ಬ್ರೇಕಿಂಗ್ ನ್ಯೂಸ್
11-06-23 09:29 pm Udupi Correspondent ಕರಾವಳಿ
ಉಡುಪಿ, ಜೂನ್ 11: ಜಿಲ್ಲೆಯಲ್ಲಿ ಶಕ್ತಿ ಯೋಜನೆಗೆ ಚಾಲನೆ ಕೊಟ್ಟ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು 'ಉಡುಪಿಯಲ್ಲಿ ಸರ್ಕಾರಿ ಬಸ್ಗಳ ಸಂಖ್ಯೆ ಹೆಚ್ಚಿಸುವ' ಭರವಸೆ ಕೊಟ್ಟಿದ್ದಾರೆ.
ಕಾಂಗ್ರೆಸ್ನ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಇಂದು ರಾಜ್ಯಾದ್ಯಂತ ಅನುಷ್ಠಾನಕ್ಕೆ ಬಂದಿದೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಶಕ್ತಿ ಯೋಜನೆಗೆ ಚಾಲನೆ ಕೊಟ್ಟರು. ಅದೇ ವೇಳೆ ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರೂ ಕೂಡ ತಮ್ಮ ಜಿಲ್ಲೆಗಳಲ್ಲಿ 'ಶಕ್ತಿ' ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ. ಅದರಂತೆ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಉಡುಪಿ ಜಿಲ್ಲೆಯಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ಕೊಟ್ಟು, ಉಚಿತ ಪಾಸ್ ವಿತರಿಸಿ ಬಳಿಕ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಿದ್ದಾರೆ. ಈ ವೇಳೆ ಅವರೊಂದಿಗೆ ಅನೇಕ ಮಹಿಳೆಯರು ಇದ್ದರು. ನೂಕುನುಗ್ಗಲು ಕೂಡ ಉಂಟಾಗಿತ್ತು.


ಹೀಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ 'ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ಗಳ ಸಂಖ್ಯೆ ಎಷ್ಟಿದೆ ಎಂದು ಮಾಹಿತಿ ಪಡೆದಿದ್ದೇನೆ. ಕೇವಲ 95 ಬಸ್ಗಳು ಮಾತ್ರ ಇವೆ. ಈ ಭಾಗದಲ್ಲಿ ಖಾಸಗಿ ಬಸ್ಗಳೇ ಜಾಸ್ತಿ. ಹೀಗಾಗಿ ಉಡುಪಿ ಮಹಿಳೆಯರು ಸರ್ಕಾರದ ಯೋಜನೆಯಿಂದ ವಂಚಿತರಾಗುತ್ತಾರೆ. ಉಡುಪಿ ಭಾಗದಲ್ಲಿ ಸರ್ಕಾರಿ ಬಸ್ಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಮಾತಾಡುತ್ತೇನೆ. ಸಾರಿಗೆ ಸಚಿವರ ಗಮನಕ್ಕೂ ತರುತ್ತೇನೆ' ಎಂದಿದ್ದಾರೆ. 'ಉಡುಪಿಯಲ್ಲಿ ಪುರುಷರಿಗಿಂತಲೂ ಮಹಿಳೆಯರೇ ಜಾಸ್ತಿ ಇದ್ದಾರೆ. ನಾನು ಇಲ್ಲಿನ ಉಸ್ತುವಾರಿ ಸಚಿವೆಯಾಗಿ ಶಕ್ತಿ ಯೋಜನೆಯ ಲಾಭ ಇಲ್ಲಿನ ಮಹಿಳೆಯರಿಗೆ ಸಿಗುವಂತೆ ಮಾಡುತ್ತೇನೆ. ವಿದ್ಯಾರ್ಥಿನಿಯರಿಗೆ ಅನುಕೂಲವಾಗಬೇಕು' ಎಂದು ಹೇಳಿದರು.
The strength of state run KSRTC buses is very low in Udupi district and efforts will be made to increase their numbers by drawing the attention of the government to this issue, said Lakshmi Hebbalkar, Minister of Women and Child Development, and Disabled and Senior Citizens Empowerment.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm