ಬ್ರೇಕಿಂಗ್ ನ್ಯೂಸ್
20-06-23 07:51 pm Mangalore Correspondent ಕರಾವಳಿ
ಉಳ್ಳಾಲ, ಜೂನ್ 20: ಪ್ರವಾಸಿ ತಾಣವಾದ ಉಳ್ಳಾಲ ಬೀಚ್ ರಸ್ತೆಯಲ್ಲೇ ಕಳೆದ ಆರೇಳು ವರ್ಷಗಳಿಂದ ತ್ಯಾಜ್ಯ ವಿಲೇವಾರಿ ನಡೆಸಲಾಗುತ್ತಿದೆ. ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ತ್ಯಾಜ್ಯ ಶೇಖರಣೆಯಾಗಿ ನಾರುತ್ತಿದ್ದು ಸಿಟ್ಟಿಗೆದ್ದ ಸ್ಥಳೀಯರು ಪ್ರತಿಭಟನೆ ನಡೆಸಿ ತ್ಯಾಜ್ಯವನ್ನ ನಗರಸಭೆ ಕಚೇರಿ ಮುಂದೆ ಸುರಿಯಲು ಮುಂದಾಗಿದ್ದು, ಸ್ಥಳಕ್ಕೆ ಬಂದ ನಗರ ಪೌರಾಯುಕ್ತೆ ವಾಣಿ ಆಳ್ವ ಅವರು ಅರ್ಧ ಗಂಟೆಯಲ್ಲೇ ಮೂಗು ಮುಚ್ಚಿ ಓಡಿದ್ದಾರೆ.
ಉಳ್ಳಾಲ ಬೀಚ್ ರಸ್ತೆಯಲ್ಲಿ ಕಳೆದ ಆರೇಳು ವರುಷಗಳಿಂದಲೂ ನಗರ ವ್ಯಾಪ್ತಿಯ ತ್ಯಾಜ್ಯವನ್ನ ರಾಶಿ ಹಾಕಿ ವಿಲೇವಾರಿ ನಡೆಸಿ ಮಂಗಳೂರಿನ ವಾಮಂಜೂರು ಡಂಪಿಂಗ್ ಯಾರ್ಡ್ಗೆ ಕಳಿಸಲಾಗುತ್ತಿತ್ತು. ಆದರೆ ಉಳ್ಳಾಲ ನಗರಸಭೆ, ಮಂಗಳೂರು ಮಹಾನಗರ ಪಾಲಿಕೆಗೆ ಪಾವತಿಸಬೇಕಾದ ಸುಮಾರು 90 ಲಕ್ಷ ರೂಪಾಯಿ ಬಿಲ್ ಬಾಕಿ ಇರಿಸಿದ್ದು ಇದರಿಂದಾಗಿ ಆರು ತಿಂಗಳಿಂದ ಉಳ್ಳಾಲ ಬೀಚ್ ರಸ್ತೆ ಕಸದ ಕೊಂಪೆಯಾಗಿ ನಾರುತ್ತಿದೆ. ಇಂದು ಬೆಳಗ್ಗೆ ಸ್ಥಳದಲ್ಲಿ ಸ್ಥಳೀಯರು, ವಿವಿಧ ಸಂಘಟನೆಗಳ ಸದಸ್ಯರು ಜಮಾಯಿಸಿ ಪ್ರತಿಭಟನಾ ಅಂಗವಾಗಿ ಶೇಖರಣೆಗೊಂಡಿದ್ದ ತ್ಯಾಜ್ಯವನ್ನ ರಸ್ತೆಗೆಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜೆಸಿಬಿ ಮುಖಾಂತರ ತ್ಯಾಜ್ಯವನ್ನ ನಗರಸಭೆ ಕಚೇರಿಯೆದುರು ಸುರಿಯಲು ಮುಂದಾಗಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರನ್ನ ತಡೆದಿದ್ದಾರೆ.
ಸ್ಥಳಕ್ಕೆ ಎಂಟ್ರಿ ನೀಡಿದ ಉಳ್ಳಾಲ ನಗರಸಭಾ ಮಾಜಿ ಮತ್ತು ಪ್ರಭಾರಿ ಪೌರಾಯುಕ್ತೆ ವಾಣಿ ಆಳ್ವ ಅವರು ಪ್ರತಿಭಟನಾಕಾರರಲ್ಲಿ ನಾನೀಗ ಪ್ರಭಾರಿಯಾಗಿ ಬಂದು ನಾಲ್ಕೈದು ದಿನವಾಗಿದೆ. ತ್ಯಾಜ್ಯ ವಿಲೇವಾರಿಯ ಬಗ್ಗೆ ನಗರ ಸದಸ್ಯರು, ಅಧಿಕಾರಿಗಳಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆಂದು ಹೇಳಿದ್ದಾರೆ. ಈ ವೇಳೆ ಪ್ರತಿಭಟನಾಕಾರರು, ಹಿಂದೆ ನೀವು ಇಲ್ಲಿ ಅಧಿಕಾರದಲ್ಲಿದ್ದಾಗಲೇ ಇಲ್ಲಿ ಇದೇ ಸ್ಥಿತಿ ಇತ್ತೆಂದು ಹೇಳಿದ್ದಾರೆ. ಈ ವೇಳೆ ಸ್ಥಳೀಯ ನಿವಾಸಿ ಸೆಲ್ವಿ ಎಂಬವರು ತ್ಯಾಜ್ಯ ಶೇಖರಣೆಯಿಂದ ಕಲುಷಿತ ಗೊಂಡಿರುವ ತಮ್ಮ ಬಾವಿಯ ಮಲಿನ ನೀರನ್ನ ವಾಣಿ ಆಳ್ವ ಅವರಿಗೆ ಕುಡಿಯಲು ಕೊಟ್ಟಿದ್ದಾರೆ. ಕಲುಷಿತ ನೀರು ಮತ್ತು ತ್ಯಾಜ್ಯದ ಕೊಂಪೆಯ ದರ್ನಾತದಿಂದ ಮೂಗು ಮುಚ್ಕೊಂಡ ನಗರ ಪೌರಾಯುಕ್ತೆ ವಾಣಿ ಉಳ್ಳಾಲ ಇನ್ಸ್ ಪೆಕ್ಟರ್ ಅವರಲ್ಲಿ ಇಂಗ್ಲೀಷು ಮಾತನಾಡಿ ಅರ್ಧ ಗಂಟೆಯಲ್ಲೇ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಕಳೆದ ಹಲವಾರು ವರ್ಷಗಳಿಂದ ಉಳ್ಳಾಲದಾದ್ಯಂತ ಕಸ ವಿಲೇವಾರಿ ಸಮಸ್ಯೆ ಕಾಡುತ್ತಿದೆ. ಸ್ಥಳೀಯ ಶಾಸಕ ಯು.ಟಿ ಖಾದರ್ ಅವರು ರಾಜ್ಯದಲ್ಲಿ ವಿವಿಧ ಖಾತೆಗಳನ್ನ ಅಲಂಕರಿಸಿದರೂ ಕ್ಷೇತ್ರದ ತ್ಯಾಜ್ಯ ಸಮಸ್ಯೆಗೆ ಮುಕ್ತಿ ಕೊಡಲು ಅವರಿಂದ ಸಾಧ್ಯವಾಗಿಲ್ಲ. ನಾನು ಜಿಲ್ಲಾಧಿಕಾರಿಯವರಲ್ಲಿ ವಿಷಯ ಪ್ರಸ್ತಾಪಿಸಿದ್ದು ನಾಳೆ ಅವರು ಸ್ಥಳಕ್ಕೆ ಭೇಟಿ ಕೊಟ್ಟು ಸಭೆ ನಡೆಸಿ ಸಮಸ್ಯೆಗೆ ಪರಿಹಾರ ಕೊಡುವುದಾಗಿ ಹೇಳಿದ್ದಾರೆ. ಬೀಚ್ ರಸ್ತೆಯ ತ್ಯಾಜ್ಯದ ಕೊಂಪೆಗೆ ಪರಿಹಾರ ನೀಡದಿದ್ದಲ್ಲಿ ಉಗ್ರ ಪ್ರತಿಭಟನೆ ಅನಿವಾರ್ಯ ಎಂದು ಹೇಳಿದರು.
The residents of Ullal, who have been distressed by the presence of piles of trash near Ullal beach for several years, causing unbearable stench, contaminating the well water in the vicinity, and creating unhygienic living conditions for tourists and locals, have initiated protests by placing the trash on Ullal
29-06-25 03:04 pm
Bangalore Correspondent
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 02:26 pm
HK News Desk
Rape, Mangalore Crime, Someshwara Beach: ಇನ್ಸ...
28-06-25 07:30 pm
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm