ಬ್ರೇಕಿಂಗ್ ನ್ಯೂಸ್
18-06-23 05:41 pm Mangalore Correspondent ಕರಾವಳಿ
ಮಂಗಳೂರು, ಜೂನ್ 18: ಪೊಲೀಸರ ಎದುರಲ್ಲೇ ವಿದ್ಯಾರ್ಥಿಗಳ ಗುಂಪೊಂದು ಬಸ್ ನಿಲ್ಲಿಸಿ, ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ತೋರಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಕಡೆಯಿಂದ ಚಾರ್ಮಾಡಿ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್ಪ್ರೆಸ್ ಬಸ್ಸಿನಲ್ಲಿ ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ, ಬಸ್ಸನ್ನು ಚಾರ್ಮಾಡಿಯಲ್ಲಿ ನಿಲ್ಲಿಸಬೇಕೆಂದು ವಿದ್ಯಾರ್ಥಿಗಳ ಗುಂಪು ಒತ್ತಾಯಿಸಿದ್ದು ಬಸ್ ಕಂಡಕ್ಟರ್ ಜೊತೆ ವಾಗ್ವಾದ ನಡೆಸಿದ್ದಾರೆ. ಬಸ್ಸಿನಲ್ಲಿ ವಾಗ್ವಾದ ನಡೆಯುತ್ತಿದ್ದಾಗ ಪ್ರಯಾಣಿಕರೊಬ್ಬರು ಕಂಡಕ್ಟರ್ ಪರವಾಗಿ ಮಾತನಾಡಿದ್ದಾರೆ. ಇದರಿಂದ ಕುಪಿತರಾದ ವಿದ್ಯಾರ್ಥಿಗಳ ಗುಂಪು ಪ್ರಯಾಣಿಕರನ್ನು ದಬಾಯಿಸಿದ್ದಾರೆ. ಬಳಿಕ ಒಂದು ಸಮುದಾಯದ ಇತರೇ ಯುವಕರನ್ನು ಕರೆಸಿ, ಚಾರ್ಮಾಡಿಯಲ್ಲಿ ಗಲಾಟೆ ನಡೆಸಿದ್ದು ಬಸ್ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ.


ಬಸ್ ನಿಲ್ಲಿಸಿ ಯುವಕರ ತಂಡ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದು ಇದರ ವಿಡಿಯೋವನ್ನು ಇತರೇ ಪ್ರಯಾಣಿಕರು ಮೊಬೈಲಿನಲ್ಲಿ ಸೆರೆಹಿಡಿದಿದ್ದಾರೆ. ನಿನ್ನೆ ಮಧ್ಯಾಹ್ನ ಘಟನೆ ನಡೆದಿದ್ದು ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರ ಎದುರಲ್ಲೇ ದಾಂಧಲೆ ನಡೆಸಿದ್ದು ಅವಾಚ್ಯ ಶಬ್ದಗಳಿಂದ ಬಸ್ ಪ್ರಯಾಣಿಕ ಮತ್ತು ನಿರ್ವಾಹಕರನ್ನು ನಿಂದಿಸಿದ್ದಾರೆ.

ಬಸ್ಸಿನಲ್ಲಿ ಕಂಡಕ್ಟರ್ ಜೊತೆಗೆ ವಾಗ್ವಾದ ನಡೆದು ಬಳಿಕ ಇತರೇ ಯುವಕರ ತಂಡ ಸೇರಿಕೊಂಡು ಬಸ್ ತಡೆದು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದು ಪೊಲೀಸರ ಮುಂದೆಯೇ ಕಾನೂನು ಕೈಗೆತ್ತಿಕೊಂಡು ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ. ನೈತಿಕ ಪೊಲೀಸ್ ಕೃತ್ಯಕ್ಕೆ ನಿರ್ದಾಕ್ಷಿಣ್ಯ ಕ್ರಮದ ಭರವಸೆ ನೀಡಿದ್ದರೂ, ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಲ್ಲ.
Charmadi ghat students fight in the presence of police, passenger assulted, moral policing at Ujre.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm