ಬ್ರೇಕಿಂಗ್ ನ್ಯೂಸ್
12-06-23 04:33 pm Mangalore Correspondent ಕರಾವಳಿ
ಉಳ್ಳಾಲ, ಜೂ.12: ಬೈಕ್ ಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಕಳೆದ ಜೂ.4 ರ ಆದಿತ್ಯವಾರ ತಡರಾತ್ರಿ ಉಚ್ಚಿಲ, ಸಂಕೋಳಿಗೆ ಎಂಬಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಕೋಟೆಕಾರು ಪಟ್ಟಣ ವ್ಯಾಪ್ತಿಯ ಮಾಡೂರು ವೈದ್ಯನಾಥ ದೈವಸ್ಥಾನ ರಸ್ತೆ ನಿವಾಸಿ ತೇಜಸ್ ಕುಲಾಲ್ (28) ಮೃತ ಯುವಕ. ಕಳೆದ ಜೂ.4 ರ ಆದಿತ್ಯವಾರ ತಡರಾತ್ರಿ ತೇಜಸ್ ಸಂಕೋಳಿಗೆಯ ಪೆಟ್ರೋಲ್ ಬಂಕಿಗೆ ಪೆಟ್ರೋಲ್ ತುಂಬಿಸಲು ಬೈಕಲ್ಲಿ ತೆರಳುತ್ತಿದ್ದ ವೇಳೆ ಕೇರಳ ನೋಂದಣಿಯ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಹಿಟ್ & ರನ್ ಪ್ರಕರಣ ದಾಖಲಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ತಲಪಾಡಿ ಟೋಲ್ ಗೇಟ್ನ ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಮರುದಿನವೇ ಘಟನೆಗೆ ಕಾರಣವಾದ ಕಾರನ್ನ ಜಪ್ತಿ ಗೊಳಿಸಿದ್ದರು.

ಗಂಭೀರ ಗಾಯಗೊಂಡಿದ್ದ ತೇಜಸನ್ನು ತಕ್ಷಣಕ್ಕೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ನಂತರ ಮಂಗಳೂರಿನ ಕೆಎಮ್ ಸಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ತೇಜಸ್ ಅವಿವಾಹಿತರಾಗಿದ್ದು ಸುಝಕಿ ಕಂಪನಿಯಲ್ಲಿ ಮೆಕ್ಯಾನಿಕ್ ಆಗಿದ್ದರು. ತೇಜಸ್ ಬಜರಂಗದಳ ಮಾಡೂರು ಶಾಖೆಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಮೃತರು ತಂದೆ ರಾಮ ಕುಲಾಲ್, ತಾಯಿ ರೇವತಿ ಮತ್ತು ಅಣ್ಣ ರವೀಂದ್ರ ಅವರನ್ನ ಅಗಲಿದ್ದಾರೆ.
Mangalore Hit and Run accident at Uchila, bike rider dies in hospital. The deceased has been identified as Tejas Kulal (28).
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm