ಬ್ರೇಕಿಂಗ್ ನ್ಯೂಸ್
13-06-23 05:56 pm Mangalore Correspondent ಕರಾವಳಿ
ಮಂಗಳೂರು, ಜೂನ್ 13: ರಾಜ್ಯ ಸರಕಾರದ ಉಚಿತ ಬಸ್ ಪ್ರಯಾಣದ ಯೋಜನೆಗೆ ಮಹಿಳೆಯರು ಫಿದಾ ಆಗಿದ್ದಾರೆ. ಮಲೆನಾಡು, ಉತ್ತರ ಕರ್ನಾಟಕ ಭಾಗದ ಜನರು ಸಾಗರೋಪಾದಿಯಾಗಿ ಬಸ್ಸಿನಲ್ಲಿ ಕರಾವಳಿಯತ್ತ ಬರುತ್ತಿದ್ದಾರೆ. ಸರ್ಕಾರಿ ಬಸ್ ಫುಲ್ ರಶ್ ಆಗುತ್ತಿದ್ದು, ಕರಾವಳಿಯ ಪುಣ್ಯಕ್ಷೇತ್ರಗಳಲ್ಲಿ ಜನಜಂಗುಳಿ ಏರ್ಪಟ್ಟಿದೆ.
ಕರಾವಳಿಯ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಕ್ಷೇತ್ರಗಳಲ್ಲಿ ಭಾರೀ ರಶ್ ಏರ್ಪಟ್ಟಿದ್ದು ಜನಸಾಗರವೇ ಹರಿದು ಬರುತ್ತಿದೆ. ಮಹಿಳೆಯರು ಗುಂಪು ಗುಂಪಾಗಿ ಬಂದು ಸೇರುತ್ತಿದ್ದು, ಕೆಎಸ್ಸಾರ್ಟಿಸಿ ಬಸ್ಸುಗಳೆಲ್ಲ ಫುಲ್ ರಶ್ ಆಗಿದೆ. ಎರಡು ದಿನಗಳ ಹಿಂದಷ್ಟೇ ಸಾಮಾನ್ಯ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣದ ಯೋಜನೆ ಜಾರಿಯಾಗಿತ್ತು. ಅಷ್ಟರಲ್ಲೇ ಹಳ್ಳಿಗಾಡಿನ ಜನರು ಸರ್ಕಾರಿ ಬಸ್ ಹತ್ತ ತೊಡಗಿದ್ದಾರೆ. ಕೋಲಾರ, ಬೆಂಗಳೂರು, ಚಿತ್ರದುರ್ಗ, ತುಮಕೂರು ಅಲ್ಲದೆ, ಉತ್ತರ ಕರ್ನಾಟಕದ ಮಂದಿಯೂ ಅತ್ತಿತ್ತ ರಾಜ್ಯ ಸುತ್ತಲು ಆರಂಭಿಸಿದ್ದಾರೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಸರಕಾರಿ ಬಸ್ಸುಗಳೆಲ್ಲ ಫುಲ್ ರಶ್ ಆಗಿದ್ದು, ಪೂರ್ತಿ ತುಂಬಿಕೊಂಡೇ ಸಾಗುತ್ತಿವೆ.



ಧರ್ಮಸ್ಥಳಕ್ಕೆ ಬಂದು ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಬಸ್ಸುಗಳಲ್ಲಿಯೂ ಕಾಲಿಡುವುದಕ್ಕೂ ಸಾಧ್ಯವಾಗದ ಸ್ಥಿತಿಯಿದೆ. ಎಲ್ಲ ಬಸ್ಸುಗಳಲ್ಲಿಯೂ ಪ್ರವಾಸಿ ಮಹಿಳೆಯರೇ ತುಂಬಿಕೊಂಡಿದ್ದು, ಸ್ಥಳೀಯ ಸಾಮಾನ್ಯ ಜನರಿಗೆ ಬಸ್ಸುಗಳಲ್ಲಿ ಪ್ರಯಾಣ ಮಾಡದ ಸ್ಥಿತಿ ಎದುರಾಗಿದೆ. ದೂರದ ಉತ್ತರ ಕರ್ನಾಟಕ ಭಾಗದಿಂದ ಕರಾವಳಿಗೆ ಬರುವುದಕ್ಕೆ ಸಾಮಾನ್ಯವಾಗಿ ಸಾವಿರಾರು ರೂಪಾಯಿ ಬೇಕಿದ್ದರೆ, ಈಗ ಉಚಿತ ಪ್ರಯಾಣದಿಂದಾಗಿ ಹಳ್ಳಿ ಮಹಿಳೆಯರು ಫಿದಾ ಆದಂತಿದ್ದಾರೆ. ಮಕ್ಕಳು, ಇಡೀ ಕುಟುಂಬವನ್ನು ಕಟ್ಟಿಕೊಂಡು ದೇವರ ದರ್ಶನ ಮಾಡ್ಕೊಂಡು ಬರೋಣ ಎಂದು ಜನರೆಲ್ಲ ಯಾತ್ರೆಗೆ ಹೊರಟು ನಿಂತಿದ್ದಾರೆ.
ಜನರ ದಟ್ಟಣೆಯಿಂದಾಗಿ ಪುಣ್ಯಕ್ಷೇತ್ರಗಳು, ಪ್ರವಾಸಿ ಕೇಂದ್ರಗಳಲ್ಲಿ ವ್ಯಾಪಾರವೂ ಜೋರಾಗಿದೆ. ವ್ಯಾಪಾರ ವಹಿವಾಟಿನಿಂದ ಮಾರುಕಟ್ಟೆ ಮತ್ತೆ ಚಿಗಿತುಕೊಂಡು ಹಣದ ಚಲಾವಣೆ ಬಿರುಸು ಪಡೆದುಕೊಳ್ಳಬಹುದೆಂಬ ನಿರೀಕ್ಷೆಯೂ ಗರಿಗೆದರಿದೆ. ಸಾಮಾನ್ಯವಾಗಿ ಕುಕ್ಕೆ, ಧರ್ಮಸ್ಥಳಗಳಲ್ಲಿ ವೀಕೆಂಡ್ ದಿನಗಳಲ್ಲಿ ಜನರ ಸಂಖ್ಯೆ ಹೆಚ್ಚಿರುತ್ತದೆ. ಇದೀಗ ವಾರದ ನಡುವೆಯೂ ಜನ ಬರಲಾರಂಭಿಸಿದ್ದು ಜನರು ಉಚಿತ ಬಸ್ ನೆಪದಲ್ಲಿ ಎಲ್ಲೆಂದರಲ್ಲಿ ಪ್ರವಾಸ ಹೊರಟಿದ್ದಾರೆ.
Free rides for women in KSRTC, passengers for Dharmasthala and Kukke Temple packed.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm