ಬ್ರೇಕಿಂಗ್ ನ್ಯೂಸ್
17-06-23 09:22 pm Mangalore Correspondent ಕರಾವಳಿ
ಉಳ್ಳಾಲ, ಜೂ.17: ಮೆಹಂದಿ ಶಾಸ್ತ್ರದಂದೇ ನಾಪತ್ತೆಯಾಗಿದ್ದ ವರ್ಕಾಡಿ ದೇವಂದಪಡ್ಪುವಿನ ಕಿಶನ್ ನನ್ನು ಕೊಣಾಜೆ ಪೊಲೀಸರು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಠಾಣೆಗೆ ಕರೆದು ತಂದಿದ್ದು ಮನೆಮಂದಿ ವಶಕ್ಕೆ ಒಪ್ಪಿಸಿದ್ದಾರೆ.
ಕೊಣಾಜೆ ಪೊಲೀಸರು ಬೆಂಗಳೂರಿನ ಲಾಡ್ಜ್ ಒಂದರಲ್ಲಿದ್ದ ಕಿಶನ್ ನನ್ನು ಕರೆತಂದು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ. ಗಡಿಭಾಗದ ವರ್ಕಾಡಿ ದೇವಂದಪಡ್ಪು ನಿವಾಸಿ, ಉದ್ಯಮಿ ಐತಪ್ಪ ಶೆಟ್ಟಿ ಅವರ ಮಗ ಕಿಶನ್ ಶೆಟ್ಟಿ ಮೇ 31ರಂದು ಮದುವೆಯ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲು ತೆರಳಿದ್ದವ ನಾಪತ್ತೆಯಾಗಿದ್ದು ಹಲವು ಊಹಾಪೋಹಗಳನ್ನು ಸೃಷ್ಟಿಸಿತ್ತು. ಕಿಶನ್ ಶೆಟ್ಟಿ ಕುಂಜತ್ತೂರು ಬಳಿಯ ಅನ್ಯಜಾತಿಯ ಯುವತಿಯನ್ನು ಕಾಲೇಜು ಸಹಪಾಠಿಯಾಗಿದ್ದಾಗಲೇ ಪ್ರೀತಿಸಲಾರಂಭಿಸಿದ್ದರೂ ಇತ್ತೀಚೆಗಷ್ಟೇ ಬೇರೊಂದು ಯುವತಿಯ ಜತೆಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಆ ಬಳಿಕ ಪ್ರೀತಿಸಿದ ಯುವತಿಯನ್ನು ತಿರಸ್ಕರಿಸುತ್ತಾ ಬಂದಿದ್ದ ಎನ್ನಲಾಗಿದ್ದು ಅದರಿಂದ ಕೆರಳಿದ ಯುವತಿ ತನ್ನ ಬಿಟ್ಟು ಬೇರೆ ಯಾರನ್ನೇ ಮದುವೆಯಾದರೂ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಹಿಂಜರಿಯಲಾರೆ ಅಥವಾ ಮದುವೆ ತಡೆಯುವುದಾಗಿ ಬೆದರಿಕೆ ಒಡ್ಡಿದ್ದಳು ಎನ್ನಲಾಗಿದ್ದು ಹೆದರಿದ ಕಿಶನ್ ಮೆಹಂದಿ ಶಾಸ್ತ್ರದಂದೇ ನಾಪತ್ತೆಯಾಗಿದ್ದ.
ಕಿಶನ್ ನಾಪತ್ತೆಯಾದ ಕೆಲ ದಿನಗಳ ಬಳಿಕ ತನ್ನ ತಂಗಿಯ ಮೊಬೈಲ್ ಗೆ ನಾನು ಬಳ್ಳಾರಿಯಲ್ಲಿದ್ದೇನೆ, ಇನ್ನು ಮುಂದೆ ಎಂದಿಗೂ ಮನೆಗೆ ಬರುವುದಿಲ್ಲ ಎಂದು ಸಂದೇಶ ರವಾನಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದ. ಅಂದು ಮಗನ ಜೀವಕ್ಕೆ ಅಪಾಯ ಇಲ್ಲವೆಂದು ಪೋಷಕರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದರು.
Mangalore Bride groom Kishan who went missing on the day oh his Mehandi returns back home. Due to the fear of his girlfriend dropping his marriage he went missing says Kishan. Kishan was traced by Mangalore Police in Bangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm