ಬ್ರೇಕಿಂಗ್ ನ್ಯೂಸ್
13-06-23 05:56 pm Mangalore Correspondent ಕರಾವಳಿ
ಮಂಗಳೂರು, ಜೂನ್ 13: ರಾಜ್ಯ ಸರಕಾರದ ಉಚಿತ ಬಸ್ ಪ್ರಯಾಣದ ಯೋಜನೆಗೆ ಮಹಿಳೆಯರು ಫಿದಾ ಆಗಿದ್ದಾರೆ. ಮಲೆನಾಡು, ಉತ್ತರ ಕರ್ನಾಟಕ ಭಾಗದ ಜನರು ಸಾಗರೋಪಾದಿಯಾಗಿ ಬಸ್ಸಿನಲ್ಲಿ ಕರಾವಳಿಯತ್ತ ಬರುತ್ತಿದ್ದಾರೆ. ಸರ್ಕಾರಿ ಬಸ್ ಫುಲ್ ರಶ್ ಆಗುತ್ತಿದ್ದು, ಕರಾವಳಿಯ ಪುಣ್ಯಕ್ಷೇತ್ರಗಳಲ್ಲಿ ಜನಜಂಗುಳಿ ಏರ್ಪಟ್ಟಿದೆ.
ಕರಾವಳಿಯ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಕ್ಷೇತ್ರಗಳಲ್ಲಿ ಭಾರೀ ರಶ್ ಏರ್ಪಟ್ಟಿದ್ದು ಜನಸಾಗರವೇ ಹರಿದು ಬರುತ್ತಿದೆ. ಮಹಿಳೆಯರು ಗುಂಪು ಗುಂಪಾಗಿ ಬಂದು ಸೇರುತ್ತಿದ್ದು, ಕೆಎಸ್ಸಾರ್ಟಿಸಿ ಬಸ್ಸುಗಳೆಲ್ಲ ಫುಲ್ ರಶ್ ಆಗಿದೆ. ಎರಡು ದಿನಗಳ ಹಿಂದಷ್ಟೇ ಸಾಮಾನ್ಯ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣದ ಯೋಜನೆ ಜಾರಿಯಾಗಿತ್ತು. ಅಷ್ಟರಲ್ಲೇ ಹಳ್ಳಿಗಾಡಿನ ಜನರು ಸರ್ಕಾರಿ ಬಸ್ ಹತ್ತ ತೊಡಗಿದ್ದಾರೆ. ಕೋಲಾರ, ಬೆಂಗಳೂರು, ಚಿತ್ರದುರ್ಗ, ತುಮಕೂರು ಅಲ್ಲದೆ, ಉತ್ತರ ಕರ್ನಾಟಕದ ಮಂದಿಯೂ ಅತ್ತಿತ್ತ ರಾಜ್ಯ ಸುತ್ತಲು ಆರಂಭಿಸಿದ್ದಾರೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಸರಕಾರಿ ಬಸ್ಸುಗಳೆಲ್ಲ ಫುಲ್ ರಶ್ ಆಗಿದ್ದು, ಪೂರ್ತಿ ತುಂಬಿಕೊಂಡೇ ಸಾಗುತ್ತಿವೆ.



ಧರ್ಮಸ್ಥಳಕ್ಕೆ ಬಂದು ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಬಸ್ಸುಗಳಲ್ಲಿಯೂ ಕಾಲಿಡುವುದಕ್ಕೂ ಸಾಧ್ಯವಾಗದ ಸ್ಥಿತಿಯಿದೆ. ಎಲ್ಲ ಬಸ್ಸುಗಳಲ್ಲಿಯೂ ಪ್ರವಾಸಿ ಮಹಿಳೆಯರೇ ತುಂಬಿಕೊಂಡಿದ್ದು, ಸ್ಥಳೀಯ ಸಾಮಾನ್ಯ ಜನರಿಗೆ ಬಸ್ಸುಗಳಲ್ಲಿ ಪ್ರಯಾಣ ಮಾಡದ ಸ್ಥಿತಿ ಎದುರಾಗಿದೆ. ದೂರದ ಉತ್ತರ ಕರ್ನಾಟಕ ಭಾಗದಿಂದ ಕರಾವಳಿಗೆ ಬರುವುದಕ್ಕೆ ಸಾಮಾನ್ಯವಾಗಿ ಸಾವಿರಾರು ರೂಪಾಯಿ ಬೇಕಿದ್ದರೆ, ಈಗ ಉಚಿತ ಪ್ರಯಾಣದಿಂದಾಗಿ ಹಳ್ಳಿ ಮಹಿಳೆಯರು ಫಿದಾ ಆದಂತಿದ್ದಾರೆ. ಮಕ್ಕಳು, ಇಡೀ ಕುಟುಂಬವನ್ನು ಕಟ್ಟಿಕೊಂಡು ದೇವರ ದರ್ಶನ ಮಾಡ್ಕೊಂಡು ಬರೋಣ ಎಂದು ಜನರೆಲ್ಲ ಯಾತ್ರೆಗೆ ಹೊರಟು ನಿಂತಿದ್ದಾರೆ.
ಜನರ ದಟ್ಟಣೆಯಿಂದಾಗಿ ಪುಣ್ಯಕ್ಷೇತ್ರಗಳು, ಪ್ರವಾಸಿ ಕೇಂದ್ರಗಳಲ್ಲಿ ವ್ಯಾಪಾರವೂ ಜೋರಾಗಿದೆ. ವ್ಯಾಪಾರ ವಹಿವಾಟಿನಿಂದ ಮಾರುಕಟ್ಟೆ ಮತ್ತೆ ಚಿಗಿತುಕೊಂಡು ಹಣದ ಚಲಾವಣೆ ಬಿರುಸು ಪಡೆದುಕೊಳ್ಳಬಹುದೆಂಬ ನಿರೀಕ್ಷೆಯೂ ಗರಿಗೆದರಿದೆ. ಸಾಮಾನ್ಯವಾಗಿ ಕುಕ್ಕೆ, ಧರ್ಮಸ್ಥಳಗಳಲ್ಲಿ ವೀಕೆಂಡ್ ದಿನಗಳಲ್ಲಿ ಜನರ ಸಂಖ್ಯೆ ಹೆಚ್ಚಿರುತ್ತದೆ. ಇದೀಗ ವಾರದ ನಡುವೆಯೂ ಜನ ಬರಲಾರಂಭಿಸಿದ್ದು ಜನರು ಉಚಿತ ಬಸ್ ನೆಪದಲ್ಲಿ ಎಲ್ಲೆಂದರಲ್ಲಿ ಪ್ರವಾಸ ಹೊರಟಿದ್ದಾರೆ.
Free rides for women in KSRTC, passengers for Dharmasthala and Kukke Temple packed.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm