ಬ್ರೇಕಿಂಗ್ ನ್ಯೂಸ್
10-06-23 09:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಬಿಡುಗಡೆಯಾಗುವುದನ್ನು ತಡೆಯಲು ವಿಫಲಗೊಂಡ ಮಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಜೂನ್ 4ರಂದು ಪ್ರಕಟಗೊಂಡ ವಿವಿಧ ಮಾಧ್ಯಮ ವರದಿಗಳ ಆಧಾರದಲ್ಲಿ ಲೋಕಾಯುಕ್ತ ಕಾಯಿದೆಯ ಸೆಕ್ಷನ್ 7(2) ಮತ್ತು 9(3-ಎ) ಅಡಿಯಲ್ಲಿ ಪ್ರಕರಣ ಕೈಗೆತ್ತಿಕೊಂಡಿರುವ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಮುಂದಿನ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಪಾಲಿಕೆ ಉಪಾಯುಕ್ತ (ಆಡಳಿತ), ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಹಾಗೂ ಕೆಐಎಡಿಬಿ ಕಾರ್ಯಕಾರಿ ಅಭಿಯಂತರರಿಗೆ ಸೂಚನೆ ನೀಡಿದೆ. ಅಲ್ಲದೇ 15 ದಿನಗಳ ಒಳಗಡೆ ವಿವರವಾದ ವರದಿ ಸಲ್ಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಉಪ ಲೋಕಾಯುಕ್ತರು ಸೂಚಿಸಿದ್ದಾರೆ.


ಒಳಚರಂಡಿ ಮೂಲಕ ನದಿಗೆ ತ್ಯಾಜ್ಯ ಬಿಡುಗಡೆ ಆಗುತ್ತಿರುವುದು ಜಲಚರಗಳಿಗೆ ಮಾತ್ರವಲ್ಲ, ಆ ನೀರನ್ನು ಬಳಸುವ ಮನುಷ್ಯರಿಗೂ ಪ್ರಾಣಿಗಳಿಗೂ ಹಾನಿಕರವಾಗಿದೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಉಪ ಲೋಕಾಯುಕ್ತರು ಪ್ರಶ್ನೆ ಮಾಡಿದ್ದಾರೆ. ಪಣಂಬೂರು ಮತ್ತು ಬೈಕಂಪಾಡಿ ಪರಿಸರದಲ್ಲಿ ಕಾರ್ಯಾಚರಿಸುವ ಹಲವು ಕೈಗಾರಿಕೆಗಳು ತ್ಯಾಜ್ಯ ಸಂಸ್ಕರಣೆ ನಡೆಸದೆ ಅವುಗಳನ್ನು ನೇರವಾಗಿ ನದಿಗೆ ಬಿಡುತ್ತಿವೆ. ಇದರಿಂದ ಸ್ಥಳೀಯ ಕೆರೆ, ಬಾವಿಗಳ ನೀರು ಕಲುಷಿತಗೊಂಡಿದೆ. ತೋಡುಗಳ ಮೂಲಕ ತ್ಯಾಜ್ಯ ನೇರವಾಗಿ ಫಲ್ಗುಣಿ ನದಿ ಸೇರುತ್ತದೆ. ಈ ಬಗ್ಗೆ ಸ್ಥಳೀಯರು ಪ್ರಬಲ ಆಕ್ಷೇಪ ಎತ್ತಿದ್ದರೂ, ಪತಂಜಲಿ ಕಂಪನಿಯ ರುಚಿ ಗೋಲ್ಡ್ ಘಟಕದ ಮಾಲಿನ್ಯ ದಿನವೂ ಕಾಲುವೆ ಸೇರುತ್ತದೆ.
Ruchi gold waste chemical merges with Palguni river, Lokayukta files case against Mangalore city corporation over negligence.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am