ಬ್ರೇಕಿಂಗ್ ನ್ಯೂಸ್
20-06-23 11:30 am Mangalore Correspondent ಕರಾವಳಿ
ಬೆಳ್ತಂಗಡಿ, ಜೂನ್ 20: ಚಾಕೊಲೇಟ್ ಕೊಡಿಸಿಲ್ಲವೆಂದು ತಂದೆಯ ಮೇಲೆ ಸಿಟ್ಟಾದ ಬಾಲಕಿಯರಿಬ್ಬರು ಮನೆ ತೊರೆದು ಸರ್ಕಾರಿ ಬಸ್ಸಿನ ಉಚಿತ ಪ್ರಯಾಣದ ಲಾಭ ಪಡೆದು ಧರ್ಮಸ್ಥಳಕ್ಕೆ ತೆರಳಿದ ಪ್ರಸಂಗ ನಡೆದಿದ್ದು ಮೊಬೈಲ್ ನೆಟ್ವರ್ಕ್ ಆಧರಿಸಿ ಕೋಣನಕುಂಟೆ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿದ್ದಾರೆ.
ಕೋಣನಕುಂಟೆ ಠಾಣೆ ವ್ಯಾಪ್ತಿಯ 9 ಹಾಗೂ 11 ವರ್ಷ ವಯಸ್ಸಿನ ಅಕ್ಕ–ತಂಗಿ ಬಾಲಕಿಯರು, ಚಾಕಲೇಟ್ ಖರೀದಿಸುವುದಕ್ಕಾಗಿ ತಂದೆ ಬಳಿ ಹಣ ಕೇಳಿದ್ದರು. ಹಣ ನೀಡದ ತಂದೆ, ಚಾಕೊಲೇಟ್ ತಿನ್ನದಂತೆ ತಾಕೀತು ಮಾಡಿದ್ದರು. ಇದರಿಂದ ಸಿಟ್ಟಿನಲ್ಲಿದ್ದ ಬಾಲಕಿಯರು, ಬೇರೆಯವರ ಬಳಿ ಹಣ ಪಡೆದು ಚಾಕೊಲೇಟ್ ಖರೀದಿಸಿ ತಿಂದಿದ್ದರು. ಬಳಿಕ ತಾವು ಚಾಕೊಲೇಟ್ ತಿಂದಿದ್ದನ್ನು ತಂದೆಗೆ ತಿಳಿಸಿದ್ದರು. ಕೋಪಗೊಂಡ ತಂದೆ, ಮತ್ತಷ್ಟು ಬೈದಿದ್ದರು ಎನ್ನಲಾಗಿದೆ. ಇದರಿಂದ ನೊಂದ ಬಾಲಕಿಯರು, ಮನೆ ಬಿಟ್ಟು ಹೋಗಿದ್ದರು.
ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣವೆಂಬುದನ್ನು ತಿಳಿದಿದ್ದ ಬಾಲಕಿಯರು, ಮನೆಯಿಂದ ಬರುವಾಗಲೇ ತಮ್ಮ ಗುರುತಿನ ಚೀಟಿ ಸಮೇತ ಜೂನ್ 16ರಂದು ರಾತ್ರಿ ಮೆಜೆಸ್ಟಿಕ್ ನಿಲ್ದಾಣಕ್ಕೆ ತೆರಳಿದ್ದರು. ಅಲ್ಲಿಂದ ಕೆಎಸ್ಆರ್ಟಿಸಿ ಬಸ್ ಹತ್ತಿ ಧರ್ಮಸ್ಥಳಕ್ಕೆ ತೆರಳಿದ್ದರು. ತಮ್ಮಲ್ಲಿದ್ದ ಮೊಬೈಲನ್ನೂ ಎತ್ತಿಕೊಂಡು ಹೋಗಿದ್ದರು. ಇತ್ತ ಮಕ್ಕಳು ಮನೆಗೆ ಬಾರದಿದ್ದರಿಂದ ಗಾಬರಿಗೊಂಡ ಪೋಷಕರು ಕೋಣನಕುಂಟೆ ಠಾಣೆಗೆ ದೂರು ನೀಡಿದ್ದರು.
ಬಾಲಕಿಯರ ಬಳಿಯಿದ್ದ ಮೊಬೈಲ್ ನೆಟ್ವರ್ಕ್ ಆಧರಿಸಿ ತನಿಖೆ ನಡೆಸಿದಾಗ, ಧರ್ಮಸ್ಥಳದಲ್ಲಿರುವ ಮಾಹಿತಿ ಲಭ್ಯವಾಗಿತ್ತು. ಪೊಲೀಸರ ತಂಡ ನೇರವಾಗಿ ಧರ್ಮಸ್ಥಳಕ್ಕೆ ಬಂದು ಬಾಲಕಿಯರನ್ನು ವಶಕ್ಕೆ ಪಡೆದಿದ್ದು ಬೆಂಗಳೂರಿಗೆ ಕರೆತಂದು ಪೋಷಕರಿಗೆ ಒಪ್ಪಿಸಿದೆ.
Angry over father not buying chocolate, sisters travel by free KSRTC bus to Dharmasthala from Belthangady, police trace them by location.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm