ಬ್ರೇಕಿಂಗ್ ನ್ಯೂಸ್
10-06-23 09:06 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಬಿಡುಗಡೆಯಾಗುವುದನ್ನು ತಡೆಯಲು ವಿಫಲಗೊಂಡ ಮಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಜೂನ್ 4ರಂದು ಪ್ರಕಟಗೊಂಡ ವಿವಿಧ ಮಾಧ್ಯಮ ವರದಿಗಳ ಆಧಾರದಲ್ಲಿ ಲೋಕಾಯುಕ್ತ ಕಾಯಿದೆಯ ಸೆಕ್ಷನ್ 7(2) ಮತ್ತು 9(3-ಎ) ಅಡಿಯಲ್ಲಿ ಪ್ರಕರಣ ಕೈಗೆತ್ತಿಕೊಂಡಿರುವ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಮುಂದಿನ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಪಾಲಿಕೆ ಉಪಾಯುಕ್ತ (ಆಡಳಿತ), ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಹಾಗೂ ಕೆಐಎಡಿಬಿ ಕಾರ್ಯಕಾರಿ ಅಭಿಯಂತರರಿಗೆ ಸೂಚನೆ ನೀಡಿದೆ. ಅಲ್ಲದೇ 15 ದಿನಗಳ ಒಳಗಡೆ ವಿವರವಾದ ವರದಿ ಸಲ್ಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಉಪ ಲೋಕಾಯುಕ್ತರು ಸೂಚಿಸಿದ್ದಾರೆ.


ಒಳಚರಂಡಿ ಮೂಲಕ ನದಿಗೆ ತ್ಯಾಜ್ಯ ಬಿಡುಗಡೆ ಆಗುತ್ತಿರುವುದು ಜಲಚರಗಳಿಗೆ ಮಾತ್ರವಲ್ಲ, ಆ ನೀರನ್ನು ಬಳಸುವ ಮನುಷ್ಯರಿಗೂ ಪ್ರಾಣಿಗಳಿಗೂ ಹಾನಿಕರವಾಗಿದೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಉಪ ಲೋಕಾಯುಕ್ತರು ಪ್ರಶ್ನೆ ಮಾಡಿದ್ದಾರೆ. ಪಣಂಬೂರು ಮತ್ತು ಬೈಕಂಪಾಡಿ ಪರಿಸರದಲ್ಲಿ ಕಾರ್ಯಾಚರಿಸುವ ಹಲವು ಕೈಗಾರಿಕೆಗಳು ತ್ಯಾಜ್ಯ ಸಂಸ್ಕರಣೆ ನಡೆಸದೆ ಅವುಗಳನ್ನು ನೇರವಾಗಿ ನದಿಗೆ ಬಿಡುತ್ತಿವೆ. ಇದರಿಂದ ಸ್ಥಳೀಯ ಕೆರೆ, ಬಾವಿಗಳ ನೀರು ಕಲುಷಿತಗೊಂಡಿದೆ. ತೋಡುಗಳ ಮೂಲಕ ತ್ಯಾಜ್ಯ ನೇರವಾಗಿ ಫಲ್ಗುಣಿ ನದಿ ಸೇರುತ್ತದೆ. ಈ ಬಗ್ಗೆ ಸ್ಥಳೀಯರು ಪ್ರಬಲ ಆಕ್ಷೇಪ ಎತ್ತಿದ್ದರೂ, ಪತಂಜಲಿ ಕಂಪನಿಯ ರುಚಿ ಗೋಲ್ಡ್ ಘಟಕದ ಮಾಲಿನ್ಯ ದಿನವೂ ಕಾಲುವೆ ಸೇರುತ್ತದೆ.
Ruchi gold waste chemical merges with Palguni river, Lokayukta files case against Mangalore city corporation over negligence.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm