ಬ್ರೇಕಿಂಗ್ ನ್ಯೂಸ್
19-06-23 12:52 pm Udupi Correspondent ಕರಾವಳಿ
ಉಡುಪಿ, ಜೂನ್ 19: ಆಗುಂಬೆ ಘಾಟ್ ಹೆದ್ದಾರಿ ತಿರುವಿನಲ್ಲಿ ಬಸ್ ಮತ್ತು ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಸಹ ಸವಾರೆಯಾಗಿದ್ದ ಯುವತಿಯೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸಿವಿಲ್ ಎಂಜಿನಿಯರಿಂಗ್ ಮುಗಿಸಿ, ಸಿವಿಲ್ ಕಂಟ್ರಾಕ್ಟರ್ ಜೊತೆಗೆ ಕೆಲಸ ಮಾಡುತ್ತಿದ್ದ ಬಾರ್ಕೂರು ನಿವಾಸಿ ಶಶಾಂಕ್ (21) ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರ ಗಾಯಗೊಂಡಿದ್ದ ಹಿಂಬದಿ ಕುಳಿತಿದ್ದ ಶಶಾಂಕ್ ಅವರ ಅಕ್ಕನ ಮಗಳು ನಿರ್ಮಿತ(19) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಶಶಾಂಕ್ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಈ ವೇಳೆ, ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿತ್ತು. ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿತ್ತು.
ಶಶಾಂಕ್ ಸಹಿತ ಒಂದೇ ಕುಟುಂಬದ 6 ಮಂದಿ ಮೂರು ಬೈಕ್ಗಳಲ್ಲಿ ಭಾನುವಾರ ಬೆಳಗ್ಗೆ ತಮ್ಮ ಊರು ಬಾರ್ಕೂರು ಕಡೆಗೆ ಬರುತ್ತಿದ್ದರು. ಶಶಾಂಕ್ ಅವರ ಜತೆ ಹಿಂಬದಿ ಕುಳಿತಿದ್ದ ಅಕ್ಕನ ಮಗಳು ನಿರ್ಮಿತಾ ಅವರಿದ್ದ ಬೈಕ್ ಅಪಘಾತಕ್ಕೀಡಾಗಿದೆ. ನಿರ್ಮಿತಾ ದ್ವಿತೀಯ ಪಿಯುಸಿ ಮುಗಿಸಿ ಪದವಿ ಕಾಲೇಜಿಗೆ ಸೇರಿದ್ದರು ಎಂದು ತಿಳಿದುಬಂದಿದೆ. ಜವರಾಯನ ರೂಪದಲ್ಲಿ ಬಂದಿದ್ದ ಬಸ್ ಡಿಕ್ಕಿಯಾಗಿ ಇಬ್ಬರೂ ಪ್ರಾಣ ಕಳಕೊಂಡಿದ್ದಾರೆ.
Agumbe ghat accident, Udupi girl who suffered injuries died in hospital. The girl who was critically injured in an accident that occurred at Agumbe Ghat in Thirthahalli taluk of Shivamogga district on Sunday June 18, succumbed to injuries at a hospital in Manipal on June 19. Nirimita (19) lost her battle for life on Monday. Shashank (21) had died on the spot in the mishap on Sunday.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm