ಬ್ರೇಕಿಂಗ್ ನ್ಯೂಸ್
31-10-20 06:56 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 31: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕೃತವಾಗಿ ಅದಾನಿ ಕಂಪನಿ ತೆಕ್ಕೆಗೆ ಬಿದ್ದಿದೆ. ಅದಾನಿ ಕಂಪನಿಯ ಅಧಿಕಾರಿಗಳು ಶನಿವಾರವೇ ಮಂಗಳೂರು ಏರ್ಪೋರ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಅ.31ರಿಂದ ಅದಾನಿ ಕಂಪನಿ ಅಧಿಕೃತ ಎಂಟ್ರಿ ಪಡೆಯಲಿದೆ ಎನ್ನಲಾಗುತ್ತಿತ್ತು. ಅದೇ ಪ್ರಕಾರದಲ್ಲಿ ಕಂಪನಿ ಅಧಿಕಾರಿಗಳು ನಿರ್ವಹಣೆ ಆರಂಭಿಸಿದ್ದು, ಔಪಚಾರಿಕವಾಗಿ ಮಂಗಳೂರು ನಿಲ್ದಾಣ ಪ್ರಾಧಿಕಾರದ ನಿರ್ದೇಶಕರಿಂದ ಕೀ ಹಸ್ತಾಂತರ ಮಾಡಿಕೊಂಡಿದ್ದಾರೆ. ವಿಶೇಷ ಅಂದ್ರೆ, ಮೊದಲ ದಿನವೇ ವಿಮಾನ ನಿಲ್ದಾಣದ ನೇಮ್ ಪ್ಲೇಟ್ ಅನ್ನು ಕಂಪನಿ ಅಧಿಕಾರಿಗಳು ಬದಲಿಸಿದ್ದಾರೆ. ಮಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಹೆಸರಿನ ಜೊತೆಗೆ ಅದಾನಿ ಏರ್ಪೋರ್ಟ್ ಎನ್ನುವ ಸಿಂಬಲನ್ನು ಸೇರಿಸಲಾಗಿದೆ.

ಮಂಗಳೂರು ಸೇರಿದಂತೆ ದೇಶದ ಆರು ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ ಗುತ್ತಿಗೆ ಪಡೆದುಕೊಂಡಿದೆ. ಅದರಂತೆ, ನವೆಂಬರ್ 2ರಂದು ಲಕ್ನೋ ಮತ್ತು ಅಹ್ಮದಾಬಾದ್ ವಿಮಾನ ನಿಲ್ದಾಣದ ನಿರ್ವಹಣೆಯನ್ನು ನ.7ರಂದು ಪಡೆದುಕೊಳ್ಳಲಿದೆ. ಕಳೆದ ಫೆಬ್ರವರಿ ತಿಂಗಳಲ್ಲಿಯೇ ಒಪ್ಪಂದ ಪ್ರಕ್ರಿಯೆಗಳು ಆಗಿದ್ದವು. ಆದರೆ, ಕೊರೊನಾ ಲಾಕ್ಡೌನ್ ಕಾರಣದಿಂದಾಗಿ ಹಸ್ತಾಂತರ ವಿಳಂಬವಾಗಿತ್ತು.
ದಕ್ಷ ಮತ್ತು ಗುಣಮಟ್ಟದ ಕಾರ್ಯಾಚರಣೆ ಹಾಗೂ ನಿಲ್ದಾಣಗಳ ಅಭಿವೃದ್ಧಿ ದೃಷ್ಟಿಯಿಂದ ಕಳೆದ 2018ರಲ್ಲಿ ಕೇಂದ್ರ ಸರಕಾರ ದೇಶದ ಆರು ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ನಿರ್ಧರಿಸಿತ್ತು. ಅದರಂತೆ, ಮಂಗಳೂರು ವಿಮಾನ ನಿಲ್ದಾಣವನ್ನು 50 ವರ್ಷಗಳ ಅವಧಿಗೆ ಅದಾನಿ ಕಂಪನಿಗೆ ಗುತ್ತಿಗೆ ನೀಡಿದೆ.
Adani group of company takes over the management of Mangalore International airport here on Saturday October 31, 2020.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am