ಬ್ರೇಕಿಂಗ್ ನ್ಯೂಸ್
10-06-23 05:31 pm Mangalore Correspondent ಕರಾವಳಿ
ಪುತ್ತೂರು, ಜೂನ್ 10: ಮಂತ್ರವಾದಿಯ ಸೋಗಿನಲ್ಲಿ ಮೋಸ ಎಸಗಲು ಬಂದಿದ್ದ ತಂಡವನ್ನು ಸ್ಥಳೀಯ ಯುವಕರು ಸೇರಿ ಹಲ್ಲೆಗೈದು ಓಡಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ವಳಾಲು ಎಂಬಲ್ಲಿ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಗುಜರಿ ವ್ಯವಹಾರ ಮಾಡುತ್ತಿದ್ದ ವ್ಯಕ್ತಿಗಳು ಮಂತ್ರವಾದಿಯ ಸೋಗಿನಲ್ಲಿ ಮನೆಯೊಂದಕ್ಕೆ ಎಂಟ್ರಿ ಕೊಟ್ಟು ವಂಚನೆ ಎಸಗಿದ ಆರೋಪ ಕೇಳಿಬಂದಿದೆ. ಮಗುವಿಗೆ ಆರೋಗ್ಯ ಸಮಸ್ಯೆಯಿದ್ದ ಹಿನ್ನೆಲೆ ಮುಸ್ಲಿಂ ಕುಟುಂಬವೊಂದು ಮಂತ್ರವಾದಿಗಳನ್ನು ಸಂಪರ್ಕಿಸಿದ್ದರು. ಬಳಿಕ ಮನೆಗೆ ಬಂದಿದ್ದ ಮಂತ್ರವಾದಿಗಳಿಬ್ಬರು ಕಪ್ಪು ನೂಲು ಮಂತ್ರಿಸಿ ಮಗುವಿಗೆ ಕಟ್ಟಲು ಮುಂದಾಗಿದ್ದರು.



ಈ ವೇಳೆ ಮಂತ್ರವಾದಿ ರೂಪದಲ್ಲಿ ಬಂದಿದ್ದ ವ್ಯಕ್ತಿಗಳ ಪರಿಚಯದ ವ್ಯಕ್ತಿಯೊಬ್ಬರು ಅದೇ ಮನೆಗೆ ಬಂದಿದ್ದರು. ಇವರು ಗುಜರಿ ವ್ಯಾಪಾರಿಗಳಾಗಿದ್ದು ಯಾವಾಗ ಮಂತ್ರವಾದಿಯಾಗಿದ್ದು ಎಂದು ಮಾತಿನ ಚಕಮಕಿ ನಡೆದಿದೆ. ಇದು ನಮ್ಮ ಖಾಸಗಿ ವಿಚಾರ, ನೀವು ಯಾಕೆ ಮಧ್ಯೆ ಬರುತ್ತೀರಿ ಎಂದು ಮಂತ್ರವಾದಿ ವ್ಯಕ್ತಿಗಳು ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಯುವಕರು ಮನೆಯಲ್ಲೇ ನಕಲಿ ಮಂತ್ರವಾದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.
ಯುವಕರು ಬ್ಯಾರಿ ಭಾಷೆಯಲ್ಲಿ ಮಾತನಾಡುತ್ತಾ ಇಬ್ಬರಿಗೂ ಹಿಗ್ಗಾಮುಗ್ಗಾ ಥಳಿಸಿರುವ ವೀಡಿಯೋ ವೈರಲ್ ಆಗಿದೆ. ವಾರದ ಹಿಂದೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಪ್ರಕರಣ ಠಾಣೆಯ ಮೆಟ್ಟಿಲೇರಿ ಬಳಿಕ ಮಾತುಕತೆಯಲ್ಲಿ ಬಗೆಹರಿದಿದೆ ಎನ್ನುವ ಮಾಹಿತಿ ಲಭಿಸಿದೆ.
#Mangalore Two scrap delaers posing as #Muslim #witch #doctors #beaten by public at #Uppinangady, video goes viral #BreakingNews pic.twitter.com/IPAIdxIOxE
— Headline Karnataka (@hknewsonline) June 10, 2023
Mangalore Two scrap delaers posing as Muslim witch doctors beaten in Uppinangady, video goes viral. A family had contacted witch doctor for healing of thier child, but localities have identified them as Scrap dealers after which they were thrashed inside the house by the public.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm