ಬ್ರೇಕಿಂಗ್ ನ್ಯೂಸ್
15-06-23 03:55 pm Mangalore Correspondent ಕರಾವಳಿ
ಉಳ್ಳಾಲ, ಜೂ.15: ಕೆಇಆರ್ ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು ಉಳ್ಳಾಲ ಬೈಲಿನ ಮನೆಯೊಂದಕ್ಕೆ ಬರೋಬ್ಬರಿ 7 ಲಕ್ಷ ವಿದ್ಯುತ್ ಬಿಲ್ ಬಂದಿದ್ದನ್ನ ಕಂಡು ಮನೆ ಮಾಲೀಕ ಶಾಕ್ ಆಗಿದ್ದಾರೆ. ಉಳ್ಳಾಲ ಬೈಲಿನ ಸದಾಶಿವ ಆಚಾರ್ಯ ಅವರ ಮನೆಗೆ ನಿನ್ನೆ ಬಂದ ಬಿಲ್ ರೀಡರ್ ಬರೋಬರಿ 7,71,072 ರೂ. ಬಿಲ್ಲನ್ನ ನೀಡಿ ತೆರಳಿದ್ದಾನೆ.
ಮನೆ ಮಂದಿ 7 ಲಕ್ಷ ಬಿಲ್ ನೋಡಿ ಹೌಹಾರಿದ್ದು ಬಿಲ್ ರೀಡಿಂಗ್ ಮಾಡಿದ ವ್ಯಕ್ತಿಯಲ್ಲಿ ವಿಚಾರಿಸಿದಾಗ ಅದೆಲ್ಲ ನನಗೆ ಗೊತ್ತಿಲ್ಲ. ಮೆಸ್ಕಾಂ ಕಚೇರಿಗೆ ಹೋಗಿ ವಿಚಾರಿಸಿ ಎಂದು ಉಡಾಫೆಯ ಉತ್ತರ ನೀಡಿ ತೆರಳಿದ್ದಾನಂತೆ. ವಿದ್ಯುತ್ ಬಿಲ್ ರಸೀದಿಯಲ್ಲಿ 99,338 ಯೂನಿಟ್ ಖರ್ಚಾಗಿದ್ದು 7,71,072 ರೂಪಾಯಿ ಬಿಲ್ ನಮೂದಿಸಲಾಗಿದೆ. ತಮಗೆ ಈ ಮೊದಲು 3,000 ದಷ್ಟು ಮಾಸಿಕ ವಿದ್ಯುತ್ ಬಿಲ್ ಬರುತ್ತಿತ್ತು. ನಾವು ಪ್ರತಿ ತಿಂಗಳು ಬಿಲ್ಲನ್ನ ಕಟ್ಟುತ್ತೇವೆ. ಈ ತಿಂಗಳು ಬಂದ ಬಿಲ್ಲನ್ನ ನೋಡಿ ಮನೆ ಮಂದಿಯೆಲ್ಲ ಶಾಕ್ ಆದೆವು ಎಂದು ಮನೆ ಮಾಲೀಕ ಸದಾಶಿವ ಆಚಾರ್ಯ ಹೇಳಿದ್ದಾರೆ.
ಈ ಬಗ್ಗೆ ಹೆಡ್ ಲೈನ್ ಕರ್ನಾಟಕ ಪ್ರತಿನಿಧಿ ಉಳ್ಳಾಲ ಉಪವಿಭಾಗ ಮೆಸ್ಕಾಂ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದಯಾನಂದ ಅವರಲ್ಲಿ ವಿಚಾರಿಸಿದಾಗ, ಏಜೆನ್ಸಿಗಳ ಮುಖಾಂತರ ಬಿಲ್ ಕಲೆಕ್ಷನ್ ಮಾಡಲಾಗುತ್ತದೆ. ಬಿಲ್ ರೀಡರ್ ಎಡವಟ್ಟಿನಿಂದ ತಪ್ಪಾಗಿ ವಿದ್ಯುತ್ ಬಿಲ್ ಮುದ್ರಣ ಆಗಿದೆ. ಬಿಲ್ಲಲ್ಲಿ ಲೋಪ ಕಂಡು ಬಂದರೆ ಅದನ್ನ ಗ್ರಾಹಕರಿಗೆ ಕೊಡುವಂತಿಲ್ಲ. ತಕ್ಷಣವೇ ಸದಾಶಿವ ಆಚಾರ್ಯ ಅವರ ಮನೆ ಬಾಗಿಲಿಗೆ ಪರಿಷ್ಕೃತ ಬಿಲ್ ತಲುಪಿಸುವುದಾಗಿ ಹೇಳಿದ್ದು ಇಂದು ಮದ್ಯಾಹ್ನದ ವೇಳೆ ಪರಿಷ್ಕೃತ 2,833 ರೂಪಾಯಿಗಳ ಬಿಲ್ ಆಚಾರ್ಯ ಅವರ ಮನೆ ತಲುಪಿದೆ.
Mangalore MESCOM Meter reading error, house gets 7 lakhs electric bill in Ullal, tenants in shock. Tenants who were getting Rs 3000 as thier bill were shocked to see a bill amount of 7 lakhs.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 03:04 pm
Mangalore Correspondent
Mervin Mendonca Accident, Udupi, Mangalore: ರ...
23-08-25 01:29 pm
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
23-08-25 06:21 pm
Mangaluru Correspondent
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm