ಬ್ರೇಕಿಂಗ್ ನ್ಯೂಸ್
19-06-23 11:05 pm Mangalore Correspondent ಕರಾವಳಿ
ಉಳ್ಳಾಲ, ಜೂ.19: ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಸಿದ್ಧರಾಮಯ್ಯ ಸರಕಾರ ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸಿ ರಾಜ್ಯವನ್ನ ಶ್ರೀಲಂಕಾದ ಮಾದರಿಯಲ್ಲಿ ದಿವಾಳಿ ಮಾಡುತ್ತೆ. ಆ್ಯಂಟಿ ಕಮ್ಯುನಲ್ ಪೋರ್ಸ್ ಹೆಸರಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರನ್ನ ಮುಟ್ಟಿದ್ರೆ ನಾವು ಸಮ್ನೆ ಇರಲ್ಲ ಹುಷಾರ್ ಎಂದು ಬಿಜೆಪಿ ನಾಯಕರಾದ ಸತೀಶ್ ಕುಂಪಲ ಮತ್ತು ಸಂತೋಷ್ ಬೋಳಿಯಾರ್ ಎಚ್ಚರಿಸಿದ್ದಾರೆ.
ತೊಕ್ಕೊಟ್ಟಿನ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಬೋಳಿಯಾರ್ ಮಾತನಾಡಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿ ಜಾರಿ ಮಾಡುವಲ್ಲಿ ಗೊಂದಲಕ್ಕೆ ಸಿಲುಕಿದೆ. ಈಗಾಗಲೇ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ಮೇಲೆ ಪರಿಣಾಮ ಬೀರಿದೆ. ಉಚಿತ ಪ್ರಯಾಣ ಘೋಷಣೆ ಮಾಡಿದ ಸರ್ಕಾರ ಕೆಎಸ್ಸಾರ್ಟಿಸಿ ಸಿಬ್ಬಂದಿ ವೇತನ ಹೇಗೆ ನೀಡುವುದು ಎಂಬ ಚಿಂತೆಯಲ್ಲಿ ಇದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರೆಂಟ್ ಫ್ರೀ ನಮಗೂ ಫ್ರೀ ನಿಮಗೂ ಫ್ರೀ ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಈಗ ಅದನ್ನು ಜಾರಿ ಮಾಡುವ ಉದ್ದೇಶದಿಂದ ಇನ್ನೊಂದೆಡೆ ವಿದ್ಯುತ್ ಬಿಲ್ ಗಗನಕ್ಕೇರಿಸಿದ್ದಾರೆ.10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ ಸರ್ಕಾರ ಈಗ ಮೋದಿ ಕಡೆ ಬೆರಳು ತೋರಿಸುತ್ತಿದೆ. ಮೋದಿ ಸರಕಾರ ಈಗಲೂ ರಾಜ್ಯಕ್ಕೆ ಐದು ಕೆ.ಜಿ ಅಕ್ಕಿ ಕೊಡುತ್ತಿದೆ. ಇದಕ್ಕೆ ರಾಜ್ಯ 10 ಕೆ.ಜಿ ಅಕ್ಕಿ ಸೇರಿಸಿ ಕೊಡಬೇಕು. ಕೊಟ್ಟ ಗ್ಯಾರಂಟಿಯನ್ನ ಕೈ ಸರಕಾರ ಈಡೇರಿಸದಿದ್ದರೆ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ಮಾತನಾಡಿ ಸಿದ್ಧರಾಮಯ್ಯ ಸರಕಾರ ಯಾವುದೇ ಷರತ್ತಿಲ್ಲದೆ ಟ್ಯಾಕ್ಸಿ, ಇನ್ನಿತರ ಚಾಲಕರಿಗೆ ತಿಂಗಳಿಗೆ 5000 ಮಾಶಾಸನ ಕೊಡುವ ಕಾರ್ಯ ಮಾಡಲಿ. ಸರಕಾರವು ಓಲೈಕೆ ರಾಜಕಾರಣಕ್ಕೆ ಮಣಿದು ಮತಾಂತರ ನಿಷೇಧ ಕಾಯ್ದೆಯನ್ನ ವಾಪಸ್ ತೆಗೆಯುವುದರ ಮೂಲಕ ರಾಜ್ಯದ ಶಾಂತಿ ಸುವ್ಯವಸ್ಥೆಯನ್ನ ಕದಡುವ ಕಾರ್ಯ ಮಾಡುತ್ತಿದೆ. ಆ್ಯಂಟಿ ಕಮ್ಯುನಲ್ ಪೋರ್ಸ್ ಮಾಡಿರುವುದೇ ಹಿಂದುತ್ವದ ಹೋರಾಟಗಾರರನ್ನ ಹತ್ತಿಕ್ಕಲು. ಇದನ್ನ ನಾವು ಖಂಡಿಸುತ್ತೇವೆ. ಹಿಂದೂ ಕಾರ್ಯಕರ್ತರನ್ನ ಟಾರ್ಗೆಟ್ ಮಾಡಿದರೆ ಸುಮ್ನೆ ಬಿಡಲ್ಲ ಎಂದು ಎಚ್ಚರಿಸಿದರು.
Mangalore Dare to touch Hindus in the name of Anti Communial Wing, warns Satish Kumpala in Ullal. Recently Home Minister had launched Anti communial wing to avoid Moral Policing.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm