂರು, ಜೂ, 07: ಭಾರತೀಯ ರೈಲ್ವೆಯು ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಹೆಚ್ಚುವರಿ ರೈಲುಗಳನ್ನು ಬಿಡುತ್ತಲೇ ಇದೆ. ಹಾಗೆಯೆ ಮತ್ತೊಂದೆ ಹಬ್ಬ, ಹರಿದಿನಗಳ ಸಂದರ್ಭದಲ್ಲೂ ಸಹ ವಿಶೇಷ ರೈಲುಗಳ ವ್ಯವಸ್ಥೆಯನ್ನು ಸಹ ಕಲ್ಪಿಸುತ್ತಲೇ ಬಂದಿದೆ.
ಹಾಗೆಯೆ ಇದೀಗ ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ಬಿಡಲು ನಿರ್ಧರಿಸಿದೆ. ಹಾಗಾದರೆ ಈ ರೈಲು ಪ್ರಾರಂಭ ಆಗುವ ದಿನಾಂಕಗಳು ಮತ್ತು ಮಾರ್ಗಗಳ ವಿವರವನ್ನು ಇಲ್ಲಿ ತಿಳಿಯಿರಿ.
ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಸುವ ಸಲುವಾಗಿ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಜೂನ್ 9ರಿಂದ ಅಹಮದಾಬಾದ್ ಮತ್ತು ಮಂಗಳೂರು ನಡುವೆ ವಿಶೇಷ ಸಾಪ್ತಾಹಿಕ ರೈಲು ಬಿಡಲು ಭಾರತೀಯ ರೈಲ್ವೆ ನಿರ್ಧಾರ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 09424 ಮತ್ತು 09423 ಸಂಖ್ಯೆಯ ರೈಲು ಅಹಮದಾಬಾದ್ ಮತ್ತು ಮಂಗಳೂರು ನಡುವೆ ಸಂಚಾರ ಆಂರಂಭಿಸಲಿದೆ. ಅಲ್ಲದೆ ವಿಶೇಷ ರೈಲು ದರ ಪಾವತಿಸಿ ಈ ರೈಲಿನಲ್ಲಿ ಸಂಚಾರ ಮಾಡಬಹುದಾಗಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ಕೆಲವು ದಿನಗಳ ಹಿಂದೆಯಷ್ಟೇ ಒಡಿಶಾದ ಬಾಲಸೋರ್ನಲ್ಲಿ ನಡೆದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಈ ಹಿನ್ನೆ ರೈಲುಗಳಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳು ದೃಷ್ಟಿಯಿಂದ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ವಿಶೇಷ ರೈಲು ಸಂಚಾರ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು 09424 ಸಂಖ್ಯೆಯ ರೈಲು ಶುಕ್ರವಾರ ಸಂಜೆ 4 ಗಂಟೆಗೆ ಅಂದರೆ ಜೂನ್ 9ರಿಂದ ಆರಂಭವಾಗಲಿದೆ. ಅಹಮದಾಬಾದ್ನಿಂದ ಆರಂಭವಾಗುವ ಈ ರೈಲು ಜೂನ್ 9, 16 ಮತ್ತು 23 ಮೂರು ದಿನಗಳ ಕಾಲ ಸಂಚಾರ ಮಾಡಲಿದೆ. ನಂತರ ಶನಿವಾರ ಸಂಜೆ 7:40ಕ್ಕೆ ಮಂಗಳೂರು ತಲುಪಲಿದೆ.
ಹಾಗೆಯೆ 09423 ಸಂಖ್ಯೆಯ ರೈಲು ಜೂನ್ 10, 17 ಮತ್ತು 24 ರಂದು ಶನಿವಾರ ರಾತ್ರಿ 9:10ಕ್ಕೆ ಮಂಗಳೂರಿನ ಜಂಕ್ಷನ್ನಿಂದ ಹೊರಟು, ಸೋಮವಾರದಂದು (ಜೂನ್ 25) ಮುಂಜಾನೆ 1:15ಕ್ಕೆ ಅಹಮದಾಬಾದ್ ಜಂಕ್ಷನ್ಗೆ ತಲುಪುತ್ತದೆ ಎಂದು ತಿಳಿಸಿದೆ.
Mangalore Ahmedabad train to start from June 9th.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm