ಬ್ರೇಕಿಂಗ್ ನ್ಯೂಸ್
21-06-23 05:13 pm Mangalore Correspondent ಕರಾವಳಿ
ಉಳ್ಳಾಲ, ಜೂ.21: ಕಳೆದ ನಾಲ್ಕೈದು ತಿಂಗಳಿಂದ ನಗರ ವ್ಯಾಪ್ತಿಯ ತ್ಯಾಜ್ಯವೆಲ್ಲವೂ ರಾಶಿ ಬಿದ್ದು ಕಸದ ಕೊಂಪೆಯಾಗಿದ್ದ ಉಳ್ಳಾಲ ಬೀಚ್ ರಸ್ತೆಯಲ್ಲಿ ನಿನ್ನೆ ಸ್ಥಳೀಯರು ಆಕ್ರೋಶಿತರಾಗಿ ತ್ಯಾಜ್ಯವನ್ನ ನಗರಸಭೆ ಕಚೇರಿ ಮುಂದೆ ಸುರಿಯಲು ಮುಂದಾದ ಹಿನ್ನಲೆಯಲ್ಲಿ ಎಚ್ಚೆತ್ತ ದಪ್ಪ ಚರ್ಮದ ನಗರಾಡಳಿತವು ಇಂದು ಸೂರ್ಯೋದಯದಿಂದಲೇ ಬೀಚ್ ರಸ್ತೆಯ ತ್ಯಾಜ್ಯವನ್ನು ಮಂಗಳೂರಿನ ಡಂಪಿಗ್ ಯಾರ್ಡ್ ಗೆ ಸಾಗಿಸುವ ಕಾಮಗಾರಿ ಕೈಗೆತ್ತಿಕೊಂಡಿದೆ.
ಕಳೆದ ಐದಾರು ವರ್ಷಗಳಿಂದ ಉಳ್ಳಾಲ ನಗರಸಭೆ ನಗರವಾಸಿಗಳಿಂದ ಸಂಗ್ರಹಗೊಂಡ ತ್ಯಾಜ್ಯವನ್ನ ಬೀಚ್ ರಸ್ತೆ ಬದಿಯಲ್ಲೇ ರಾಶಿ ಹಾಕಿ ವಿಂಗಡಿಸಿ ವಿಲೇವಾರಿ ನಡೆಸುತ್ತಿದೆ. ಇದರಿಂದ ಬೀಚ್ಗೆ ಬರುವ ಪ್ರವಾಸಿಗರು ಮೂಗು ಮುಚ್ಕೊಂಡು ವಿಹರಿಸೋ ಪರಿಸ್ಥಿತಿ ಬಂದಿದೆ. ಕಳೆದ ಐದಾರು ತಿಂಗಳಿಂದ ಇಲ್ಲಿ ರಾಶಿಗಟ್ಟಲೆ ತ್ಯಾಜ್ಯ ಸಂಗ್ರಹಗೊಂಡಿದ್ದು ಅದನ್ನ ವಿಂಗಡಿಸಿ ವಿಲೇವಾರಿ ನಡೆಸೋ ಕಾರ್ಯ ನಗರಸಭೆ ಆಡಳಿತ ಮಾಡಿಲ್ಲ. ತ್ಯಾಜ್ಯ ಶೇಖರಣೆಯಿಂದ ಸ್ಥಳೀಯರ ಬಾವಿಯ ನೀರು ಕಲುಷಿತಗೊಂಡಿದೆ.



ಆಕ್ರೋಶಿತ ಸ್ಥಳೀಯರು ಮಂಗಳವಾರ ತ್ಯಾಜ್ಯವನ್ನ ರಸ್ತೆಗೆಸೆದು ಪ್ರತಿಭಟಿಸಿದ್ದಲ್ಲದೆ, ನಗರಸಭೆ ಕಚೇರಿಗೂ ತ್ಯಾಜ್ಯ ಸುರಿಯಲು ಮುಂದಾಗಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ನಗರಸಭೆ ಪ್ರಭಾರಿ ಪೌರಾಯುಕ್ತೆ ವಾಣಿ ಆಳ್ವಗೆ ಪ್ರತಿಭಟನಾ ನಿರತ ಸೆಲ್ವಿ ಎಂಬ ಮಹಿಳೆ ಕಲುಷಿತಗೊಂಡಿರುವ ತನ್ನ ಬಾವಿಯ ನೀರನ್ನ ಕುಡಿಯುವಂತೆ ಹೇಳಿದ್ದರು. ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ವಾಣಿ ಆಳ್ವ ಸ್ಥಳದಿಂದ ತೆರಳಿದ್ದರು.



ಘಟನೆ ಕುರಿತಂತೆ ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಜಿಲ್ಲಾಧಿಕಾರಿಗೆ ದೂರಿತ್ತಿದ್ದು ಸಮಸ್ಯೆ ಸರಿಪಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ರಾಜ್ಯ ಮಟ್ಟದಲ್ಲಿ ಉಳ್ಳಾಲದ ಮಾನ ಹರಾಜಾಗುತ್ತಿದ್ದರೂ ಸುಮ್ಮನಿದ್ದ ನಗರಸಭೆಯ ಅಧಿಕಾರಿಗಳು ಇಂದು ಬೆಳಗ್ಗಿನಿಂದಲೇ ಹಿಟಾಚಿ ಯಂತ್ರದಿಂದ ತ್ಯಾಜ್ಯ ತೆರವು ಮಾಡಲು ಆರಂಭಿಸಿದ್ದಾರೆ.
Mangalore Garbage dump in Ullal beach road, cleaning process begins after protest from residents.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm