ಬ್ರೇಕಿಂಗ್ ನ್ಯೂಸ್
10-06-23 09:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಬಿಡುಗಡೆಯಾಗುವುದನ್ನು ತಡೆಯಲು ವಿಫಲಗೊಂಡ ಮಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಜೂನ್ 4ರಂದು ಪ್ರಕಟಗೊಂಡ ವಿವಿಧ ಮಾಧ್ಯಮ ವರದಿಗಳ ಆಧಾರದಲ್ಲಿ ಲೋಕಾಯುಕ್ತ ಕಾಯಿದೆಯ ಸೆಕ್ಷನ್ 7(2) ಮತ್ತು 9(3-ಎ) ಅಡಿಯಲ್ಲಿ ಪ್ರಕರಣ ಕೈಗೆತ್ತಿಕೊಂಡಿರುವ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಮುಂದಿನ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಪಾಲಿಕೆ ಉಪಾಯುಕ್ತ (ಆಡಳಿತ), ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಹಾಗೂ ಕೆಐಎಡಿಬಿ ಕಾರ್ಯಕಾರಿ ಅಭಿಯಂತರರಿಗೆ ಸೂಚನೆ ನೀಡಿದೆ. ಅಲ್ಲದೇ 15 ದಿನಗಳ ಒಳಗಡೆ ವಿವರವಾದ ವರದಿ ಸಲ್ಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಉಪ ಲೋಕಾಯುಕ್ತರು ಸೂಚಿಸಿದ್ದಾರೆ.


ಒಳಚರಂಡಿ ಮೂಲಕ ನದಿಗೆ ತ್ಯಾಜ್ಯ ಬಿಡುಗಡೆ ಆಗುತ್ತಿರುವುದು ಜಲಚರಗಳಿಗೆ ಮಾತ್ರವಲ್ಲ, ಆ ನೀರನ್ನು ಬಳಸುವ ಮನುಷ್ಯರಿಗೂ ಪ್ರಾಣಿಗಳಿಗೂ ಹಾನಿಕರವಾಗಿದೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಉಪ ಲೋಕಾಯುಕ್ತರು ಪ್ರಶ್ನೆ ಮಾಡಿದ್ದಾರೆ. ಪಣಂಬೂರು ಮತ್ತು ಬೈಕಂಪಾಡಿ ಪರಿಸರದಲ್ಲಿ ಕಾರ್ಯಾಚರಿಸುವ ಹಲವು ಕೈಗಾರಿಕೆಗಳು ತ್ಯಾಜ್ಯ ಸಂಸ್ಕರಣೆ ನಡೆಸದೆ ಅವುಗಳನ್ನು ನೇರವಾಗಿ ನದಿಗೆ ಬಿಡುತ್ತಿವೆ. ಇದರಿಂದ ಸ್ಥಳೀಯ ಕೆರೆ, ಬಾವಿಗಳ ನೀರು ಕಲುಷಿತಗೊಂಡಿದೆ. ತೋಡುಗಳ ಮೂಲಕ ತ್ಯಾಜ್ಯ ನೇರವಾಗಿ ಫಲ್ಗುಣಿ ನದಿ ಸೇರುತ್ತದೆ. ಈ ಬಗ್ಗೆ ಸ್ಥಳೀಯರು ಪ್ರಬಲ ಆಕ್ಷೇಪ ಎತ್ತಿದ್ದರೂ, ಪತಂಜಲಿ ಕಂಪನಿಯ ರುಚಿ ಗೋಲ್ಡ್ ಘಟಕದ ಮಾಲಿನ್ಯ ದಿನವೂ ಕಾಲುವೆ ಸೇರುತ್ತದೆ.
Ruchi gold waste chemical merges with Palguni river, Lokayukta files case against Mangalore city corporation over negligence.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm