ಬ್ರೇಕಿಂಗ್ ನ್ಯೂಸ್
21-06-23 08:57 pm Mangalore Correspondent ಕರಾವಳಿ
ಮಂಗಳೂರು, ಜೂನ್ 21: ರಸ್ತೆಗೆ ಅಡ್ಡ ಬಂದಿದ್ದ ಮಹಿಳೆಯನ್ನು ತನ್ನ ಚಾಕಚಕ್ಯತೆಯಿಂದ ಬಸ್ಸನ್ನು ಬದಿಗೆ ಸರಿಸಿ ನಿಲ್ಲಿಸಿದ ಚಾಲಕನ ವಿರುದ್ಧ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಡಿಪು ಭಾಗದಿಂದ ತೌಡುಗೋಳಿ ಕ್ರಾಸ್ ಮೂಲಕ ಮಂಗಳೂರು ತೆರಳುತ್ತಿದ್ದ ಗೋಪಾಲಕೃಷ್ಣ ಹೆಸರಿನ ಖಾಸಗಿ ಬಸ್ ಜೂನ್ 20ರಂದು ಮಧ್ಯಾಹ್ನ ಬರುತ್ತಿದ್ದಾಗ ಮಹಿಳೆ ಅಡ್ಡ ಬಂದ ಘಟನೆ ನಡೆದಿತ್ತು. ತೌಡುಗೋಳಿ ಕ್ರಾಸ್ ನಲ್ಲಿ ಮಹಿಳೆ ಅಡ್ಡ ಬಂದಿದ್ದು ಕೂಡಲೇ ಗಮನಿಸಿದ ಚಾಲಕ ನಾಗರಾಜ್ ಬಸ್ಸನ್ನು ಬದಿಗೆ ಸರಿಸಿ ನಿಲ್ಲಿಸಿದ್ದರು. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ನಾಗರಾಜ್ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.


ವಿಡಿಯೋದಲ್ಲಿ ಬಸ್ ವೇಗವಾಗಿ ಬರುತ್ತಿರುವುದು ದಾಖಲಾಗಿದ್ದು, ಅದನ್ನು ಅನುಸರಿಸಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯೆಂದು ಹೇಳಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಅಲ್ಲದೆ, ಆ ಬಸ್ಸನ್ನು ಸೀಜ್ ಮಾಡಿ ಠಾಣೆಗೆ ತಂದು ಇರಿಸಿದ್ದಾರೆ. ಚಾಲಕನ ವಿರುದ್ಧ ಸೆಕ್ಷನ್ 279, 336 ಐಪಿಸಿ ಜೊತೆಗೆ ಮೋಟಾರು ವಾಹನ ಕಾಯ್ದೆ 211-2 ಪ್ರಕಾರ ಕೇಸು ದಾಖಲಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ನಿರ್ಲಕ್ಷ್ಯದಿಂದ ರಸ್ತೆ ದಾಟುತ್ತಿದ್ದ ಮಹಿಳೆಯ ಪ್ರಾಣ ಉಳಿದಿತ್ತು.
ಎದುರಿನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಅನುಸರಿಸಿ ಅಡ್ಡಲಾಗಿ ವಾಹನ ಬರುವುದನ್ನೂ ಲೆಕ್ಕಿಸದೆ ಮುಸ್ಲಿಂ ಮಹಿಳೆಯೊಬ್ಬರು ರಸ್ತೆ ದಾಟಲು ಮುಂದಾಗಿದ್ದರು. ಇದೇ ವೇಳೆ ಬಸ್ ಬಂದಿದ್ದು, ಹಠಾತ್ ಬ್ರೇಕ್ ಹಾಕಿ ಬದಿಗೆ ಸರಿಸಿದ್ದರಿಂದ ಮಹಿಳೆ ಕೂದಲೆಳೆಯಲ್ಲಿ ಬಚಾವ್ ಆಗಿದ್ದರು. ಇದೀಗ ಚಾಲಕನ ವಿರುದ್ಧವೇ ಪೊಲೀಸರು ಕೇಸು ದಾಖಲಿಸಿ ಖಾಸಗಿ ಬಸ್ಗಳ ಧಾವಂತಕ್ಕೆ ಪಾಠ ಕಲಿಸಲು ಮುಂದಾಗಿದ್ದಾರೆ. ಒಳರಸ್ತೆಯಲ್ಲಿ ಸಾಗುವ ಸಂದರ್ಭದಲ್ಲಿ ದುಡುಕುತನ ಮತ್ತು ವೇಗದ ಚಾಲನೆ ಮಾಡಬಾರದು ಎಂದು ಸೂಚನೆ ನೀಡಿದ್ದಾರೆ.
Police file case against bus that saved womans life while crossing road at Naringana in Mangalore for rash driving.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm