ಬ್ರೇಕಿಂಗ್ ನ್ಯೂಸ್
11-06-23 09:29 pm Udupi Correspondent ಕರಾವಳಿ
ಉಡುಪಿ, ಜೂನ್ 11: ಜಿಲ್ಲೆಯಲ್ಲಿ ಶಕ್ತಿ ಯೋಜನೆಗೆ ಚಾಲನೆ ಕೊಟ್ಟ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು 'ಉಡುಪಿಯಲ್ಲಿ ಸರ್ಕಾರಿ ಬಸ್ಗಳ ಸಂಖ್ಯೆ ಹೆಚ್ಚಿಸುವ' ಭರವಸೆ ಕೊಟ್ಟಿದ್ದಾರೆ.
ಕಾಂಗ್ರೆಸ್ನ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಇಂದು ರಾಜ್ಯಾದ್ಯಂತ ಅನುಷ್ಠಾನಕ್ಕೆ ಬಂದಿದೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಶಕ್ತಿ ಯೋಜನೆಗೆ ಚಾಲನೆ ಕೊಟ್ಟರು. ಅದೇ ವೇಳೆ ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರೂ ಕೂಡ ತಮ್ಮ ಜಿಲ್ಲೆಗಳಲ್ಲಿ 'ಶಕ್ತಿ' ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ. ಅದರಂತೆ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಉಡುಪಿ ಜಿಲ್ಲೆಯಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ಕೊಟ್ಟು, ಉಚಿತ ಪಾಸ್ ವಿತರಿಸಿ ಬಳಿಕ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಿದ್ದಾರೆ. ಈ ವೇಳೆ ಅವರೊಂದಿಗೆ ಅನೇಕ ಮಹಿಳೆಯರು ಇದ್ದರು. ನೂಕುನುಗ್ಗಲು ಕೂಡ ಉಂಟಾಗಿತ್ತು.


ಹೀಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ 'ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ಗಳ ಸಂಖ್ಯೆ ಎಷ್ಟಿದೆ ಎಂದು ಮಾಹಿತಿ ಪಡೆದಿದ್ದೇನೆ. ಕೇವಲ 95 ಬಸ್ಗಳು ಮಾತ್ರ ಇವೆ. ಈ ಭಾಗದಲ್ಲಿ ಖಾಸಗಿ ಬಸ್ಗಳೇ ಜಾಸ್ತಿ. ಹೀಗಾಗಿ ಉಡುಪಿ ಮಹಿಳೆಯರು ಸರ್ಕಾರದ ಯೋಜನೆಯಿಂದ ವಂಚಿತರಾಗುತ್ತಾರೆ. ಉಡುಪಿ ಭಾಗದಲ್ಲಿ ಸರ್ಕಾರಿ ಬಸ್ಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಮಾತಾಡುತ್ತೇನೆ. ಸಾರಿಗೆ ಸಚಿವರ ಗಮನಕ್ಕೂ ತರುತ್ತೇನೆ' ಎಂದಿದ್ದಾರೆ. 'ಉಡುಪಿಯಲ್ಲಿ ಪುರುಷರಿಗಿಂತಲೂ ಮಹಿಳೆಯರೇ ಜಾಸ್ತಿ ಇದ್ದಾರೆ. ನಾನು ಇಲ್ಲಿನ ಉಸ್ತುವಾರಿ ಸಚಿವೆಯಾಗಿ ಶಕ್ತಿ ಯೋಜನೆಯ ಲಾಭ ಇಲ್ಲಿನ ಮಹಿಳೆಯರಿಗೆ ಸಿಗುವಂತೆ ಮಾಡುತ್ತೇನೆ. ವಿದ್ಯಾರ್ಥಿನಿಯರಿಗೆ ಅನುಕೂಲವಾಗಬೇಕು' ಎಂದು ಹೇಳಿದರು.
The strength of state run KSRTC buses is very low in Udupi district and efforts will be made to increase their numbers by drawing the attention of the government to this issue, said Lakshmi Hebbalkar, Minister of Women and Child Development, and Disabled and Senior Citizens Empowerment.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm