ಬ್ರೇಕಿಂಗ್ ನ್ಯೂಸ್
14-06-23 09:41 pm Mangalore Correspondent ಕರಾವಳಿ
ಮಂಗಳೂರು, ಜೂನ್ 14: ಹುಬ್ಬಳ್ಳಿ ಹುಡ್ಗಿ, ಮಂಗ್ಳೂರು ಹುಡ್ಗ ಸೀರಿಯಲ್ ಹಿಂದೊಮ್ಮೆ ಟಿವಿಯಲ್ಲಿ ಹಿಟ್ ಆಗಿ ಮನೆಮಾತಾಗಿತ್ತು. ಈಗ ಅದೇ ರೀತಿ ಹುಬ್ಬಳ್ಳಿಯ ವಿವಾಹಿತ ಗೃಹಿಣಿಯೊಬ್ಬಳು ಪುತ್ತೂರಿನಲ್ಲಿದ್ದ ಪ್ರಿಯಕರನ ಹುಡುಕ್ಕೊಂಡು ಫ್ರೀ ಬಸ್ ಹತ್ಕೊಂಡು ಬಂದಿದ್ದಾಳೆ. ಅಷ್ಟೇ ಅಲ್ಲ, ತನ್ನ ಹಳೆ ಪ್ರಿಯಕರನ ಜೊತೆಗೆ ನಾಪತ್ತೆಯಾಗಿದ್ದಾಳೆ.
ಹನ್ನೊಂದು ತಿಂಗಳ ಮಗು ಹೊಂದಿರುವ ಹುಬ್ಬಳ್ಳಿ ಮೂಲದ ಮಹಿಳೆ ತನ್ನ ಗಂಡನಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಮಾಡುತ್ತೇನೆಂದು ಹೇಳಿ ಆಧಾರ್ ಕಾರ್ಡ್ ಹಿಡ್ಕೊಂಡು ಮನೆಯಿಂದ ಹೊರಟಿದ್ದಳು. ಬಳಿಕ ಆಧಾರ್ ಕಾರ್ಡ್ ತೋರಿಸಿ ಉಚಿತ ಸರ್ಕಾರಿ ಬಸ್ ಮೂಲಕ ಹುಬ್ಬಳ್ಳಿಯಿಂದ ನೇರವಾಗಿ ಪುತ್ತೂರಿಗೆ ಆಗಮಿಸಿದ್ದಾಳೆ. ಆಕೆಯ ಪ್ರಿಯಕರ ಪುತ್ತೂರಿನ ಕೋಡಿಂಬಾಡಿ ಸಮೀಪದಲ್ಲಿ ತೋಟದ ಕೆಲಸ ಮಾಡುತ್ತಿದ್ದ. ಪ್ರಿಯಕರನನ್ನು ನೋಡಲು ಪುತ್ತೂರಿಗೆ ಆಗಮಿಸಿದ ಮಹಿಳೆ, ಆತನ ಜೊತೆಗೆ ಪರಾರಿಯಾಗಿದ್ದಾಳೆ.

ವರ್ಷದ ಹಿಂದೆ ಮದುವೆಯಾಗಿದ್ದ ಯುವತಿ, ಅದರ ನಡುವೆಯೂ ತನ್ನ ಹಳೇ ಪ್ರಿಯಕರನ ಒಡನಾಟ ಮುಂದುವರಿಸಿದ್ದಳು. ಅದೇ ಸಲುಗೆಯಲ್ಲಿ ಗಂಡನ ಮೇಲಿನ ಕೋಪದಲ್ಲಿ ಕೈಯಲ್ಲಿ ಹಣ ಇಲ್ಲದಿದ್ದರೂ ಉಚಿತ ಬಸ್ ಪ್ರಯಾಣದ ಅವಕಾಶ ಬಳಸಿ ಪ್ರಿಯಕರನನ್ನು ಹುಡುಕುತ್ತಲೇ ದೂರದ ಪುತ್ತೂರಿಗೆ ಬಂದಿದ್ದಾಳೆ ಎನ್ನಲಾಗಿದೆ.
ಮೂರು ದಿನದಿಂದ ಮಹಿಳೆ ನಾಪತ್ತೆಯಾಗಿದ್ದಲ್ಲದೆ, ಪುತ್ತೂರಿಗೆ ಬಂದಿರೋದು ತಿಳಿಯುತ್ತಲೇ ಹುಬ್ಬಳ್ಳಿಯಿಂದ ಗಂಡನ ಮನೆಯವರು ಹಾಗೂ ಯುವತಿ ಮನೆಯವರು ಆಗಮಿಸಿ, ಮಂಗಳವಾರ ರಾತ್ರಿಯೂ ಪುತ್ತೂರಿನಲ್ಲಿ ಹುಡುಕಾಟ ನಡೆಸಿದ್ದಾರೆ. ಯುವತಿ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು ಮನೆಯವರು ಇತ್ತ ದಿಕ್ಕಿಲ್ಲದೆ ಹುಡುಕಾಟ ಆರಂಭಿಸಿದ್ದಾರೆ.
ಕಂಗಾಲಾಗಿದ್ದ ಕುಟುಂಬಸ್ಥರಿಗೆ ಸ್ಥಳೀಯ ಕೆಲವರು ಸಹಕಾರ ನೀಡಿದ್ದು ಯುವಕ - ಯುವತಿಯನ್ನು ಹುಡುಕಿಕೊಡುವುದಾಗಿ ಭರವಸೆ ನೀಡಿದ್ದಾರೆ. ಪುತ್ತೂರು ಪೊಲೀಸರಿಗೆ ದೂರು ನೀಡಿ ಟವರ್ ಲೊಕೇಶನ್ ಪತ್ತೆ ಹಚ್ಚಿದಾಗ ಇಬ್ಬರೂ ಪುತ್ತೂರಿನಿಂದ ಸಿದ್ಧಕಟ್ಟೆಗೆ ಪರಾರಿಯಾದ ಮಾಹಿತಿ ಸಿಕ್ಕಿದೆ.
Married Women uses KSRTC free bus service from Hubbali to Puttur to see her boyfriend, and flees with him.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm