ಬ್ರೇಕಿಂಗ್ ನ್ಯೂಸ್
16-06-23 03:13 pm Mangalore Correspondent ಕರಾವಳಿ
ಮಂಗಳೂರು, ಜೂನ್ 16: ಕಡಲ್ಕೊರೆತ ಸಮಸ್ಯೆ ಪ್ರತಿ ವರ್ಷ ಜೂನ್, ಜುಲೈ ತಿಂಗಳಲ್ಲಿ ಮಾತ್ರ ಬರುತ್ತದೆ. ಸಮಸ್ಯೆ ಎದುರಾಗುವ ಮೊದಲೇ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಬೇಕಾದ್ದು ಸರಕಾರ ಜವಾಬ್ದಾರಿ. ಆ ಕೆಲಸವನ್ನು ನಾವು ಮಾಡುತ್ತೇವೆ. ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಮೀನುಗಾರಿಕೆ, ಬಂದರು ಮತ್ತು ಜಲಸಾರಿಗೆ ಸಚಿವ ಮಾಂಕಾಳು ವೈದ್ಯ ಹೇಳಿದ್ದಾರೆ.
ಸಚಿವರಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಭೇಟಿಯಿತ್ತ ಸಚಿವರು, ಬಂದರು ಮತ್ತು ಮೀನುಗಾರಿಕೆ ಕಚೇರಿಗೆ ಭೇಟಿ ನೀಡಿದರು. ಆನಂತರ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆಯ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲ್ಕೊರೆತ ಸಮಸ್ಯೆ ಇರುವುದು ನನಗೆ ತಿಳಿದಿದೆ. ಇದರಿಂದ ಬಡವರಿಗೆ, ಅಲ್ಲಿನ ನಿವಾಸಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಇಂಥದ್ದಕ್ಕೆಲ್ಲ ಸಮಸ್ಯೆ ಉಂಟಾದ ಬಳಿಕ ಕೆಲಸ ಮಾಡೋದಲ್ಲ. ಸಮಸ್ಯೆ ಎದುರಾಗುವ ಮೊದಲೇ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ಎಲ್ಲಿ ಏನು ಸಮಸ್ಯೆ ಆಗಿದೆಯೋ, ಅದಕ್ಕೆ ಸೂಕ್ತ ರೀತಿ ಸ್ಪಂದಿಸುತ್ತೇನೆ ಎಂದು ಹೇಳಿದರು.
ಕಳೆದ ಕೆಲವು ವರ್ಷಗಳಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಸಾವನ್ನಪ್ಪಿದವರಿಗೆ ಸರಕಾರದಿಂದ ಪರಿಹಾರದ ಹಣ ಕೊಟ್ಟಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೀತಿ 20 ಜನರು ಸತ್ತಿದ್ದು, ಅವರ ಕುಟುಂಬಗಳಿಗೆ 1.20 ಕೋಟಿ ರೂ. ಆಗಬೇಕಿದೆ. ಮೂರು ಜಿಲ್ಲೆಗಳಲ್ಲಿ ಮೃತಪಟ್ಟವರಿಗೆ 3.20 ಕೋಟಿ ರೂಪಾಯಿ ಆಗಬೇಕಿದ್ದು, ಅದನ್ನು ಇಲಾಖೆಯಿಂದ ಬಿಡುಗಡೆ ಮಾಡಿಸುತ್ತೇನೆ ಎಂದರು. ಬಿಜೆಪಿ ಸರಕಾರಕ್ಕೆ ಬಡವರ ಬಗ್ಗೆ ಕಾಳಜಿ ಇಲ್ಲ. ಮೀನುಗಾರಿಕೆಯಲ್ಲಿ ಸತ್ತು ಹೋಗಿದ್ದಕ್ಕೆ ಪ್ರೂಫ್ ಇದ್ದರೆ ಸಾಕು. ಸತ್ತವರ ಬಗ್ಗೆ ಮಾನದಂಡ ಕೇಳಿದರೆ ಕತೆಯೇನ್ರಿ ಎಂದು ಪ್ರಶ್ನಿಸಿದ ಸಚಿವ ಮಾಂಕಾಳು ವೈದ್ಯ, ಕೇಂದ್ರ ಸರಕಾರ ಯಾವುದೋ ಏಜನ್ಸಿಗೆ ಪರಿಹಾರದ ಹಣ ನೀಡಲು ನೇಮಕ ಮಾಡಿದೆ. ಅದರ ಬಗ್ಗೆ ನಾನು ಮಾತನಾಡಲ್ಲ. ನಾವು ರಾಜ್ಯ ಸರಕಾರದಿಂದ ಏನು ಪರಿಹಾರ ಆಗಬೇಕಿದೆಯೋ ಅದನ್ನು ಒದಗಿಸುತ್ತೇನೆ. ಬಿಜೆಪಿಯವರಿಗೆ ಕಾಳಜಿ ಇಲ್ಲದೆ ಇರೋದ್ರಿಂದಲೇ ವರ್ಷಗಟ್ಟಲೆ ಪರಿಹಾರದ ಹಣ ಬಾಕಿಯಾಗಿದೆ. ಅದನ್ನು ಈಗ ಕೊಡಿಸುವ ದುಸ್ಥಿತಿ ನಮ್ಮ ಸರಕಾರಕ್ಕೆ ಬಂದಿದೆ.
ಮೀನುಗಾರರು ಇಡೀ ದೇಶದಲ್ಲಿ ಅತಿ ಹೆಚ್ಚು ನಿರ್ಲಕ್ಷಿತರಾಗಿದ್ದಾರೆ. ಕಳೆದ ಹತ್ತು ತಿಂಗಳಲ್ಲಿ ಬಿಜೆಪಿ ಸರಕಾರ ಮೀನುಗಾರರಿಗೆ ಡೀಸೆಲ್ ಸಬ್ಸಿಡಿ ಕೊಟ್ಟಿಲ್ಲ. ಹತ್ತು ತಿಂಗಳದ್ದು ಸೇರಿ ಪ್ರತಿ ತಿಂಗಳು ಡೀಸೆಲ್ ಸಬ್ಸಿಡಿ ಸಿಗುವಂತೆ ಮಾಡುತ್ತೇನೆ. ಅಧಿಕಾರಿಗಳು ಒಂದು ತಿಂಗಳಲ್ಲಿ ಈ ಕೆಲಸವನ್ನು ಮಾಡಬೇಕು. ಕೆಲಸ ಮಾಡದ ಅಧಿಕಾರಿಗಳನ್ನು ನನ್ನ ಇಲಾಖೆಯಲ್ಲಿ ಉಳಿಸಿಕೊಳ್ಳೋದಿಲ್ಲ ಎಂದು ಖಡಕ್ಕಾಗಿ ಹೇಳಿದರು.
Mangalore Mankala Vaidya, strict action on sea erosion, we will take Immidete steps says Fisheries Minister
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm