ಬ್ರೇಕಿಂಗ್ ನ್ಯೂಸ್
20-06-23 10:32 am Mangalore Correspondent ಕರಾವಳಿ
ಉಳ್ಳಾಲ, ಜೂ.20: ಪಂಚಾಯತ್ ಆಡಳಿತದ ಗಮನಕ್ಕೆ ತರದೆ ಚರಂಡಿ ಅಗೆಯೋ ನೆಪದಲ್ಲಿ ಕೋಟೆಕಾರು ಪಟ್ಟಣ ಪಂಚಾಯತ್ ಸದಸ್ಯರೋರ್ವರು ಮೋರಿಗಳನ್ನೇ ಒಡೆದು ಬಿಸಾಕಿದ್ದು ಮಕ್ಕಳು, ವೃದ್ಧರು ಚರಂಡಿ ದಾಟಲು ಬವಣೆ ಪಡುತ್ತಿದ್ದು ಜನರು ಸದಸ್ಯನಲ್ಲಿ ಈ ಬಗ್ಗೆ ಕೇಳಿದರೆ ಧಮ್ಕಿ ಹಾಕಿದ ಘಟನೆ ಸಾಯಿನಗರ ಎಂಬಲ್ಲಿ ನಡೆದಿದೆ.
ಕೋಟೆಕಾರು ಪಟ್ಟಣ ಪಂಚಾಯತ್ 11ನೇ ವಾರ್ಡ್ ಸದಸ್ಯ ಹರೀಶ್ ರಾವ್ ಅವರು ತಮ್ಮ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯ ಎಂತದ್ದು ನೋಡಿ. ಕಳೆದ ಹತ್ತು ದಿವಸಗಳ ಹಿಂದೆ ಸಾಯಿನಗರಕ್ಕೆ ಬಂದ ಹರೀಶ್ ಚರಂಡಿ ಕಾಮಗಾರಿ ನಡೆಸಲಿಕ್ಕಿದೆ ಎಂದು ಹೇಳಿ ಇಲ್ಲಿನ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮನೆಯವರು ಸ್ವಂತ ಖರ್ಚಲ್ಲಿ ನಿರ್ಮಿಸಿದ್ದ ಮೋರಿಗಳನ್ನ ಜೆಸಿಬಿಯಲ್ಲಿ ಒಡೆದು ಬಿಸಾಕಿದ್ದಾರಂತೆ. ಏನೋ ಸದಸ್ಯರು ಅಭಿವೃದ್ಧಿ ಕಾರ್ಯ ಮಾಡುತ್ತಿದ್ದಾರೆಂದು ಸುಮ್ಮನಿದ್ದ ಸ್ಥಳೀಯರು ಹತ್ತು ದಿವಸಗಳಾದರೂ ಕಾಮಗಾರಿಯೇ ನಡೆಯದ್ದನ್ನು ಕಂಡು ಕೆರಳಿದ್ದಾರೆ.



ಮೋರಿಗಳನ್ನ ಬಿಸಾಕಿದ ಕೌನ್ಸಿಲರ್ ಹರೀಶ್ ಅವರು ಚರಂಡಿ ದಾಟಲು ತಾತ್ಕಾಲಿಕ ವ್ಯವಸ್ಥೆಯನ್ನೂ ಮಾಡಿಲ್ಲವಂತೆ. ಸ್ಥಳೀಯರೇ ಸೆಂಟ್ರಿಗ್ ಹಲಗೆಗಳನ್ನ ತಂದು ಚರಂಡಿ ದಾಟಲು ವ್ಯವಸ್ಥೆ ಮಾಡಿದ್ದಾರೆ. ಮೋರಿಗಳಿಲ್ಲದೆ ಮನೆ ಮಂದಿ ತಮ್ಮ ವಾಹನಗಳನ್ನ ಮನೆಯೊಳಗೆ ಕೊಂಡೊಯ್ಯಲು ಸಾಧ್ಯವಾಗದೆ, ಚರಂಡಿ ದಾಟಲು ಬವಣೆ ಪಡುತ್ತಿದ್ದಾರೆ. ಕಳೆದ ವಾರ ಸುರಿದ ಮಳೆಗೆ ವೃದ್ಧರು ಹಲಗೆಯಲ್ಲಿ ಚರಂಡಿ ದಾಟುತ್ತಿದ್ದ ವೇಳೆ ಬಿದ್ದು ಗಾಯಗೊಂಡಿದ್ದಾರೆ. ಪಟ್ಟಣ ಸದಸ್ಯರು ಕೈಗೊಂಡಿರುವ ಕಾಮಗಾರಿ ಬಗ್ಗೆ ಪಂಚಾಯತ್ ಅಧಿಕಾರಿಗಳಲ್ಲಿ ಸ್ಥಳೀಯರು ಕೇಳಿದ್ದು ಚರಂಡಿ ಅಗೆಯಲು ಯಾವುದೇ ಅನುದಾನ, ಟೆಂಡರ್ ಆಗಿಲ್ಲವೆಂದು ಅಧಿಕಾರಿಗಳು ಹೇಳಿದ್ದಾರಂತೆ.


ಕೌನ್ಸಿಲರ್ ಹರೀಶ್ ಸ್ವಯಂ ಹಿತಾಸಕ್ತಿಯಿಂದ ಮನೆಗಳ ಸಂಪರ್ಕದ ಮೋರಿಗಳನ್ನ ಒಡೆದು ಹಾಕಿದ್ದು ಕೇಳಲು ಹೋದವರಲ್ಲಿ ನಿಮ್ಮನ್ನ ನೋಡಿ ಕೊಳ್ಳುತ್ತೇನೆಂದು ಧಮ್ಕಿ ಹಾಕುತ್ತಿದ್ದು , ನಮ್ಮ ಸಮಸ್ಯೆ ಬಗೆ ಹರಿಸದಿದ್ದರೆ ನಾವೆಲ್ಲರೂ ಪಟ್ಟಣ ಪಂಚಾಯತ್ಗೆ ಮುತ್ತಿಗೆ ಹಾಕಿ ಧರಣಿ ನಡೆಸುತ್ತೇವೆಂದು ಸ್ಥಳೀಯ ನಿವಾಸಿ ಬಿಜು ಜಾರ್ಜ್ ಎಚ್ಚರಿಕೆ ನೀಡಿದ್ದಾರೆ. ನಿನ್ನೆ ರಾತ್ರಿಯೂ ಕೌನ್ಸಿಲರ್ ಹರೀಶ್ ಸ್ಥಳಕ್ಕೆ ಬಂದು ಚರಂಡಿ ದಾಟಲು ಹಾಕಿದ್ದ ಸೆಂಟ್ರಿಗ್ ಹಲಗೆಗಳನ್ನು ಕೊಂಡೊಯ್ದಿದ್ದು ಮನೆ ಮಂದಿ ಕುರ್ಚಿ, ಸ್ಟೂಲ್, ಏಣಿಗಳನ್ನು ಇಟ್ಟು ಚರಂಡಿ ದಾಟುವ ಸ್ಥಿತಿಯಾಗಿದೆ.
Mangalore Kotekaru residents in trouble after Panchyath digs canal attached to homes at Sainagar. Old aged are feeling much difficult as there is no passage or way to get out of the house. Many have used ladder as passage.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm