ಬ್ರೇಕಿಂಗ್ ನ್ಯೂಸ್
20-06-23 11:30 am Mangalore Correspondent ಕರಾವಳಿ
ಬೆಳ್ತಂಗಡಿ, ಜೂನ್ 20: ಚಾಕೊಲೇಟ್ ಕೊಡಿಸಿಲ್ಲವೆಂದು ತಂದೆಯ ಮೇಲೆ ಸಿಟ್ಟಾದ ಬಾಲಕಿಯರಿಬ್ಬರು ಮನೆ ತೊರೆದು ಸರ್ಕಾರಿ ಬಸ್ಸಿನ ಉಚಿತ ಪ್ರಯಾಣದ ಲಾಭ ಪಡೆದು ಧರ್ಮಸ್ಥಳಕ್ಕೆ ತೆರಳಿದ ಪ್ರಸಂಗ ನಡೆದಿದ್ದು ಮೊಬೈಲ್ ನೆಟ್ವರ್ಕ್ ಆಧರಿಸಿ ಕೋಣನಕುಂಟೆ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿದ್ದಾರೆ.
ಕೋಣನಕುಂಟೆ ಠಾಣೆ ವ್ಯಾಪ್ತಿಯ 9 ಹಾಗೂ 11 ವರ್ಷ ವಯಸ್ಸಿನ ಅಕ್ಕ–ತಂಗಿ ಬಾಲಕಿಯರು, ಚಾಕಲೇಟ್ ಖರೀದಿಸುವುದಕ್ಕಾಗಿ ತಂದೆ ಬಳಿ ಹಣ ಕೇಳಿದ್ದರು. ಹಣ ನೀಡದ ತಂದೆ, ಚಾಕೊಲೇಟ್ ತಿನ್ನದಂತೆ ತಾಕೀತು ಮಾಡಿದ್ದರು. ಇದರಿಂದ ಸಿಟ್ಟಿನಲ್ಲಿದ್ದ ಬಾಲಕಿಯರು, ಬೇರೆಯವರ ಬಳಿ ಹಣ ಪಡೆದು ಚಾಕೊಲೇಟ್ ಖರೀದಿಸಿ ತಿಂದಿದ್ದರು. ಬಳಿಕ ತಾವು ಚಾಕೊಲೇಟ್ ತಿಂದಿದ್ದನ್ನು ತಂದೆಗೆ ತಿಳಿಸಿದ್ದರು. ಕೋಪಗೊಂಡ ತಂದೆ, ಮತ್ತಷ್ಟು ಬೈದಿದ್ದರು ಎನ್ನಲಾಗಿದೆ. ಇದರಿಂದ ನೊಂದ ಬಾಲಕಿಯರು, ಮನೆ ಬಿಟ್ಟು ಹೋಗಿದ್ದರು.
ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣವೆಂಬುದನ್ನು ತಿಳಿದಿದ್ದ ಬಾಲಕಿಯರು, ಮನೆಯಿಂದ ಬರುವಾಗಲೇ ತಮ್ಮ ಗುರುತಿನ ಚೀಟಿ ಸಮೇತ ಜೂನ್ 16ರಂದು ರಾತ್ರಿ ಮೆಜೆಸ್ಟಿಕ್ ನಿಲ್ದಾಣಕ್ಕೆ ತೆರಳಿದ್ದರು. ಅಲ್ಲಿಂದ ಕೆಎಸ್ಆರ್ಟಿಸಿ ಬಸ್ ಹತ್ತಿ ಧರ್ಮಸ್ಥಳಕ್ಕೆ ತೆರಳಿದ್ದರು. ತಮ್ಮಲ್ಲಿದ್ದ ಮೊಬೈಲನ್ನೂ ಎತ್ತಿಕೊಂಡು ಹೋಗಿದ್ದರು. ಇತ್ತ ಮಕ್ಕಳು ಮನೆಗೆ ಬಾರದಿದ್ದರಿಂದ ಗಾಬರಿಗೊಂಡ ಪೋಷಕರು ಕೋಣನಕುಂಟೆ ಠಾಣೆಗೆ ದೂರು ನೀಡಿದ್ದರು.
ಬಾಲಕಿಯರ ಬಳಿಯಿದ್ದ ಮೊಬೈಲ್ ನೆಟ್ವರ್ಕ್ ಆಧರಿಸಿ ತನಿಖೆ ನಡೆಸಿದಾಗ, ಧರ್ಮಸ್ಥಳದಲ್ಲಿರುವ ಮಾಹಿತಿ ಲಭ್ಯವಾಗಿತ್ತು. ಪೊಲೀಸರ ತಂಡ ನೇರವಾಗಿ ಧರ್ಮಸ್ಥಳಕ್ಕೆ ಬಂದು ಬಾಲಕಿಯರನ್ನು ವಶಕ್ಕೆ ಪಡೆದಿದ್ದು ಬೆಂಗಳೂರಿಗೆ ಕರೆತಂದು ಪೋಷಕರಿಗೆ ಒಪ್ಪಿಸಿದೆ.
Angry over father not buying chocolate, sisters travel by free KSRTC bus to Dharmasthala from Belthangady, police trace them by location.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm