ಬ್ರೇಕಿಂಗ್ ನ್ಯೂಸ್
14-06-23 09:41 pm Mangalore Correspondent ಕರಾವಳಿ
ಮಂಗಳೂರು, ಜೂನ್ 14: ಹುಬ್ಬಳ್ಳಿ ಹುಡ್ಗಿ, ಮಂಗ್ಳೂರು ಹುಡ್ಗ ಸೀರಿಯಲ್ ಹಿಂದೊಮ್ಮೆ ಟಿವಿಯಲ್ಲಿ ಹಿಟ್ ಆಗಿ ಮನೆಮಾತಾಗಿತ್ತು. ಈಗ ಅದೇ ರೀತಿ ಹುಬ್ಬಳ್ಳಿಯ ವಿವಾಹಿತ ಗೃಹಿಣಿಯೊಬ್ಬಳು ಪುತ್ತೂರಿನಲ್ಲಿದ್ದ ಪ್ರಿಯಕರನ ಹುಡುಕ್ಕೊಂಡು ಫ್ರೀ ಬಸ್ ಹತ್ಕೊಂಡು ಬಂದಿದ್ದಾಳೆ. ಅಷ್ಟೇ ಅಲ್ಲ, ತನ್ನ ಹಳೆ ಪ್ರಿಯಕರನ ಜೊತೆಗೆ ನಾಪತ್ತೆಯಾಗಿದ್ದಾಳೆ.
ಹನ್ನೊಂದು ತಿಂಗಳ ಮಗು ಹೊಂದಿರುವ ಹುಬ್ಬಳ್ಳಿ ಮೂಲದ ಮಹಿಳೆ ತನ್ನ ಗಂಡನಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ ಮಾಡುತ್ತೇನೆಂದು ಹೇಳಿ ಆಧಾರ್ ಕಾರ್ಡ್ ಹಿಡ್ಕೊಂಡು ಮನೆಯಿಂದ ಹೊರಟಿದ್ದಳು. ಬಳಿಕ ಆಧಾರ್ ಕಾರ್ಡ್ ತೋರಿಸಿ ಉಚಿತ ಸರ್ಕಾರಿ ಬಸ್ ಮೂಲಕ ಹುಬ್ಬಳ್ಳಿಯಿಂದ ನೇರವಾಗಿ ಪುತ್ತೂರಿಗೆ ಆಗಮಿಸಿದ್ದಾಳೆ. ಆಕೆಯ ಪ್ರಿಯಕರ ಪುತ್ತೂರಿನ ಕೋಡಿಂಬಾಡಿ ಸಮೀಪದಲ್ಲಿ ತೋಟದ ಕೆಲಸ ಮಾಡುತ್ತಿದ್ದ. ಪ್ರಿಯಕರನನ್ನು ನೋಡಲು ಪುತ್ತೂರಿಗೆ ಆಗಮಿಸಿದ ಮಹಿಳೆ, ಆತನ ಜೊತೆಗೆ ಪರಾರಿಯಾಗಿದ್ದಾಳೆ.

ವರ್ಷದ ಹಿಂದೆ ಮದುವೆಯಾಗಿದ್ದ ಯುವತಿ, ಅದರ ನಡುವೆಯೂ ತನ್ನ ಹಳೇ ಪ್ರಿಯಕರನ ಒಡನಾಟ ಮುಂದುವರಿಸಿದ್ದಳು. ಅದೇ ಸಲುಗೆಯಲ್ಲಿ ಗಂಡನ ಮೇಲಿನ ಕೋಪದಲ್ಲಿ ಕೈಯಲ್ಲಿ ಹಣ ಇಲ್ಲದಿದ್ದರೂ ಉಚಿತ ಬಸ್ ಪ್ರಯಾಣದ ಅವಕಾಶ ಬಳಸಿ ಪ್ರಿಯಕರನನ್ನು ಹುಡುಕುತ್ತಲೇ ದೂರದ ಪುತ್ತೂರಿಗೆ ಬಂದಿದ್ದಾಳೆ ಎನ್ನಲಾಗಿದೆ.
ಮೂರು ದಿನದಿಂದ ಮಹಿಳೆ ನಾಪತ್ತೆಯಾಗಿದ್ದಲ್ಲದೆ, ಪುತ್ತೂರಿಗೆ ಬಂದಿರೋದು ತಿಳಿಯುತ್ತಲೇ ಹುಬ್ಬಳ್ಳಿಯಿಂದ ಗಂಡನ ಮನೆಯವರು ಹಾಗೂ ಯುವತಿ ಮನೆಯವರು ಆಗಮಿಸಿ, ಮಂಗಳವಾರ ರಾತ್ರಿಯೂ ಪುತ್ತೂರಿನಲ್ಲಿ ಹುಡುಕಾಟ ನಡೆಸಿದ್ದಾರೆ. ಯುವತಿ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು ಮನೆಯವರು ಇತ್ತ ದಿಕ್ಕಿಲ್ಲದೆ ಹುಡುಕಾಟ ಆರಂಭಿಸಿದ್ದಾರೆ.
ಕಂಗಾಲಾಗಿದ್ದ ಕುಟುಂಬಸ್ಥರಿಗೆ ಸ್ಥಳೀಯ ಕೆಲವರು ಸಹಕಾರ ನೀಡಿದ್ದು ಯುವಕ - ಯುವತಿಯನ್ನು ಹುಡುಕಿಕೊಡುವುದಾಗಿ ಭರವಸೆ ನೀಡಿದ್ದಾರೆ. ಪುತ್ತೂರು ಪೊಲೀಸರಿಗೆ ದೂರು ನೀಡಿ ಟವರ್ ಲೊಕೇಶನ್ ಪತ್ತೆ ಹಚ್ಚಿದಾಗ ಇಬ್ಬರೂ ಪುತ್ತೂರಿನಿಂದ ಸಿದ್ಧಕಟ್ಟೆಗೆ ಪರಾರಿಯಾದ ಮಾಹಿತಿ ಸಿಕ್ಕಿದೆ.
Married Women uses KSRTC free bus service from Hubbali to Puttur to see her boyfriend, and flees with him.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm