ಬ್ರೇಕಿಂಗ್ ನ್ಯೂಸ್
21-06-23 05:13 pm Mangalore Correspondent ಕರಾವಳಿ
ಉಳ್ಳಾಲ, ಜೂ.21: ಕಳೆದ ನಾಲ್ಕೈದು ತಿಂಗಳಿಂದ ನಗರ ವ್ಯಾಪ್ತಿಯ ತ್ಯಾಜ್ಯವೆಲ್ಲವೂ ರಾಶಿ ಬಿದ್ದು ಕಸದ ಕೊಂಪೆಯಾಗಿದ್ದ ಉಳ್ಳಾಲ ಬೀಚ್ ರಸ್ತೆಯಲ್ಲಿ ನಿನ್ನೆ ಸ್ಥಳೀಯರು ಆಕ್ರೋಶಿತರಾಗಿ ತ್ಯಾಜ್ಯವನ್ನ ನಗರಸಭೆ ಕಚೇರಿ ಮುಂದೆ ಸುರಿಯಲು ಮುಂದಾದ ಹಿನ್ನಲೆಯಲ್ಲಿ ಎಚ್ಚೆತ್ತ ದಪ್ಪ ಚರ್ಮದ ನಗರಾಡಳಿತವು ಇಂದು ಸೂರ್ಯೋದಯದಿಂದಲೇ ಬೀಚ್ ರಸ್ತೆಯ ತ್ಯಾಜ್ಯವನ್ನು ಮಂಗಳೂರಿನ ಡಂಪಿಗ್ ಯಾರ್ಡ್ ಗೆ ಸಾಗಿಸುವ ಕಾಮಗಾರಿ ಕೈಗೆತ್ತಿಕೊಂಡಿದೆ.
ಕಳೆದ ಐದಾರು ವರ್ಷಗಳಿಂದ ಉಳ್ಳಾಲ ನಗರಸಭೆ ನಗರವಾಸಿಗಳಿಂದ ಸಂಗ್ರಹಗೊಂಡ ತ್ಯಾಜ್ಯವನ್ನ ಬೀಚ್ ರಸ್ತೆ ಬದಿಯಲ್ಲೇ ರಾಶಿ ಹಾಕಿ ವಿಂಗಡಿಸಿ ವಿಲೇವಾರಿ ನಡೆಸುತ್ತಿದೆ. ಇದರಿಂದ ಬೀಚ್ಗೆ ಬರುವ ಪ್ರವಾಸಿಗರು ಮೂಗು ಮುಚ್ಕೊಂಡು ವಿಹರಿಸೋ ಪರಿಸ್ಥಿತಿ ಬಂದಿದೆ. ಕಳೆದ ಐದಾರು ತಿಂಗಳಿಂದ ಇಲ್ಲಿ ರಾಶಿಗಟ್ಟಲೆ ತ್ಯಾಜ್ಯ ಸಂಗ್ರಹಗೊಂಡಿದ್ದು ಅದನ್ನ ವಿಂಗಡಿಸಿ ವಿಲೇವಾರಿ ನಡೆಸೋ ಕಾರ್ಯ ನಗರಸಭೆ ಆಡಳಿತ ಮಾಡಿಲ್ಲ. ತ್ಯಾಜ್ಯ ಶೇಖರಣೆಯಿಂದ ಸ್ಥಳೀಯರ ಬಾವಿಯ ನೀರು ಕಲುಷಿತಗೊಂಡಿದೆ.



ಆಕ್ರೋಶಿತ ಸ್ಥಳೀಯರು ಮಂಗಳವಾರ ತ್ಯಾಜ್ಯವನ್ನ ರಸ್ತೆಗೆಸೆದು ಪ್ರತಿಭಟಿಸಿದ್ದಲ್ಲದೆ, ನಗರಸಭೆ ಕಚೇರಿಗೂ ತ್ಯಾಜ್ಯ ಸುರಿಯಲು ಮುಂದಾಗಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ನಗರಸಭೆ ಪ್ರಭಾರಿ ಪೌರಾಯುಕ್ತೆ ವಾಣಿ ಆಳ್ವಗೆ ಪ್ರತಿಭಟನಾ ನಿರತ ಸೆಲ್ವಿ ಎಂಬ ಮಹಿಳೆ ಕಲುಷಿತಗೊಂಡಿರುವ ತನ್ನ ಬಾವಿಯ ನೀರನ್ನ ಕುಡಿಯುವಂತೆ ಹೇಳಿದ್ದರು. ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ವಾಣಿ ಆಳ್ವ ಸ್ಥಳದಿಂದ ತೆರಳಿದ್ದರು.



ಘಟನೆ ಕುರಿತಂತೆ ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಜಿಲ್ಲಾಧಿಕಾರಿಗೆ ದೂರಿತ್ತಿದ್ದು ಸಮಸ್ಯೆ ಸರಿಪಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ರಾಜ್ಯ ಮಟ್ಟದಲ್ಲಿ ಉಳ್ಳಾಲದ ಮಾನ ಹರಾಜಾಗುತ್ತಿದ್ದರೂ ಸುಮ್ಮನಿದ್ದ ನಗರಸಭೆಯ ಅಧಿಕಾರಿಗಳು ಇಂದು ಬೆಳಗ್ಗಿನಿಂದಲೇ ಹಿಟಾಚಿ ಯಂತ್ರದಿಂದ ತ್ಯಾಜ್ಯ ತೆರವು ಮಾಡಲು ಆರಂಭಿಸಿದ್ದಾರೆ.
Mangalore Garbage dump in Ullal beach road, cleaning process begins after protest from residents.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm